ಮುಂದಿನ 5 ವರ್ಷಗಳಲ್ಲಿ ಬಿಡುಗಡೆಯಾಗಲಿವೆ 50ಕ್ಕೂ ಹೆಚ್ಚು ಹೊಸ ಹೀರೋ ಬೈಕುಗಳು
ನವದೆಹಲಿ, ಜನವರಿ 22: ಮುಂದಿನ ಐದು ವರ್ಷಗಳವರೆಗೆ ಕಂಪನಿಯು ಪ್ರತಿ ವರ್ಷ 10 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಎಂದು ಹೀರೋ ಮೊಟೊಕಾರ್ಪ್ ಹೇಳಿದೆ. 2025 ರ ವೇಳೆಗೆ ಕಂಪನಿಯು 50 ಹೊಸ ಮಾದರಿಯ ದ್ವಿಚಕ್ರ ವಾಹನಗಳು ಹೊಂದಿರಲಿದೆ. ಈ ಉತ್ಪನ್ನಗಳು ಕೆಲವು ಹೊಸ ವಾಹನಗಳು ಮತ್ತು ಕೆಲವು ಹಳೆಯ ವಾಹನಗಳ ನವೀಕರಿಸಿದ ಮಾದರಿಗಳನ್ನು ಒಳಗೊಂಡಿರುತ್ತವೆ.
ಹೀರೋ ಮೊಟೊಕಾರ್ಪ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪವನ್ ಮುಂಜಾಲ್ ಅವರು, "ನಾವು ನಮ್ಮ ಬೆಳವಣಿಗೆಯ ಪ್ರಯಾಣವನ್ನು ಮುಂದುವರಿಸಲು ಬಯಸುತ್ತೇವೆ. ಚಲನಶೀಲತೆಯ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಾವು ವಾಹನಗಳನ್ನು ಪ್ರಾರಂಭಿಸುತ್ತೇವೆ. ಮುಂದಿನ ಐದು ವರ್ಷಗಳಲ್ಲಿ ಹೊಸ ಮೋಟರ್ ಸೈಕಲ್ಗಳು ಮತ್ತು ಸ್ಕೂಟರ್ಗಳು ನಮ್ಮ ಜಾಗತಿಕ ಹೆಜ್ಜೆ ಗುರುತನ್ನು ವಿಸ್ತರಿಸುತ್ತದೆ. " ಎಂದು ಹೇಳಿದ್ದಾರೆ.
ಹೀರೋ ಮೊಟೊಕಾರ್ಪ್ ಭವಿಷ್ಯದಲ್ಲಿ ಆಧುನಿಕ ಮೋಟಾರ್ ಸೈಕಲ್ಗಳು ಮತ್ತು ಸ್ಕೂಟರ್ಗಳನ್ನು ತಯಾರಿಸಲಿದೆ ಎಂದು ಹೇಳಿದರು. ಇದಕ್ಕಾಗಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ.

ಮುಂದಿನ ಐದು ವರ್ಷಗಳಲ್ಲಿ ಕಂಪನಿಯು ಜಾಗತಿಕ ಮಾರುಕಟ್ಟೆಯನ್ನು ಮುನ್ನಡೆಸುತ್ತದೆ ಮತ್ತು ಹೊಸ ದೇಶಗಳಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ, ಹೀರೋ ಸೆಲೆಬ್ರೇಷನ್ ಎಡಿಷನ್ ಆಫ್ ಸ್ಪ್ಲೆಂಡರ್ ಪ್ಲಸ್, ಗ್ಲಾಮರ್, ಎಕ್ಸ್ಟ್ರೀಮ್ 160 ಆರ್, ಪ್ಯಾಶನ್ ಪ್ರೊ, ಡೆಸ್ಟಿನಿ 125, ಮೆಸ್ಟ್ರೋ ಎಡ್ಜ್ 110 ಅನ್ನು ಬಿಡುಗಡೆ ಮಾಡಿದೆ. ವಿಶೇಷ ಆವೃತ್ತಿಯ ಮಾರಾಟವು ಫೆಬ್ರವರಿ 2021 ರಿಂದ ಪ್ರಾರಂಭವಾಗಲಿದೆ.
ಹೀರೋ ಮೊಟೊಕಾರ್ಪ್ ತನ್ನ ಸಾಲಿನಲ್ಲಿ ಎಲ್ಲಾ ವಾಹನಗಳ ಬೆಲೆಯನ್ನು ಹೆಚ್ಚಿಸಿದೆ. ಕಂಪನಿಯು ಹೊಸ ವರ್ಷದಿಂದ ಬೈಕು ಮತ್ತು ಸ್ಕೂಟರ್ಗಳ ಬೆಲೆಯನ್ನು 1,500 ರೂ.ಗೆ ಹೆಚ್ಚಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications