ಲಾಕ್ಡೌನ್ ನಡುವೆ ಉದ್ಯೋಗಿಗಳಿಗೆ ಶುಭ ಸುದ್ದಿ ಕೊಟ್ಟ HCL
ಬೆಂಗಳೂರು, ಮೇ 22: ಕೊರೊನಾವೈರಸ್ ಹರಡದಂತೆ ವಿಧಿಸಾಲಾಗಿರುವ ಲಾಕ್ಡೌನ್ ನಿಂದ ಐಟಿ ಕ್ಷೇತ್ರದಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ. ಪ್ರಮುಖ ಕಂಪನಿಗಳ ಉದ್ಯೋಗಿಗಳ ಸಂಖ್ಯೆ ಕಡಿತಗೊಂಡಿದೆ. ಹಲವೆಡೆ ಉದ್ಯೋಗಿಗಳಿಗೆ ಸಿಗುತ್ತಿದ್ದ ಸಂಬಳ, ಬಡ್ತಿ, ಸೌಲಭ್ಯಗಳಿಗೆ ಕಡಿವಾಣ ಬಿದ್ದಿದೆ. ಈ ನಡುವೆ ಎಚ್ ಸಿಎಲ್ ಟೆಕ್ನಾಲಜೀಸ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ಶುಭ ಸುದ್ದಿ ನೀಡಿದೆ.
ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಸಂಸ್ಥೆ ಎಚ್ ಸಿಎಲ್ ಟೆಕ್ನಾಲಜೀಸ್ ತನ್ನ 150,000ಕ್ಕೂ ಅಧಿಕ ಸಿಬ್ಬಂದಿಗೆ ಕಳೆದ ವರ್ಷ ಬಾಕಿ ಬೋನಸ್ ನೀಡಲು ಮುಂದಾಗಿದೆ. ಜೊತೆಗೆ ಯಾವುದೇ ಸ್ತರದ ಉದ್ಯೋಗಿಗಳ ಸಂಬಳ ಕಡಿತಗೊಳಿಸುತ್ತಿಲ್ಲ ಎಂದು ತಿಳಿದು ಬಂದಿದೆ.
ನೋಯ್ಡಾ ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಈ ಹಿಂದೆ ಘೋಷಿಸಿದಂತೆ 15,000 ನೇಮಕಾತಿಯನ್ನು ಮುಂದುವರೆಸಲು ಮುಂದಾಗಿದೆ. ಫ್ರೆಶರ್ಸ್ ಗಳಿಗೆ ಉದ್ಯೋಗ ಸಿಗಲಿದೆ ಎಂದು ಹಿರಿಯ ಮಾನವ ಸಂಪನ್ಮೂಲ ಅಧಿಕಾರಿ ಅಪ್ಪರಾವ್ ವಿವಿ ಹೇಳಿದರು.

ಕೆಲವು ಪ್ರಾಜೆಕ್ಟ್ ಗಳು ವಿಳಂಬವಾಗಿವೆ. ಆದರೆ, ಪ್ರಾಜೆಕ್ಟ್ ಕ್ಯಾನ್ಸಲ್ ಆಗಿಲ್ಲ, ಹೀಗಾಗಿ, ಹಂತ ಹಂತವಾಗಿ ನೇಮಕಾತಿ ಮುಂದುವರೆಸಲಾಗುತ್ತದೆ ಎಂದರು. ಐಟಿ ಪ್ರಮುಖ ಸಂಸ್ಥೆಗಳಾದ ಇನ್ಫೋಸಿಸ್, ವಿಪ್ರೋ, ಟಿಸಿಎಸ್, ಡಬ್ಲ್ಯೂಎನ್ ಎಸ್ ಮುಂತಾದ ಸಂಸ್ಥೆಗಳು ಈಗಾಗಲೇ ಉದ್ಯೋಗಿಗಳ ಸಂಬಳ ಕಡಿತ, ಬಡ್ತಿ ನೀಡುವುದನ್ನು ತಡೆ ಹಿಡಿದಿವೆ.
ಬಹುರಾಷ್ಟ್ರೀಯ ಕಂಪನಿಗಳಿಗೆ ಭಾರತದಲ್ಲಷ್ಟೇ ಅಲ್ಲದೆ ಅಮೆರಿಕ, ಯುರೋಪ್ ದೇಶಗಳಲ್ಲಿರುವ ಸಂಸ್ಥೆಯ ಕಚೇರಿಗಳನ್ನು ಬಂದ್ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಅನೇಕ ಕಂಪನಿಗಳು ವರ್ಕ್ ಫ್ರಂ ಹೋಂ ಆಯ್ಕೆ ಬಯಸಿದ್ದಾರೆ. ಕೆಲ ಐಟಿ ಪಾರ್ಕ್ ಗಳಲ್ಲಿ ಕದ್ದು ಮುಚ್ಚಿ ಕಚೇರಿಯಲ್ಲಿ ತುರ್ತು ಕೆಲಸ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಹಲವು ಕಂಪನಿಗಳಿಗೆ ಇದು ಅಪ್ರೈಸಲ್ ಅವಧಿ ಹೀಗಾಗಿ ಐಟಿ ಉದ್ಯೋಗಿಗಳಿಗೆ ತಿಂಗಳ ಸಂಬಳ ಹಾಗೂ ಹೈಕ್ ಎಷ್ಟು ಸಿಗಬಹುದು ಎಂಬ ಚಿಂತೆ ಕಾಡುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications