ಹೆಚ್ಸಿಎಲ್ ತ್ರೈಮಾಸಿಕ ವರದಿ ಪ್ರಕಟಿಸಿದ ಬೆನ್ನಲ್ಲೇ, ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶಿವ ನಡಾರ್
ನವದೆಹಲಿ, ಜುಲೈ 17: ಪ್ರಮುಖ ಐಟಿ ಸಂಸ್ಥೆಗಳಲ್ಲಿ ಒಂದಾದ ಹೆಚ್ಸಿಎಲ್ ಟೆಕ್ನಾಲಜೀಸ್ ಶುಕ್ರವಾರ 2020-21ರ ಮೊದಲ ತ್ರೈಮಾಸಿಕ ವರದಿ ಪ್ರಕಟಿಸಿದ ಬೆನ್ನಲ್ಲೇ ಕಂಪನಿಯ ಅಧ್ಯಕ್ಷ ಸ್ಥಾನದಿಂದ ಶಿವ ನಡಾರ್ ಕೆಳಗಿಳಿದಿದ್ದಾರೆ.
Recommended Video
ಎಚ್ಸಿಎಲ್ ಟೆಕ್ನಾಲಜೀಸ್ ಏಪ್ರಿಲ್-ಜೂನ್ ತ್ರೈಮಾಸಿಕದ ನಿವ್ವಳ ಲಾಭ ಶೇ. 31.7ರಷ್ಟು ಏರಿಕೆಗೊಂಡು 2,935 ಕೋಟಿ ರುಪಾಯಿಗಳಷ್ಟಿದೆ ಎಂದು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಶಿವ ನಾಡರ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ. ನಾಡರ್ ಅವರ ಮಗಳು ರೋಶ್ನಿ ನಾಡರ್ ಮಲ್ಹೋತ್ರಾ ಅವರ ನಂತರದ ಉತ್ತರಾಧಿಕಾರಿಯಾಗಲಿದ್ದಾರೆ.
ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ ಶಿವ ನಾಡರ್ ಅವರ ಸ್ಥಾನಕ್ಕೆ ಜುಲೈ 17 ರಿಂದ ಜಾರಿಗೆ ಬರುವಂತೆ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ರೋಶ್ನಿ ನಾಡರ್ ಮಲ್ಹೋತ್ರಾ ಅವರನ್ನು ನಿರ್ದೇಶಕರ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ಎಚ್ಸಿಎಲ್ ಟೆಕ್ನಾಲಜೀಸ್ ತಿಳಿಸಿದೆ.

ಶಿವ ನಾಡರ್ ಕಂಪನಿಯ ಮುಖ್ಯ ಕಾರ್ಯತಂತ್ರ ಅಧಿಕಾರಿಯಾಗಿ ಹುದ್ದೆಯೊಂದಿಗೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಮುಂದುವರಿಯುವ ಸಾಧ್ಯತೆ ಇದೆ.
ಕ್ಯೂ 1 ಎಫ್ವೈ 21 ರಲ್ಲಿ ಕಂಪನಿಯ ಏಕೀಕೃತ ಆದಾಯವು ಶೇಕಡಾ 8.60 ರಷ್ಟು ಹೆಚ್ಚಳವಾಗಿ 17,841 ಕೋಟಿ ರೂ.ಗಳಿಗೆ ತಲುಪಿದೆ. ಇಬಿಐಟಿಡಿಎ ಏಪ್ರಿಲ್-ಜೂನ್ ಅವಧಿಯಲ್ಲಿ ಶೇಕಡಾ 34.30 ಏರಿಕೆ ಕಂಡು 4,566 ಕೋಟಿ ರೂ.ಗೆ ತಲುಪಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 3,401 ಕೋಟಿ ರೂಪಾಯಿಗಳಷ್ಟಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications