ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಇಳಿಕೆ
ನವದೆಹಲಿ, ಮಾರ್ಚ್ 31: ವಿವಿಧ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಇಳಿಕೆ ಮಾಡಿ ಕೇಂದ್ರ ಸರ್ಕಾರವು ಬುಧವಾರ(ಮಾರ್ಚ್ 31) ದಂದು ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಬ್ಯಾಂಕುಗಳು ತನ್ನ ಠೇವಣಿ ದರಗಳನ್ನು ಇಳಿಸಲು ಸಹಕಾರಿಯಾಗಲಿದೆ. ಕಳೆದ ಮೂರು ತ್ರೈಮಾಸಿಕದಲ್ಲಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಈಗ ಪರಿಷ್ಕೃತ ಬಡ್ಡಿದರ ಏಪ್ರಿಲ್ 1, 2021ರಿಂದ ಜಾರಿಗೆ ಬರಲಿದೆ.
ಪಿಪಿಎಫ್, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ(NSC), ಹಿರಿಯ ನಾಗರಿಕ ಉಳಿತಾಯ ಯೋಜನೆಗಳು(SCSS), ಸುಕನ್ಯಾ ಸಮೃದ್ಧಿ ಯೋಜನೆ(SSY) ಸೇರಿದಂತೆ ಇತರೆ ಯೋಜನೆಗಳ ಬಡ್ಡಿ ದರವನ್ನು ಸರ್ಕಾರ ಇಳಿಕೆ ಮಾಡುವ ಸಾಧ್ಯತೆಯಿದೆ ಎಂಬ ಸುದ್ದಿ ಕಳೆದ ವರ್ಷದಿಂದ ಆಗಾಗ ಟ್ರೆಂಡ್ ಆಗುತ್ತಿತ್ತು. ಆದರೆ, ಬಡ್ಡಿದರವನ್ನು ಯಥಾಸ್ಥಿತಿಯಲ್ಲಿರಿಸಿದ್ದ ಮೋದಿ ಸರ್ಕಾರ ಈಗ ಮಾರ್ಚ್ 31ರಂದು ಬಡ್ಡಿದರ ಇಳಿಕೆ ಕುರಿತಂತೆ ಆದೇಶ ಹೊರಡಿಸಿದೆ. ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರಗಳನ್ನು ಹಣಕಾಸು ಸಚಿವಾಲಯವು ತ್ರೈಮಾಸಿಕ ಆಧಾರದ ಮೇಲೆ ಪ್ರಕಟಿಸುತ್ತದೆ.

ಎಷ್ಟು ಪ್ರಮಾಣದಲ್ಲಿ ಇಳಿಕೆ?:
ಬಡ್ಡಿದರ ಪ್ರಮಾಣ ಶೇ 4 ರಿಂದ ಶೇ 3.5ರಷ್ಟು ಇಳಿಕೆಯಾಗಿದೆ. 2021ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಏಪ್ರಿಲ್ 1ರಿಂದ ಜಾರಿಯಾಗಲಿದೆ. ಹೀಗಾಗಿ 1 ರಿಂದ 5 ವರ್ಷದ ಸೀಮಿತ ಅವಧಿ ಹೂಡಿಕೆ ಮೇಲೆ ಶೇ 4.4 ರಿಂದ ಶೇ 5.8ರಷ್ಟು ಬಡ್ಡಿದರ ನಿರೀಕ್ಷಿಸಬಹುದು.
ಸರಿ ಸುಮಾರು 46 ವರ್ಷಗಳ ಬಳಿಕ ಪಿಪಿಎಫ್ ದರ ಶೇ 7ಕ್ಕಿಂತ ಕಡಿಮೆ ದರಕ್ಕಿಳಿದಿದೆ. 40 -110 ಮೂಲಾಂಶ ತಗ್ಗಿಸಲಾಗಿದೆ(100 ಮೂಲಾಂಶ/ಬಿಪಿಎಸ್=1%).
ಪ್ರಮುಖ ಬದಲಾವಣೆ:
- ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್) ದರ ಶೇ 7.1ರಿಂದ ಶೇ 6.4ಕ್ಕಿಳಿದಿದೆ.
- ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ(ಎನ್ಎಸ್ಸಿ) ಶೇ 6.8ರಿಂದ ಶೇ 5.9ಕ್ಕಿಳಿಸಲಾಗಿದೆ.
- ಸುಕನ್ಯಾ ಸಮೃದ್ಧಿ ಯೋಜನಾ (ಎಸ್ಎಸ್ವೈ) ಶೇ 7.6 ರಿಂದ ಶೇ 6.9ಕ್ಕಿಳಿಸಲಾಗಿದೆ.
- ಅಂಚೆ ಕಚೇರಿ ಹೂಡಿಕೆ ವಿವಿಧ ಅವಧಿಗೆ ಶೇ 1.1%ರಿಂದ0.40 ಕ್ಕೆ ಇಳಿಸಲಾಗಿದ್ದು, ಶೇ 4.4-5.3% ಬಡ್ಡಿ ನಿರೀಕ್ಷಿಸಬಹುದು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications