ಲೋಕಸಭೆ ಚುನಾವಣೆಗೂ ಮುನ್ನ ಅಪಾರ್ಟ್ಮೆಂಟ್ ಖರೀದಿದಾರರಿಗೆ ಶುಭ ಸುದ್ದಿ
ನವದೆಹಲಿ, ಫೆಬ್ರವರಿ 24: ಲೋಕಸಭೆ ರಿಯಲ್ ಎಸ್ಟೇಟ್ ಕ್ಷೇತ್ರದ ಬೇಡಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲು 33ನೇ ಜಿಎಸ್ಟಿ ಕೌನ್ಸಿಲ್ ಸಭೆ ನಡೆಸಲಾಗಿದೆ. ಈ ಕ್ಷಣದ ಅಪ್ಡೇಟ್ ನಂತೆ ನಿರ್ಮಾಣ ಹಂತದಲ್ಲಿರುವ ಅಪಾರ್ಟ್ಮೆಂಟ್ ಹಾಗೂ ಮನೆಗಳ ಖರೀದಿ ಮೇಲೆ ಶೇ 5 ರಷ್ಟು ಜಿಎಸ್ಟಿ ಕಡಿತ ಮಾಡುವ ನಿರ್ಧಾರ ಪ್ರಕಟಿಸಲಾಗಿದೆ. ಹೀಗಾಗಿ, ಫ್ಲಾಟ್ ಗಳು ಕಡಿಮೆ ದರದಲ್ಲಿ ಗ್ರಾಹಕರಿಗೆ ಸಿಗಲಿದೆ.
For affordable housing #gst rate reduced from 8 to 1 % & for non affordable from 22 to 5 % without ITC.Definition of affordable changed to 90 & 60 sq mtr for non metro & metro with a capping of 45 Lakh for both.
— Sushil Kumar Modi (@SushilModi) February 24, 2019
ಸಣ್ಣ ಮತ್ತು ಮಧ್ಯಮ ವರ್ಗದ ಎಂಟ್ರಪ್ರೈಸಸ್ಗಳ ಮೇಲಿನ ಹೆಚ್ಚುವರಿ ಜಿಎಸ್ಟಿ ತಗ್ಗಿಸುವ ಬಗ್ಗೆ ಜಿಎಸ್ಟಿ ಕೌನ್ಸಿಲ್ ನ ಫಿಟ್ಮೆಂಟ್ ಸಮಿತಿ ಸಭೆ ಚರ್ಚೆ ನಡೆದಿದೆ. ಇದಲ್ಲದೆ 45 ಲಕ್ಷ ರು ಕಡಿಮೆ ದರದ ವಸತಿ ನಿವೇಶನಗಳನ್ನು ಕೈಗೆಟಕುವ ವಸತಿ ಎಂದು ಪರಿಗಣಿಸಿ ಶೇ 1ರಷ್ಟು ಜಿ ಎಸ್ಟಿ ಹಾಕಲಾಗಿದೆ. ಈ ಮುಂಚೆ ಶೇ 8ರಷ್ಟು ತೆರಿಗೆ ಕಟ್ಟಬೇಕಾಗಿತ್ತು. ಆದರೆ, 45 ಲಕ್ಷ ರು ಮಿತಿಯ ನಿರ್ಮಾಣ ಹಂತದ ಕಟ್ಟಡವಾದರೆ ಶೇ 5ರಷ್ಟು ಜಿಎಸ್ಟಿ ಕಟ್ಟಬೇಕಾಗುತ್ತದೆ. ಆದರೆ, ಮೆಟ್ರೋ ನಗರಗಳಲ್ಲಿ 90 ಚದರ ಮೀಟರ್ ಹಾಗೂ ಮೆಟ್ರೋಯೇತ್ರ ನಗರಗಳಲ್ಲಿ 60 ಚದರ ಮೀಟರ್ ವಿಸ್ತೀರ್ಣದ ಮಿತಿ ಇದೆ.

ಕಟ್ಟಡ ನಿರ್ಮಾಣದ ವೆಚ್ಚ : ಶೇ12ರಷ್ಟು ತೆರಿಗೆ ಅಲ್ಲದೆ, ಮನೆ ಕಟ್ಟಲು ಬಳಸುವ ಸಾಮಾಗ್ರಿಗಳಾದ ಉಕ್ಕು(ಶೇ18), ಸಿಮೆಂಟ್ (28%), ಮಾರ್ಬಲ್ ಹಾಗೂ ಗ್ರಾನೈಟ್ (28%), ಮಾರ್ಬಲ್ ಬ್ಲಾಕ್ (12%), ಹಾರುವ ಬೂದಿ ಇಟ್ಟಿಗೆ (12%), ಮರಳು, ಕಲ್ಲು, ಜಲ್ಲಿ (ಶೇ5), ಲಿಫ್ಟ್ ಹಾಗೂ ಇನ್ನಿತರ ಪರಿಕರ (ಶೇ28) ಹೀಗೆ ಶೇ 18 ರಿಂದ 28ರ ಸರಾಸರಿಯಲ್ಲಿ ತೆರಿಗೆ ಇದ್ದು, ಕಟ್ಟಡ ನಿರ್ಮಾಣ ವೆಚ್ಚ ಏರಿಕೆಗೆ ಕಾರಣವಾಗಿದೆ. ಬಾಡಿಗೆ ಕಟ್ಟಡ, ಗೃಹ ಸಾಲ ಸೇರಿದಂತೆ ಅನೇಕ ಕಡೆಗಳಲ್ಲಿ ತೆರಿಗೆ ಎದುರಿಸಬೇಕಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications