ಜುಲೈ 1ರಿಂದ ದೇಶಾದ್ಯಂತ ಏಕಸ್ವರೂಪ ತೆರಿಗೆ ಜಾರಿ: ಕೇಂದ್ರ
ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿರುವ ಜಿಎಸ್ ಟಿ ಜಾರಿಗೆ ಇದೀಗ ಸಕಾಲ ಕೂಡಿಬಂದಿದ್ದು, ಶೀಘ್ರದಲ್ಲೇ ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆ ಜಾರಿಗೆ ಬರುವ ದಿನ ನನಸಾಗಿದೆ.
ನವದೆಹಲಿ, ಫೆಬ್ರವರಿ 28: ಇದೇ ವರ್ಷದ ಜುಲೈ 1ರಿಂದ ದೇಶಾದ್ಯಂತ ಏಕ ಸ್ವರೂಪ ತೆರಿಗೆ ವ್ಯವಸ್ಥೆ (ಸರಕು ಮತ್ತು ಸೇವಾ ತೆರಿಗೆ - ಜಿಎಸ್ ಟಿ) ಜಾರಿಗೆ ಬರಲಿದೆ ಎಂದು ಕೇಂದ್ರ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರ ತಿಳಿಸಿದರು.[ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]
ಈ ಹಿಂದೆ, ಕೆಲ ರಾಜ್ಯಗಳಿಂದ ಜಿಎಸ್ ಟಿಗೆ ಕೆಲ ರಾಜ್ಯ ಸರ್ಕಾರಗಳಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇದೀಗ ಎಲ್ಲಾ ರಾಜ್ಯ ಸರ್ಕಾರಗಳೂ ಜಿಎಸ್ ಟಿಗೆ ಸಮ್ಮತಿ ಸೂಚಿಸಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಹದ್ದೋಶದ ಏಕಸ್ವರೂಪ ತೆರಿಗೆ ವ್ಯವಸ್ಥೆ ಯಾವುದೇ ಅಡೆತಡೆಯಿಲ್ಲದೆ ಜಾರಿಗೊಳಿಸಬಹುದಾಗಿದೆ ಎಂದು ಅವರು ಹೇಳಿದರು.[ಜಿಎಸ್ ಟಿ ಜಾರಿಯಾದರೆ ಆಗುವ 9 ಅನುಕೂಲಗಳು]

ರಾಜ್ಯ ಸರ್ಕಾರಗಳ ಬೆಂಬಲ ಸಿಕ್ಕ ನಂತರವೂ ಕೇಂದ್ರ ಸರ್ಕಾರವು ಜಿಎಸ್ ಟಿ ಕೌನ್ಸಿಲ್ ಒಪ್ಪಿಗೆ ಪಡೆಯಬೇಕಿದೆ. ಈಗಾಗಲೇ ಜಿಎಸ್ ಟಿಗೆ ಸಂಬಂಧಪಟ್ಟ ಐ-ಜಿಎಸ್ ಟಿ (ಇಂಟಿಗ್ರೇಟೆಡ್ ಜಿಎಸ್ ಟಿ), ಸಿ - ಜಿಎಸ್ ಟಿ (ಸೆಂಟ್ರಲ್ ಜಿಎಸ್ ಟಿ) ಹಾಗೂ ಎಸ್ - ಜಿಎಸ್ ಟಿ (ಸ್ಟೇಟ್ ಜಿಎಸ್ ಟಿ) ಗಳ ಕರಡು ಪ್ರತಿಗಳಿಗೆ ಜಿಎಸ್ ಟಿ ಕೌನ್ಸಿಲ್ ನ ಅಂಕಿತ ದೊರೆತ ನಂತರ ಮಾರ್ಚ್ 9ರಿಂದ ಸಂಸತ್ತಿನಲ್ಲಿ ಬಜೆಟ್ ಅಧಿವೇಶನದಲ್ಲಿ ಮಂಡಿಸಿ ಲೋಕಸಭೆಯಲ್ಲಿ ಅದಕ್ಕೆ ಒಪ್ಪಿಗೆ ಪಡೆಯಬೇಕಿದೆ ಎಂದು ದಾಸ್ ವಿವರಿಸಿದ್ದಾರೆ.[ನಾಲ್ಕು ಹಂತದ ಜಿಎಸ್ ಟಿ ದರ ನಿಗದಿ: ಅರುಣ್ ಜೇಟ್ಲಿ]
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications