ತಂತ್ರಜ್ಞಾನ ದೈತ್ಯ ಗೂಗಲ್ ಮೇಲೆ ಭಾರಿ ಮೊತ್ತದ ದಂಡ
ನ್ಯೂಯಾರ್ಕ್, ಜುಲೈ 18: ಯುಎಸ್ ಮೂಲದ ತಂತ್ರಜ್ಞಾನ ದೈತ್ಯ ಗೂಗಲ್ ಸಂಸ್ಥೆ ಮೇಲೆ ಭಾರಿ ಮೊತ್ತದ ದಂಡವನ್ನು ಯುರೋಪಿಯನ್ ನಿಯಂತ್ರಕರು ಹೇರಿದ್ದಾರೆ. ಆಂಡ್ರಾಯ್ಡ್ ಮೊಬೈಲ್ ಫೋನ್ ಗಳಲ್ಲಿ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ ಅಳವಡಿಸುವಂತೆ ಒತ್ತಡ ಹೇರಿದ್ದರಿಂದ ದಂಡ ತೆರಬೇಕಾಗಿದೆ.
ಗೂಗಲ್ ತನ್ನ ಸರ್ಚ್ ಇಂಜಿನ್, ಆಪರೇಟಿಂಗ್ ಸಿಸ್ಟಮ್ ಹಾಗೂ ಇನ್ನಿತರ ಅಪ್ಲಿಕೇಷನ್ ಗಳನ್ನು ಮೊಬೈಲ್ ಫೋನ್ ಗಳಲ್ಲಿ ಬಲವಂತವಾಗಿ ಅಳವಡಿಸುವಂತೆ ಮಾಡಿರುವ ಆರೋಪ ಹೊತ್ತಿದೆ. ಇದಕ್ಕಾಗಿ ಐರೋಪ್ಯ ಒಕ್ಕೂಟವು 4.34 ಬಿಲಿಯನ್ ಯುರೋಸ್ (ಸುಮಾರು 34,257 ಕೋಟಿ ರೂಪಾಯಿ) ಮೊತ್ತದ ಭಾರಿ ದಂಡ ವಿಧಿಸಿದೆ.

ಆಂಡ್ರಾಯ್ಡ್ ಮೊಬೈಲ್ ಫೋನ್ಗಳಲ್ಲಿ ಶೋಧ ಮತ್ತು ವೆಬ್ ಬ್ರೌಸರ್ ಆಪ್ಗಳನ್ನು ಅಳವಡಿಸುವ ರೀತಿಯನ್ನು ಬದಲಾಯಿಸುವಂತೆ ಅದು ಗೂಗಲ್ಗೆ ಆದೇಶ ನೀಡಿದೆ.
ಮೊಬೈಲ್ ಬಳಕೆದಾರರಿಗೆ ಗೂಗಲ್ ಉತ್ಪನ್ನಗಳನ್ನು ತಲುಪಿಸುವುದಕ್ಕಾಗಿ ಮೊಬೈಲ್ ಫೋನ್ ತಯಾರಿಕಾ ಕಂಪೆನಿಗಳೊಂದಿಗೆ 'ಅಕ್ರಮ ಒಪ್ಪಂದ'ಗಳನ್ನು ಮಾಡಿಕೊಳ್ಳುವುದನ್ನು ನಿಲ್ಲಿಸಲು ಐರೋಪ್ಯ ಒಕ್ಕೂಟ 90 ದಿನಗಳನ್ನು ಗೂಗಲ್ಗೆ ನೀಡಿದೆ.
ಇದು ಗೂಗಲ್ ಪಾಲಿಗೆ ದೊಡ್ಡ ಮೊತ್ತವಲ್ಲದಿದ್ದರೂ, ಮಾರುಕಟ್ಟೆಯಲ್ಲಿ ಸಂಸ್ಥೆಯ ಘನತೆಗೆ ಧಕ್ಕೆ ತಂದಿದೆ. ಯೂಟ್ಯೂಬ್, ಮ್ಯಾಪ್ಸ್, ಜಿಮೇಲ್ ,ಗೂಗಲ್ ಸರ್ಚ್, ಕ್ರೋಮ್ ಬ್ರೌಸರ್ ಹಾಗೂ ಆಪ್ ಸ್ಟೋರ್ ಪ್ಲೇಸ್ಟೋರ್ ಅಳವಡಿಸಲು ಬಲವಂತವಾಗಿ ಮೊಬೈಲ್ ಸಂಸ್ಥೆಗಳ ಮೇಲೆ ಒತ್ತಡ ಹೇರಲಾಗಿದೆ ಎಂದು ಮೂರು ವರ್ಷಗಳ ತನಿಖೆ ಬಳಿಕ ತಿಳಿದು ಬಂದಿದೆ.
ಈ ವರ್ಷದ ಮೊದಲ ಮೂರು ತಿಂಗಳಿನಲ್ಲಿ ಗೂಗಲ್ ನ ಆಲ್ಪಬೆಟ್ 12.7 ಬಿಲಿಯನ್ ಡಾಲರ್ ಲಾಭ ಗಳಿಸಿದೆ. 102.9 ಬಿಲಿಯನ್ ಡಾಲರ್ ನಗದು ಆದಾಯ ಹೊಂದಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications