ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಇಳಿಕೆ
ನವದೆಹಲಿ, ಮಾರ್ಚ್ 31: ವಿವಿಧ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಇಳಿಕೆ ಮಾಡಿ ಕೇಂದ್ರ ಸರ್ಕಾರವು ಬುಧವಾರ(ಮಾರ್ಚ್ 31) ದಂದು ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಬ್ಯಾಂಕುಗಳು ತನ್ನ ಠೇವಣಿ ದರಗಳನ್ನು ಇಳಿಸಲು ಸಹಕಾರಿಯಾಗಲಿದೆ. ಕಳೆದ ಮೂರು ತ್ರೈಮಾಸಿಕದಲ್ಲಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಈಗ ಪರಿಷ್ಕೃತ ಬಡ್ಡಿದರ ಏಪ್ರಿಲ್ 1, 2021ರಿಂದ ಜಾರಿಗೆ ಬರಲಿದೆ.
ಪಿಪಿಎಫ್, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ(NSC), ಹಿರಿಯ ನಾಗರಿಕ ಉಳಿತಾಯ ಯೋಜನೆಗಳು(SCSS), ಸುಕನ್ಯಾ ಸಮೃದ್ಧಿ ಯೋಜನೆ(SSY) ಸೇರಿದಂತೆ ಇತರೆ ಯೋಜನೆಗಳ ಬಡ್ಡಿ ದರವನ್ನು ಸರ್ಕಾರ ಇಳಿಕೆ ಮಾಡುವ ಸಾಧ್ಯತೆಯಿದೆ ಎಂಬ ಸುದ್ದಿ ಕಳೆದ ವರ್ಷದಿಂದ ಆಗಾಗ ಟ್ರೆಂಡ್ ಆಗುತ್ತಿತ್ತು. ಆದರೆ, ಬಡ್ಡಿದರವನ್ನು ಯಥಾಸ್ಥಿತಿಯಲ್ಲಿರಿಸಿದ್ದ ಮೋದಿ ಸರ್ಕಾರ ಈಗ ಮಾರ್ಚ್ 31ರಂದು ಬಡ್ಡಿದರ ಇಳಿಕೆ ಕುರಿತಂತೆ ಆದೇಶ ಹೊರಡಿಸಿದೆ. ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರಗಳನ್ನು ಹಣಕಾಸು ಸಚಿವಾಲಯವು ತ್ರೈಮಾಸಿಕ ಆಧಾರದ ಮೇಲೆ ಪ್ರಕಟಿಸುತ್ತದೆ.

ಎಷ್ಟು ಪ್ರಮಾಣದಲ್ಲಿ ಇಳಿಕೆ?:
ಬಡ್ಡಿದರ ಪ್ರಮಾಣ ಶೇ 4 ರಿಂದ ಶೇ 3.5ರಷ್ಟು ಇಳಿಕೆಯಾಗಿದೆ. 2021ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಏಪ್ರಿಲ್ 1ರಿಂದ ಜಾರಿಯಾಗಲಿದೆ. ಹೀಗಾಗಿ 1 ರಿಂದ 5 ವರ್ಷದ ಸೀಮಿತ ಅವಧಿ ಹೂಡಿಕೆ ಮೇಲೆ ಶೇ 4.4 ರಿಂದ ಶೇ 5.8ರಷ್ಟು ಬಡ್ಡಿದರ ನಿರೀಕ್ಷಿಸಬಹುದು.
ಸರಿ ಸುಮಾರು 46 ವರ್ಷಗಳ ಬಳಿಕ ಪಿಪಿಎಫ್ ದರ ಶೇ 7ಕ್ಕಿಂತ ಕಡಿಮೆ ದರಕ್ಕಿಳಿದಿದೆ. 40 -110 ಮೂಲಾಂಶ ತಗ್ಗಿಸಲಾಗಿದೆ(100 ಮೂಲಾಂಶ/ಬಿಪಿಎಸ್=1%).
ಪ್ರಮುಖ ಬದಲಾವಣೆ:
- ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್) ದರ ಶೇ 7.1ರಿಂದ ಶೇ 6.4ಕ್ಕಿಳಿದಿದೆ.
- ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ(ಎನ್ಎಸ್ಸಿ) ಶೇ 6.8ರಿಂದ ಶೇ 5.9ಕ್ಕಿಳಿಸಲಾಗಿದೆ.
- ಸುಕನ್ಯಾ ಸಮೃದ್ಧಿ ಯೋಜನಾ (ಎಸ್ಎಸ್ವೈ) ಶೇ 7.6 ರಿಂದ ಶೇ 6.9ಕ್ಕಿಳಿಸಲಾಗಿದೆ.
- ಅಂಚೆ ಕಚೇರಿ ಹೂಡಿಕೆ ವಿವಿಧ ಅವಧಿಗೆ ಶೇ 1.1%ರಿಂದ0.40 ಕ್ಕೆ ಇಳಿಸಲಾಗಿದ್ದು, ಶೇ 4.4-5.3% ಬಡ್ಡಿ ನಿರೀಕ್ಷಿಸಬಹುದು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications