ಮನೆಸಾಲ, ವಾಹನ ಸಾಲ, ಆಸಾಲ ಈಸಾಲದ ಬಡ್ಡಿ ಇಳಿಕೆ?
ಮುಂಬೈ, ಮಾ.3: ಹೊಸ ಹಣಕಾಸು ನೀತಿ ಪ್ರಕಟಿಸುವುದಕ್ಕೂ ಮುನ್ನವೇ ಆರ್ ಬಿಐನಿಂದ ಸಾಲ ಪಡೆಯುವವರಿಗೆ ಗಿಫ್ಟ್ ಸಿಕ್ಕಿದೆ. ಆರ್ ಬಿಐ ಬಡ್ಡಿದರ 25 ಅಂಶಗಳಷ್ಟು ಇಳಿಕೆ ಮಾಡಿದೆ. ಬ್ಯಾಂಕಿನಿಂದ ಗೃಹ, ವಾಹನ ಲೋನ್ ಪಡೆಯುವವರು ಬ್ಯಾಂಕಿನತ್ತ ಮುಖ ಮಾಡಬಹುದಾಗಿದೆ.
ಫೆ.3ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಹಣಕಾಸು ನೀತಿ ಪ್ರಕಟಿಸುವುದಕ್ಕೂ ಮುನ್ನವೇ ರೆಪೋ ದರ ಇಳಿಕೆ ಮಾಡಿದ್ದ ಆರ್ ಬಿಐ ಮತ್ತೊಮ್ಮೆ ಸಾರ್ವಜನಿಕರಿಗೆ ಹಿತಕರ ಸುದ್ದಿ ನೀಡಿದೆ. ಹೀಗಾಗಿ ಬ್ಯಾಂಕುಗಳ ಗೃಹ ಹಾಗೂ ಕಾರು ಸಾಲ ಕೈಗುಟುಕುವಂತಾಗಲಿದೆ.[ರೆಪೋ ದರ ಇಳಿಕೆ: ಸಾಲ ಮಾಡಿ ತುಪ್ಪ ತಿನ್ನಲಡ್ಡಿಯಿಲ್ಲ]
ಯುನೈಟೆಡ್ ಬ್ಯಾಂಕ್ ಈಗಾಗಲೇ 25 ಮುಲಾಂಶ ಕಡಿತ ಘೋಷಿಸಿದೆ. ಇತರೆ ಬ್ಯಾಂಕುಗಳು ಇದೇ ಹಾದಿ ಹಿಡಿದರೆ ಗ್ರಾಹಕರು ಸಾಲದ ಬಡ್ಡಿದರ ಇಳಿಕೆ ನಿರೀಕ್ಷಿಸಬಹುದು.ರೆಪೋ ದರ 25 ಮೂಲಾಂಶ(bps) ಶೇ 7.75ಕ್ಕೆ ಇಳಿಕೆ ಮಾಡಲಾಗಿದೆ. ಶೇ 8ರಷ್ಟಿದ್ದ ರೆಪೋ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಳಿಸಲಾಗಿದೆ. ರೆಪೋದರ ಆಧಾರಿಸಿ ಬ್ಯಾಂಕುಗಳು ಈಗ ಶೇ 8.75ರಂತೆ ಆರ್ ಬಿಅನಿಂದ ಹಣ ಪಡೆದುಕೊಳ್ಳಲಿವೆ.

ಆದರೆ, ಆರ್ ಬಿಐ ರೆಪೋ ದರ ಬಡ್ಡಿದರ ಇಳಿಕೆ ಮಾಡಿದ ಕೂಡಲೇ ಬ್ಯಾಂಕ್ ಗಳು ವಿವಿಧ ಸಾಲಕ್ಕೆ ನೀಡಿದ ಬಡ್ಡಿದರ ಇಳಿಕೆ ಮಾಡಲೇಬೇಕೆಂಬ ನಿಯಮವೇನೂ ಇಲ್ಲ. ಅದರೆ, ಈಗಿನ ಪರಿಸ್ಥಿತಿ ಗಮನಿಸಿದರೆ ಸಾಲ ನೀಡಿಕೆ ದರ (credit off take) ಅಷ್ಟು ಪ್ರಬಲವಾಗಿಲ್ಲ. ಹೀಗಾಗಿ ಬ್ಯಾಂಕುಗಳ ಬಡ್ಡಿ ದರ ಇಳಿಕೆ ಮಾಡಿ ಹೆಚ್ಚೆಚ್ಚು ಗ್ರಾಹಕರನ್ನು ಆಕರ್ಷಿಸುವ ಸಾಧ್ಯತೆ ಹೆಚ್ಚು. [ವಿಡಿಯೋ :ಆರ್ ಬಿಐನಿಂದ ಬಡ್ಡಿದರ ಇಳಿಕೆ]
ನಗದು ಮೀಸಲು ಅನುಪಾತ(ಸಿಆರ್ ಆರ್) ಶೇ.4ರ ಪ್ರಮಾಣದಲ್ಲೇ ಇದೆ ಯಾವುದೇ ಬದಲಾವಣೆ ಮಾಡುವ ನಿರೀಕ್ಷೆ ಸದ್ಯಕ್ಕಿಲ್ಲ.ಗಾಹ್ರಕ ದರ ಸ್ಯೂಚಂಕ (ಸಿಪಿಐ) ಶೇ 5ಕ್ಕೆ ಕುಸಿದಿದೆ. ಜನವರಿ 2016ರ ತನಕ ಹಣದುಬ್ಬರ ಶೇ 6ರಂತೆ ಉಳಿಯುವ ನಿರೀಕ್ಷೆಯಿದೆ ಇದೆಲ್ಲವನ್ನು ಗಮನಿಸಿ ಬ್ಯಾಂಕುಗಳ ಮುಂದಿನವಾರ ಬಡ್ಡಿ ದರ ಇಳಿಕೆ ಬಗ್ಗೆ ಚರ್ಚೆ ನಡೆಸಲಿದ್ದು, ಮುಂದಿನ ವಾರ ಶುಭ ಸುದ್ದಿ ನಿರೀಕ್ಷಿಸಬಹುದು.
ಸಿಆರ್ ಅರ್: ಬ್ಯಾಂಕುಗಳಲ್ಲಿರುವ ಠೇವಣಿಗೆ ಅನುಗುಣವಾಗಿ ಆರ್ ಬಿಐ ನಲ್ಲಿ ಇಡಬೇಕಾದ ಹಣದ ಮೊತ್ತ.
ರೆಪೋ ದರ: ಆರ್ ಬಿಐನಿಂದ ಬ್ಯಾಂಕುಗಳ ಹಣ ಪಡೆಯುವ ದರ.
ಒನ್ ಇಂಡಿಯಾ ಸುದ್ದಿ
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications