ಮಾಸ್ಕ್ ಧರಿಸಿ, ಜೀವ ಉಳಿಸಿ: ಗೂಗಲ್ ಡೂಡಲ್ ಮನವಿ
ನವದೆಹಲಿ, ಏಪ್ರಿಲ್ 6: ದೇಶಾದ್ಯಂತ ಕೊರೊನಾ ವೈರಸ್ ಪ್ರಕರಣಗಳಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿರುವುದರಿಂದ ಮಾಸ್ಕ್ ಧರಿಸುವುದು, ಕೈಗಳನ್ನು ತೊಳೆಯುವುದು ಮತ್ತು ಸಾಮಾಜಿಕ ಅಂತರರ ಕಾಪಾಡಿಕೊಳ್ಳುವುದರ ಮಹತ್ವವನ್ನು ಸಾರುವ ವಿಚಾರವನ್ನು ಗೂಗಲ್ ತನ್ನ ಹೊಸ ಡೂಡಲ್ ಮೂಲಕ ನೀಡಿದೆ.
ಪ್ರತಿ ವಿಶೇಷ ದಿನ, ಸಂದರ್ಭಗಳಲ್ಲಿ ಗೂಗಲ್ ವಿಶಿಷ್ಟ ರೀತಿಯ ಡೂಡಲ್ ಸಂದೇಶಗಳನ್ನು ನೀಡುತ್ತದೆ. ಮಂಗಳವಾರ ಗೂಗಲ್ ಡೂಡಲ್ನ ಅನಿಮೇಷನ್ ವಿಡಿಯೋ ಗಮನ ಸೆಳೆಯುವಂತಿದೆ. ಇಲ್ಲಿ 'ಗೂಗಲ್'ನ ಎಲ್ಲ ಅಕ್ಷರಗಳೂ ಮಾಸ್ಕ್ ಧರಿಸಿಕೊಂಡಿವೆ. ಎಲ್ ಅಕ್ಷರವು ಲಸಿಕೆ ಸಿರಿಂಜ್ ಆಕಾರ ತಳೆದಿದೆ.
ಡೂಡಲ್ನ ಮೇಲೆ ಮೌಸ್ ಕರ್ಸರ್ ಇರಿಸಿದರೆ, 'ಮಾಸ್ಕ್ಗಳು ಈಗಲೂ ಬಹಳ ಮುಖ್ಯ. ಮಾಸ್ಕ್ ಧರಿಸಿ ಜೀವಗಳನ್ನು ಉಳಿಸಿ' ಎಂಬ ಸಂದೇಶ ಮೂಡುತ್ತದೆ. ಡೂಡಲ್ ಮೇಲೆ ಕ್ಲಿಕ್ ಮಾಡಿದರೆ ಅದು ಕೋವಿಡ್ ತಡೆಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ವಿವರಗಳಿರುವ ಪುಟವನ್ನು ತೆರೆಯುತ್ತದೆ.

ಈ ಪುಟ ಕೂಡ ಕೊರೊನಾ ವೈರಸ್ ತಡೆಗೆ ಅನುಸರಿಸುವ ಕ್ರಮಗಳನ್ನು ತಿಳಿಸುತ್ತದೆ. 'ಆಗಾಗ್ಗೆ ನಿಮ್ಮ ಕೈಗಳನ್ನು ತೊಳೆದುಕೊಳ್ಳಿ. ಸೋಪ್ ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್ ಬಳಸಿ. ಕೆಮ್ಮುವ ಅಥವಾ ಸೀನುವ ವ್ಯಕ್ತಿಯಿಂದ ಸುರಕ್ಷಿತ ಅಂತರ ಕಾಪಾಡಿಕೊಳ್ಳಿ. ದೈಹಿಕ ಅಂತರ ಸಾಧ್ಯವಾಗದ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ನಿಮ್ಮ ಕಣ್ಣು, ಮೂಗು ಹಾಗೂ ಬಾಯನ್ನು ಮುಟ್ಟಿಕೊಳ್ಳಬೇಡಿ. ಸೀನುವಾಗ ಅಥವಾ ಕೆಮ್ಮುವಾಗ ಮೊಣಕೈ ಅಥವಾ ಟಿಶ್ಯೂವಿನಿಂದ ಮೂಗು ಮತ್ತು ಬಾಯನ್ನು ಮುಚ್ಚಿಕೊಳ್ಳಿ ಎಂದು ಸಲಹೆ ನೀಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications