ಫೆಬ್ರವರಿ 28ರಿಂದ ಪ್ರತಿ ಬ್ಯಾಂಕ್ ಖಾತೆಗೂ ಪ್ಯಾನ್ ಕಾರ್ಡ್ ಕಡ್ಡಾಯ
ಫೆಬ್ರವರಿ 28ರಿಂದ ಎಲ್ಲಾ ಬಗೆಯ ಬ್ಯಾಂಕ್ ಖಾತೆಗಳಿಗೆ ಪ್ಯಾನ್ ಕಾರ್ಡ್ ಅಥವಾ ಫಾರ್ಮ್ 60 ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಬ್ಯಾಂಕುಗಳಿಗೆ ಸರ್ಕಾರ ಸೂಚಿಸಿದೆ.
ನವದೆಹಲಿ, ಜನವರಿ 28 : ತೆರಿಗೆ ವಂಚಕರ ಮೇಲೆ ಹಿಡಿತ ಸಾಧಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಮತ್ತೊಂದು ನಡೆ ಇಟ್ಟಿದೆ. ಫೆಬ್ರವರಿ 28ರಿಂದ ಎಲ್ಲಾ ಬಗೆಯ ಬ್ಯಾಂಕ್ ಖಾತೆಗಳಿಗೆ ಪ್ಯಾನ್ ಕಾರ್ಡ್ ಅಥವಾ ಫಾರ್ಮ್ 60 ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಬ್ಯಾಂಕುಗಳಿಗೆ ಸರ್ಕಾರ ಸೂಚಿಸಿದೆ.
ಈ ನಿಯಮ ಎಲ್ಲಾ ಬ್ಯಾಂಕ್ ಖಾತೆ, ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆದಾರರಿ ಗೂ ಅನ್ವಯವಾಗಲಿದೆ. ಸದ್ಯ ಪ್ಯಾನ್ ಕಾರ್ಡ್ ಇಲ್ಲದ ಗ್ರಾಹಕರು ಫಾರ್ಮ್ 60 ಭರ್ತಿ ಮಾಡುವಂತೆ ಸೂಚಿಸಲಾಗಿದೆ. [ಬ್ಯಾಂಕ್ ವ್ಯವಹಾರಗಳ ಮೇಲೆ ತೆರಿಗೆ ಇಲಾಖೆ ಕಣ್ಣು]

ಫೆಬ್ರವರಿ 28, 2017ರೊಳಗೆ ಎಲ್ಲಾ ಖಾತೆಗಳಿಗೂ ಪ್ಯಾನ್ ಕಡ್ಡಾಯವಾಗಲಿದೆ. ಹೊಸ ಖಾತೆ ತೆರೆಯುವ ಗ್ರಾಹಕರು ಪ್ಯಾನ್ ನಂಬರ್ ಅಥವಾ ಫಾರ್ಮ್ 60 ಸಲ್ಲಿಸುವಂತೆ ನೋಡಿಕೊಳ್ಳಿ ಎಂದು ನೇರ ತೆರಿಗೆಗಳ ಕೇಂದ್ರಿಯ ಮಂಡಳಿ ಸೂಚಿಸಿದೆ.
ನವೆಂಬರ್ 8 ರಿಂದ 500 ಹಾಗೂ 1000 ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಲಾಯಿತು. ಇದಾದ ಬಳಿಕ ಭಾರಿ ಮೊತ್ತದ ಹಣವನ್ನು ಬ್ಯಾಂಕಿಗೆ ಜಮೆ ಮಾಡಿರುವವರ ಮೇಲೆ ಕೂಡಾ ನಿಗಾ ಇಡಲಾಗುತ್ತಿದೆ.
ಹೆಚ್ಚಿನ ಮೊತ್ತ ಜಮೆ ಮಾಡಿದವರ ವಿವರ ನೀಡುವಂತೆ ಬ್ಯಾಂಕುಗಳಿಗೆ ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ಪ್ಯಾನ್ ಕಡ್ಡಾಯಗೊಳಿಸಲಾಗಿದೆ. (ಪಿಟಿಐ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications