ಇಪಿಎಫ್ ಮೇಲಿನ ಬಡ್ಡಿ ಕಡಿತಕ್ಕೆ ಸರ್ಕಾರ ಅನುಮೋದನೆ
ನವದೆಹಲಿ, ಜೂನ್ 3: 2021-22ನೇ ಹಣಕಾಸು ವರ್ಷದಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಶುಕ್ರವಾರ ಅನುಮೋದನೆ ನೀಡಿದೆ.
ಸರ್ಕಾರದ ಅನುಮೋದನೆಯಿಂದ ಇಪಿಎಫ್ ಮೇಲಿನ ಬಡ್ಡಿದರವನ್ನು 40 ವರ್ಷಗಳ ಕನಿಷ್ಟ 8.1 % ಪ್ರತಿಶತಕ್ಕೆ ಕಡಿಮೆಯಾಗಲಿದೆ.
40 ವರ್ಷಗಳಲ್ಲಿ ಅತ್ಯಂತ ಕಡಿಮೆ: FY22 ಗಾಗಿ ಇಪಿಎಫ್ ಬಡ್ಡಿ ದರವನ್ನು 8.1% ಕ್ಕೆ ಇಳಿಸಲು ಸರ್ಕಾರ ಅನುಮೋದನೆ ನೀಡಿದೆ. 1977-78ರಲ್ಲಿ ಇಪಿಎಫ್ ಮೇಲಿನ ಬಡ್ಡಿದರ 8% ಇದ್ದಿದ್ದು ಕನಿಷ್ಟವಾಗಿತ್ತು.

2022ರ ಮಾರ್ಚ್ನಲ್ಲಿ, ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ತನ್ನ 6.4 ಕೋಟಿ ಚಂದಾದಾರರಿಗೆ ನಿವೃತ್ತಿ ಉಳಿತಾಯದ ಮೇಲಿನ ಬಡ್ಡಿ ದರವನ್ನು ಶೇಕಡಾ 8.5 ರಿಂದ 8.1 ಕ್ಕೆ ಇಳಿಸಲು ಪ್ರಸ್ತಾಪಿಸಿತ್ತು.
ಉಕ್ರೇನ್ ಯುದ್ಧ ಮತ್ತು ಯುಎಸ್ ಮತ್ತು ಇತರ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ವಿತ್ತೀಯ ನೀತಿ ಬಿಗಿಗೊಳಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಇತ್ತೀಚಿನ ವಾರಗಳಲ್ಲಿ ಹೊಡೆತವನ್ನು ಪಡೆದಿರುವ ಷೇರು ಮಾರುಕಟ್ಟೆಗಳ ಕಾರಣದಿಂದಾಗಿ ಬಡ್ಡಿ ಪಾವತಿಗಳು ಹೆಚ್ಚಿವೆ ಎಂದು ಸರ್ಕಾರ ಹೇಳಿತ್ತು.
ಮಾರ್ಚ್ 2020 ರಲ್ಲಿ, ಇಪಿಎಫ್ಒ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು 2018-19 ರಲ್ಲಿ ಶೇಕಡಾ 8.65 ರಿಂದ 2019-20 ಕ್ಕೆ ಏಳು ವರ್ಷಗಳ ಕನಿಷ್ಠ ಶೇಕಡಾ 8.5 ಕ್ಕೆ ಇಳಿಸಿತ್ತು.

2016-17ರಲ್ಲಿ ತನ್ನ 5 ಕೋಟಿ ಚಂದಾದಾರರಿಗೆ 8.65% ಮತ್ತು 2017-18ರಲ್ಲಿ 8.55% ಬಡ್ಡಿಯನ್ನು ನೀಡಿದೆ. 2015-16ರಲ್ಲಿ ಬಡ್ಡಿ ದರವು ಶೇಕಡ 8.8 ರಷ್ಟಿತ್ತು.
ಮಾರ್ಚ್ನಲ್ಲಿ ಗುವಾಹಟಿಯಲ್ಲಿ ನಡೆದ ಇಪಿಎಫ್ಒ ಕೇಂದ್ರೀಯ ಮಂಡಳಿಯ ಟ್ರಸ್ಟಿಗಳ ಸಭೆಯಲ್ಲಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ಅಪೆಕ್ಸ್ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆ ಕೇಂದ್ರೀಯ ಟ್ರಸ್ಟಿಗಳ ಮಂಡಳಿಯು, ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ತನ್ನ 6.4 ಕೋಟಿ ಚಂದಾದಾರರಿಗೆ ನಿವೃತ್ತಿ ಉಳಿತಾಯದ ಮೇಲಿನ ಬಡ್ಡಿ ದರವನ್ನು ಶೇಕಡಾ 8.5 ರಿಂದ 8.1 ಕ್ಕೆ ಇಳಿಸಲು ಪ್ರಸ್ತಾಪಿಸಿತ್ತು.
ಹಣಕಾಸು ಸಚಿವಾಲಯವು ಮಂಡಳಿಯ ನಿರ್ಧಾರವನ್ನು ಅನುಮೋದಿಸಿದ್ದು. ಇಪಿಎಫ್ಒ ತನ್ನ ಕ್ಷೇತ್ರ ಕಚೇರಿಗಳಿಗೆ 2021-22 ರ ಹೊಸ ದರದಲ್ಲಿ 8.1 ಶೇಕಡಾ ಬಡ್ಡಿ ಆದಾಯವನ್ನು ಚಂದಾದಾರರ ಖಾತೆಗಳಿಗೆ ಹಾಕಲು ನಿರ್ದೇಶನ ನೀಡಲಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications