ಸರ್ಕಾರಕ್ಕೆ 9,406 ಕೋಟಿ ರೂ ಡಿವಿಡೆಂಡ್ ನೀಡಿದ್ದ ಎಚ್ಎಎಲ್
ಬೆಂಗಳೂರು, ಜನವರಿ 8: ಮರುಖರೀದಿ ಮತ್ತು ಡಿವಿಡೆಂಡ್ ಮೇಲಿನ ತೆರಿಗೆ ಹಾಗೂ ಷೇರುಗಳ ಮರುಖರೀದಿಗಾಗಿ ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ (ಎಚ್ಎಎಲ್) ಕಳೆದ ಮೂರು ವರ್ಷಗಳಲ್ಲಿ ಒಟ್ಟು 9,406 ಕೋಟಿ ರೂ ಮೊತ್ತವನ್ನು ಡಿವಿಡೆಂಡ್ ರೂಪದಲ್ಲಿ ಭಾರತ ಸರ್ಕಾರಕ್ಕೆ ಪಾವತಿಸಿತ್ತು ಎನ್ನುವುದು ಕಂಪೆನಿಯ ಹಣಕಾಸು ಲೆಕ್ಕಾಚಾರಗಳು ತಿಳಿಸಿವೆ.
2013-14ರ ಅವಧಿಯಿಂದ ಒಳಗೊಂಡಂತೆ ಐದು ವರ್ಷದ ಅವಧಿಯಲ್ಲಿ ಈ ಮೊತ್ತ 11,024 ಕೋಟಿ ರೂ. ತಲುಪಿದೆ. ಎಚ್ಎಎಲ್ ತನ್ನ ನೌಕರರಿಗೆ ವೇತನ ನೀಡಲು ಸಾಲ ಮಾಡಬೇಕಾದ ಆರ್ಥಿಕ ಬಿಕ್ಕಟ್ಟಿಗೆ ಒಳಗಾಗಿರುವುದಕ್ಕೆ ಇದೊಂದು ನಿದರ್ಶನವಾಗಿದೆ.
ಇದಲ್ಲದೆ, ಕಂಪೆನಿಯು ತಾನು ಪೂರ್ಣಗೊಳಿಸಿದ ಕಾರ್ಯಗಳಿಗೆ ಬರಬೇಕಾದ 15 ಸಾವಿರ ಕೋಟಿ ಬಾಕಿಯನ್ನು ಇನ್ನೂ ವಸೂಲಿ ಮಾಡಲು ಸಾಧ್ಯವಾಗಿಲ್ಲ. ಇದರಲ್ಲಿ ಭಾರತೀಯ ವಾಯು ಸೇನೆಯ ಪಾಲು ಹಿರಿದಾಗಿದೆ.

ಈ ಕಾರಣಗಳಿಂದಾಗಿ ಕಂಪೆನಿ ತನ್ನ ಕಾರ್ಯಾಚರಣೆಯ ವೆಚ್ಚವನ್ನು ನಿಭಾಯಿಸಲು ಬ್ಯಾಂಕು ಮತ್ತು ಹಣಕಾಸು ಸಂಸ್ಥೆಗಳಿಂದ ನಿರಂತರವಾಗಿ ಸಾಲ ಪಡೆಯುವಂತಾಗಿತ್ತು.
ಎಚ್ಎಎಲ್ನ ಹಿರಿಯ ಅಧಿಕಾರಿಗಳು, ರಕ್ಷಣಾ ಸಚಿವಾಲಯದ ಅಧಿಕಾರಿಗಳು ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳು ಮುಂದಿನ ವಾರ ನವದೆಹಲಿಯಲ್ಲಿ ಸಭೆ ಸೇರಿ ಈ ಬಗ್ಗೆ ಚರ್ಚಿಸಲಿದ್ದಾರೆ.
ಈ ಸಭೆ ಮೂಲಕ ಕಂಪೆನಿಯ ಹಣಕಾಸು ಸಂಕಷ್ಟಕ್ಕೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಯಲಿದೆ. ಕೆಲಸಕ್ಕೂ ಮುನ್ನವೇ ಮುಂಗಡ ಹಣ ಪಡೆದುಕೊಳ್ಳುವುದು ತಕ್ಕಮಟ್ಟಿಗೆ ಒತ್ತಡ ಕಡಿಮೆ ಮಾಡಬಹುದು ಎಂದು ಸರ್ಕಾರದ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಎಚ್ಎಎಲ್ನ ವಾರ್ಷಿಕ ವರದಿ ಪ್ರಕಾರ, ಕಂಪೆನಿಯು ತನ್ನ ಕಾರ್ಯಚಟುವಟಿಕೆಗಳಿಗೆ ಹಣ ಹೊಂದಿಸಲು ಕಳೆದ ಹಣಕಾಸು ವರ್ಷದಲ್ಲಿ 9 ಬಾರಿ ಸಾಲ ಪಡೆದುಕೊಂಡಿದೆ. ಅದರಲ್ಲಿ 2018ರ ಮಾರ್ಚ್ ಒಂದರಲ್ಲಿಯೇ ಏಳು ಬಾರಿ ಸಾಲ ಪಡೆದುಕೊಂಡಿದೆ. ಹಿಂದಿನ ಹಣಕಾಸು ವರ್ಷದ ಒಂಬತ್ತು ತಿಂಗಳಿನಲ್ಲಿ 4,446.87 ಕೋಟಿ ರೂ. ಸಾಲ ತೆಗೆದುಕೊಂಡಿದೆ.
ಐಎಎಫ್ ತನ್ನ ಬಾಕಿ ಹಣ ಪಾವತಿಸದೆ ಇದ್ದರೆ ಅದರ ಮೊತ್ತ ಮಾರ್ಚ್ 31ರ ವೇಳೆಗೆ 20 ಸಾವಿರ ಕೋಟಿ ರೂ. ಗೆ ತಲುಪಲಿದೆ ಎಂದು ವರದಿ ಹೇಳಿದೆ.
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ










Click it and Unblock the Notifications