ಪರಿಚಯವೇ ಇಲ್ಲದ ಯೋಗಿ ಮಾತಿನಂತೆ ನಿರ್ಧಾರ ಕೈಗೊಂಡಿದ್ದ ಎನ್ಎಸ್ಇ ಮಾಜಿ ಸಿಇಒ!
ನವದೆಹಲಿ, ಫೆಬ್ರವರಿ 14: ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್ಚೇಂಜ್ ಎನ್ಎಸ್ಇಯ ಮಾಜಿ ಮುಖ್ಯಸ್ಥರು ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆ ಯೋಗಿಯ ಸಲಹೆಯನ್ನು ಪಡೆದು ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಮಾರುಕಟ್ಟೆ ನಿಯಂತ್ರಕ ಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ತಿಳಿಸಿದೆ ಎಂದು reuters ವರದಿ ಮಾಡಿದೆ.
4 ಲಕ್ಷ ಕೋಟಿ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯದ ಭಾರತದ ಅತಿ ದೊಡ್ಡ ಷೇರು ವಿನಿಮಯ ಕೇಂದ್ರ ಎನ್ಎಸ್ಇ (NSE)ಗೆ ಮಾಜಿ ಸಿಇಒ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಚಿತ್ರಾ ರಾಮಕೃಷ್ಣ ತಾನು ನೋಡದ, ತನಗೆ ಪರಿಚಯವೇ ಇಲ್ಲದ ಹಿಮಾಲಯದ ಯೋಗಿಯೋರ್ವರ ಸಲಹೆಯನ್ನು ಪಡೆದುಕೊಂಡೇ ನಿರ್ಧಾರವನ್ನು ಕೈಗೊಳ್ಳುತ್ತಿದ್ದರು. NSEಯ ಪ್ರಮುಖ ವ್ಯವಹಾರ ಯೋಜನೆಗಳು ಮತ್ತು ಅಜೆಂಡಾ ಸೇರಿದಂತೆ ಹಲವಾರು ವಿಚಾರಗಳನ್ನು ಆ ಅಪರಿಚಿತ ಯೋಗಿಯೊಂದಿಗೆ ಹಂಚಿಕೊಂಡಿದ್ದಾರೆ ಎಂಬ ವಿಚಾರವನ್ನು ಸೆಬಿ ಬಹಿರಂಗಪಡಿಸಿದೆ.
"ಎನ್ಎಸ್ಇಯ ಹಣಕಾಸು ಮತ್ತು ವ್ಯವಹಾರ ಯೋಜನೆಗಳ ಮಾಹಿತಿ ಹಂಚಿಕೆಯು, ಊಹೆಗೂ ನಿಲುಕದ, ಸ್ಟಾಕ್ ಎಕ್ಸ್ಚೇಂಜ್ನ ತಳಹದಿಯನ್ನೇ ಅಲುಗಾಡಿಸಬಲ್ಲ ಕಾರ್ಯವಾಗಿದೆ," ಸೆಬಿ ತನ್ನ ಆದೇಶದಲ್ಲಿ ಉಲ್ಲೇಖ ಮಾಡಿದ್ದು, ಚಿತ್ರಾ ರಾಮಕೃಷ್ಣ ಸೇರಿದಂತೆ ಹಲವು ಅಧಿಕಾರಿಗಳಿಗೆ ಈ ಸಂಬಂಧವನ್ನು ದಂಡವನ್ನು ವಿಧಿಸಿದೆ.

ಹಲವು ವರ್ಷಗಳಿಂದ ಲೋಪದೋಷ ಆರೋಪ ಎದುರಿಸುತ್ತಿದೆ ಎನ್ಎಸ್ಇ
"ವೈಯಕ್ತಿಕ ಕಾರಣಗಳನ್ನು" ಉಲ್ಲೇಖಿಸಿ 2016 ರಲ್ಲಿ ಎನ್ಎಸ್ಇ ತೊರೆದ ರಾಮಕೃಷ್ಣ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಸಾಂಸ್ಥಿಕ ಆಡಳಿತದ ಲೋಪದೋಷಗಳ ಆರೋಪಗಳು ಹಲವಾರು ವರ್ಷಗಳಿಂದ NSE ಎದುರಿಸುತ್ತಿದೆ. ಎನ್ಎಸ್ಸಿ 2017 ರಲ್ಲಿ ಐಪಿಒ ಆರಂಭ ಮಾಡಿತ್ತು. ಆದರೆ ಇದರಲ್ಲಿ ಹಲವಾರು ಲೋಪ ದೋಷಗಳು ಕಂಡು ಬಂದಿದೆ ಎಂಬ ಆರೋಪ ಕೇಳಿ ಬಂದಿತ್ತು. ಮೂರು ವರ್ಷಗಳ ತನಿಖೆಯ ನಂತರ, ಸೆಬಿ ಈ ಮಾಹಿತಿಯನ್ನು ಹೊರಹಾಕಿದ್ದು, ಸುಮಾರು 90 ಮಿಲಿಯನ್ ಡಾಲರ್ ದಂಡವನ್ನು ವಿಧಿಸಿದೆ. ಆರು ತಿಂಗಳವರೆಗೆ ಸೆಕ್ಯುರಿಟೀಸ್ ಮಾರುಕಟ್ಟೆಗಳಲ್ಲಿ ಹಣವನ್ನು ಸಂಗ್ರಹಿಸುವುದನ್ನು ನಿರ್ಬಂಧ ಮಾಡಿದೆ.

"ಆಧ್ಯಾತ್ಮಿಕ ಶಕ್ತಿ" ಕರೆಯಲ್ಪಡುತ್ತಿದ್ದ ಅಪರಿಚಿತ ವ್ಯಕ್ತಿ
ಆದರೆ ಎನ್ಎಸ್ಇ ನ್ಯಾಯಾಲಯದಲ್ಲಿ ಆದೇಶವನ್ನು ಪ್ರಶ್ನಿಸಿದೆ ಮತ್ತು ಹೊಸ ಐಪಿಒಗಾಗಿ ಕರಡು ಸಲ್ಲಿಕೆ ಮಾಡಲು SEBI ಯ ಅನುಮೋದನೆಯನ್ನು ಕೋರಿದೆ. ಆದರೆ ಆ ತನಿಖೆಯ ಸಮಯದಲ್ಲಿ, SEBI ಅಪರಿಚಿತ ವ್ಯಕ್ತಿಗೆ ಚಿತ್ರಾ ರಾಮಕೃಷ್ಣ ಅವರ ಇಮೇಲ್ನಿಂದ ದಾಖಲೆಗಳನ್ನು ಕಳುಹಿಸಿರುವುದನ್ನು ಪತ್ತೆ ಹಚ್ಚಿದೆ. ಇನ್ನು ಚಿತ್ರಾ ರಾಮಕೃಷ್ಣ ಆ ಅಪರಿಚಿತ ವ್ಯಕ್ತಿಯನ್ನು "ಆಧ್ಯಾತ್ಮಿಕ ಶಕ್ತಿ" ಎಂದು ಕರೆಯುತ್ತಿದ್ದು, 20 ವರ್ಷಗಳಿಂದ ಮಾರ್ಗದರ್ಶನವನ್ನು ಪಡೆದಿದ್ದರು ಎಂದು reuters ವರದಿ ಉಲ್ಲೇಖಿಸಿದೆ. ಇನ್ನು "ಆಧ್ಯಾತ್ಮಿಕ ಸ್ವಭಾವದ" ವ್ಯಕ್ತಿಯೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳುವುದು ಗೌಪ್ಯತೆ ಅಥವಾ ಸಮಗ್ರತೆಗೆ ರಾಜಿಯಾಗುವುದಿಲ್ಲ ಎಂದು ಚಿತ್ರಾ ರಾಮಕೃಷ್ಣ ತನ್ನ ಪ್ರತಿವಾದದಲ್ಲಿ ಸೆಬಿಗೆ ತಿಳಿಸಿದರು.

"ಕೇವಲ ಅವರ ಕೈ ಬೊಂಬೆ"
ಈ ಯೋಗಿಗಳೇ ಆನಂದ್ ಸುಬ್ರಮಣಿಯನ್ ಅವರ ನೇಮಕಕ್ಕೆ ಚಿತ್ರಾಗೆ ಮಾರ್ಗದರ್ಶನ ನೀಡಿದ್ದರು ಎಂದು ಕೂಡಾ ವರದಿಯು ಹೇಳಿದೆ. ಈ ಯೋಗಿಗಳು ಎಲ್ಲಾ ವಿಷಯದಲ್ಲಿ ನಿರ್ಧಾರ ಕೈಗೊಳ್ಳುತ್ತಿದ್ದರು, ರಾಮಕೃಷ್ಣ ಅವರು "ಕೇವಲ ಅವರ ಕೈಯಲ್ಲಿ ಬೊಂಬೆ" ಎಂದು ಸೆಬಿಯು ಹೇಳಿದೆ. ಈ ಯೋಗಿಗಳಿಗೆ ಸೇರಿದ್ದು ಎಂದು ಹೇಳಲಾದ ಇಮೇಲ್ ವಿಳಾಸಕ್ಕೆ ಸೆಬಿಯು ಕಳುಹಿಸಿದ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎನ್ಎಸ್ಇ ಮತ್ತು ಅದರ ಮಂಡಳಿಯು ಗೌಪ್ಯ ಮಾಹಿತಿಯ ವಿನಿಮಯದ ಬಗ್ಗೆ ತಿಳಿದಿತ್ತು. ಆದರೆ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂದು ಕೂಡಾ ಸೆಬಿ ಹೇಳಿದೆ.

ಎಷ್ಟು ದಂಡ ವಿಧಿಸಲಾಗಿದೆ?
ಮಾಹಿತಿ ಮುಚ್ಚಿಟ್ಟಿದ್ದ ಈ ಹಿನ್ನೆಲೆ ಎನ್ಎಸ್ಇಗೆ 20 ಮಿಲಿಯನ್ ರೂಪಾಯಿ ($270,000) ದಂಡ ವಿಧಿಸಲಾಗಿದೆ. ಆರು ತಿಂಗಳವರೆಗೆ ಯಾವುದೇ ವಹಿವಾಟು ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಚಿತ್ರಾ ರಾಮಕೃಷ್ಣನ್ಗೆ ಸೆಬಿಯು 30 ಮಿಲಿಯನ್ ರೂಪಾಯಿಗಳ ದಂಡವನ್ನು ವಿಧಿಸಿದೆ. ಮೂರು ವರ್ಷಗಳ ಕಾಲ ಯಾವುದೇ ಸೆಬಿ ನೋಂದಾಯಿತ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವುದಕ್ಕೆ ನಿರ್ಬಂಧ ವಿಧಿಸಿದೆ. (ಒನ್ಇಂಡಿಯಾ ಸುದ್ದಿ)
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications