ಉದ್ಯೋಗಿಗಳಿಗೆ ಸಿಹಿ ಸುದ್ದಿ, ಗ್ರಾಚ್ಯುಟಿ ಅವಧಿ ಇಳಿಕೆ ಸಾಧ್ಯತೆ!
ನವದೆಹಲಿ, ನವೆಂಬರ್ 13: ಗ್ರಾಚ್ಯುಟಿ ಹಣ ಪಡೆಯುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿಯೊಂದು ಸಿಗುವ ಸಾಧ್ಯತೆಯಿದೆ. ಗ್ರಾಚ್ಯುಟಿ ಮೊತ್ತ ಪಡೆಯಲು ಇದ್ದ ಅವಧಿಯನ್ನು 5 ರಿಂದ 3 ವರ್ಷಕ್ಕೆ ಇಳಿಕೆ ಮಾಡುವ ಸಾಧ್ಯತೆ ಕಂಡು ಬಂದಿದೆ.
ಗ್ರಾಚ್ಯುಟಿ ತಿದ್ದುಪಡಿ ಮಸೂದೆ 2017ಯನ್ನು ಅಂಗೀಕಾರ ಮಾಡಿದ್ದರಿಂದ ಉದ್ಯೋಗಿಗಳಿಗೆ 20 ಲಕ್ಷ ರೂ.ವರೆಗೂ ತೆರಿಗೆ ಮುಕ್ತ ಗ್ರಾಚ್ಯುಟಿ ಪಡೆಯುವ ಅವಕಾಶವನ್ನು ಮಾರ್ಚ್ ತಿಂಗಳಿನಿಂದ ಕೇಂದ್ರ ಸರ್ಕಾರ ಒದಗಿಸಿತ್ತು. ಈಗ ಗ್ರಾಚ್ಯುಟಿ ಅವಧಿಯನ್ನು ತಗ್ಗಿಸುವ ಬಗ್ಗೆ ಚಿಂತನೆ ನಡೆದಿದೆ.
ಗ್ರಾಚ್ಯುಟಿ ಎಂದರೇನು? ಗ್ರಾಚ್ಯುಟಿ ಲೆಕ್ಕ ಹಾಕುವುದು ಹೇಗೆ?
ಹಣ ಪಡೆಯಲು ಈವರೆಗೆ ಇದ್ದ ಕನಿಷ್ಠ ಐದು ವರ್ಷಗಳ ಸೇವಾವಧಿಯನ್ನು ಮೂರು ವರ್ಷಗಳಿಗೆ ಇಳಿಸಲು ಚಿಂತನೆ ನಡೆಸಿದ್ದು, ಇದರಿಂದ ಲಕ್ಷಾಂತರ ನೌಕರರಿಗೆ ಪ್ರಯೋಜನವಾಗಲಿದೆ.
1972 ರ ಪೇಮೆಂಟ್ ಅಫ್ ಗ್ರಾಚ್ಯುಯಿಟಿ ಕಾಯಿದೆಗೆ ತಿದ್ದುಪಡಿ ತರಲು ಕೇಂದ್ರ ಕಾರ್ಮಿಕ ಸಚಿವಾಲಯ ಮುಂದಾಗಿದ್ದು, ಈ ಕುರಿತು ಪರಿಣತರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ.

ಗುತ್ತಿಗೆ ನೌಕರರಿಗೆ ಸೌಲಭ್ಯ ಸಿಗುವುದೇ?
ನಿಶ್ಚಿತ ಅವಧಿಯ ಗುತ್ತಿಗೆ ನೌಕರರಿಗೆ ಗ್ರಾಚ್ಯುಟಿ ಸೌಲಭ್ಯ ಸಿಗಲಿದೆ. ಆದರೆ, ಇತರೆ ಅಲ್ಪಾವಧಿ ಗುತ್ತಿಗೆ ನೌಕರರಿಗೆ ಈ ಸೌಲಭ್ಯ ಸಿಗುವುದಿಲ್ಲ. ಆದರೆ, ಐದು ವರ್ಷ ಅವಧಿಯ ಉದ್ಯೋಗವನ್ನು ಪೂರ್ಣಗೊಳಿಸಿದ ನೌಕರರಿಗೆ ಗ್ರಾಚ್ಯುಟಿ ಪಾವತಿ ಕಾಯ್ದೆ 1972ರ ಅನ್ವಯ ಗ್ರಾಚ್ಯುಟಿ ಸಿಗಬೇಕಾಗುತ್ತದೆ.

ಎಲ್ಲಾ ಸ್ತರದ ಉದ್ಯೋಗಿಗೂ ಇದೆ ಸೌಲಭ್ಯ
ಗಣಿ, ತೈಲಕ್ಷೇತ್ರ, ಫ್ಯಾಕ್ಟರಿ, ಬಂದರು, ರೈಲ್ವೇ ಕಂಪನಿಗಳು ಮೊದಲಾದ ಕಡೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಅನುಕೂಲ ಒದಗಿಸಲು ಗ್ರಾಚುಟಿ ಪಾವತಿ ಕಾಯ್ದೆ 1972 ನ್ನು ಜಾರಿಗೆ ತರಲಾಗಿದೆ. ಗ್ರಾಚ್ಯುಟಿ ಅಧಿನಿಯಮ 1972ರ ಪ್ರಕಾರ ಉದ್ಯೋಗಿಯ ಹೆಸರು ಸೇರ್ಪಡೆಗೊಂಡಿದ್ದರೆ, ನಿಮ್ಮ ಔದ್ಯೋಗಿಕ ಅನುಭವದ ಜತೆ ಲೆಕ್ಕ ಹಾಕಿ ಗ್ರಾಚ್ಯುಟಿ ನೀಡಲಾಗುತ್ತದೆ.

ಗ್ರಾಚುಟಿ ಪಡೆದು ಉದ್ಯೋಗ ತೊರೆಯಬಹುದಾಗಿದೆ
ಉದ್ಯೋಗದಾತರಿಂದ ಉದ್ಯೋಗಿಗಳಿಗೆ ಸಿಗುವ ಕೊಡುಗೆಗಳಲ್ಲಿ ಗ್ರಾಚುಟಿ ಕೂಡಾ ಒಂದಾಗಿದೆ. ಗ್ರಾಚುಟಿ ಅಧಿನಿಯಮದ ಪ್ರಕಾರ ಉದ್ಯೋಗಿ ನಿವೃತ್ತಿ ಹೊಂದಿದ 1 ತಿಂಗಳ ಒಳಗಾಗಿ ಕಡ್ಡಾಯವಾಗಿ ಗ್ರಾಚ್ಯುಟಿ ಹಣವನ್ನು ಪಾವತಿಸಬೇಕಾಗುತ್ತದೆ. ಉದ್ಯೋಗಿ ತನ್ನ ವೃತ್ತಿ ಬದುಕಿನಲ್ಲಿ ಹಲವಾರು ಬಾರಿ ಉದ್ಯೋಗ ಬದಲಾಯಿಸಬೇಕಾಗುತ್ತದೆ. ಗ್ರಾಚುಟಿ ಪಡೆದು ಉದ್ಯೋಗ ತೊರೆಯಬಹುದಾಗಿದೆ.

ಕನಿಷ್ಟ 5 ವರ್ಷ ಕೆಲಸ ಮಾಡಿದಲ್ಲಿ ಗ್ರಾಚುಟಿ
ಕಾಯ್ದೆ ನಿಯಮದಂತೆ, 10 ಅಥವಾ ಅದಕ್ಕಿಂತ ಹೆಚ್ಚು ಮಂದಿ ಕೆಲಸ ಮಾಡುವ ಸಂಸ್ಥೆಗಳಲ್ಲಿನ ಕಾರ್ಮಿಕರು ಕನಿಷ್ಟ 5 ವರ್ಷ ಕೆಲಸ ಮಾಡಿದಲ್ಲಿ ಗ್ರಾಚುಟಿ ಪಡೆಯಲು ಅರ್ಹರಾಗಿರುತ್ತಾರೆ. ಸೇವೆಯನ್ನು ಮಾಡುವ ಪ್ರತಿ ವರ್ಷಕ್ಕೆ 15 ದಿನಗಳ ವೇತನವನ್ನು ಗ್ರಾಚುಟಿ ಎಂದು ಲೆಕ್ಕಹಾಕಲಾಗುವುದು. 2010 ರಲ್ಲಿ ಗ್ರಾಚುಟಿ ಗರಿಷ್ಟ ಮೊತ್ತವನ್ನು 10 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಈಗ ಈ ಮೊತ್ತ 20ಲಕ್ಷ ರು ಗೇರಿದೆ
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications