ಸತತವಾಗಿ ರೆಪೋ ದರ ಏರಿಕೆ, ಗೃಹ ಸಾಲ ಆಗಲಿದೆ ದುಬಾರಿ?
ಬೆಂಗಳೂರು, ಆಗಸ್ಟ್ 01: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ಸತತವಾಗಿ ಎರಡನೇ ಬರಿಗೆ ರೆಪೋ ದರ ಹೆಚ್ಚಳ ಮಾಡಿದೆ. ಈ ಮೂಲಕ ಗೃಹ ಸಾಲ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಹೆಚ್ಚಿದೆ. 25 ಮೂಲಾಂಶದಷ್ಟು ರೆಪೋ ರೇಟ್ ಹೆಚ್ಚಳವಾಗಿ 6.50% ಆಗಿದೆ.
2013ರ ಅಕ್ಟೋಬರ್ ನಂತರ ಇದೇ ಮೊದಲ ಬಾರಿಗೆ ಸತತವಾಗಿ ಎರಡನೇ ಬಾರಿಗೆ ರೆಪೋ ದರ ಈ ರೀತಿ ಏರಿಕೆ ಮಾಡಲಾಗಿದೆ. ಎರಡು ತಿಂಗಳಿಗೊಮ್ಮೆ ನಡೆಯುವ ಸಭೆಯಲ್ಲಿ ಆರು ಮಂದಿ ಸದಸ್ಯರ ಪೈಕಿ ಐದು ಮಂದಿ ದರ ಏರಿಕೆ ಪರ ಮತ ಹಾಕಿದರು.
ಎಸ್ ಬಿಐ ಹಾಗೂ ಎಚ್ ಡಿಎಫ್ ಸಿ ಸೇರಿದಂತೆ ಪ್ರಮುಖ ಬ್ಯಾಂಕ್ ಗಳು ಸಾಲ ಬಡ್ಡಿದರ ಬಗ್ಗೆ ಯಾವುದೇ ಪ್ರತಿಕ್ರಿಯೆ ತಕ್ಷಣಕ್ಕೆ ನೀಡಿಲ್ಲ.

ರೆಪೋ (ರೀಪರ್ಚೇಸಿಂಗ್ ರೇಟ್): ಕಮರ್ಷಿಯಲ್ ಬ್ಯಾಂಕ್ಗಳಿಗೆ ಆರ್ ಬಿಐ ನೀಡುವ ಅಲ್ಪಾವಧಿಯ ಸಾಲದ ಮೇಲಿನ ಬಡ್ಡಿದರ. ಇನ್ನು ಬ್ಯಾಂಕ್ಗಳಿಂದ ಸಾಲ ತೆಗೆದುಕೊಳ್ಳುವ ರಿವರ್ಸ್ ರೆಪೋ ರೇಟ್ ಶೇ.6.25% ರಷ್ಟು ಏರಿಕೆಯಾಗಿದೆ.
ಜೂನ್ ನಲ್ಲಿ ಆರ್ ಬಿಐ ರಾಜ್ಯಪಾಲ ಊರ್ಜಿತ್ ಪಟೇಲ್ ಅವರು ರೆಪೋ ದರವನ್ನು 25 ಮೂಲಾಂಶ ಏರಿಕೆ ಮಾಡಿ 6.25 %ಕ್ಕೇರಿಸಿದ್ದರು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ರೆಪೋ ದರ ಏರಿಕೆಯಾಗಿತ್ತು.
ಗ್ರಾಹಕರ ವಸ್ತುಗಳ ಹಣದುಬ್ಬರ ಇಳಿಕೆಗೆ ಆರ್ಬಿಐ ಕಸರತ್ತು ನಡೆಸಿದೆ. ಜೂನ್ ತಿಂಗಳಿನಲ್ಲಿ ವಾರ್ಷಿಕ ಗ್ರಾಹಕ ಹಣದುಬ್ಬರ ದರ ಶೇ 5ರಷ್ಟಿತ್ತು. ಅರ್ಥ ವ್ಯವಸ್ಥೆಯ ಉತ್ತೇಜನ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಸ್ಥಿರತೆ, ಹಣದುಬ್ಬರ ನಿಯಂತ್ರಣ ಹಿನ್ನೆಲೆಯಲ್ಲಿ ರೆಪೋ ದರ ಏರಿಕೆ ಅನಿವಾರ್ಯ ಎಂದು ಆರ್ ಬಿಐ ಹೇಳಿದೆ.
ನಗದು ಮೀಸಲು ಅನುಪಾತ (ಸಿಆರ್ ಆರ್) ಶೇ.4ರ ಪ್ರಮಾಣದಲ್ಲೇ ಇದೆ ಯಾವುದೇ ಬದಲಾವಣೆ ಮಾಡಿಲ್ಲ. ಅದರೆ, ಈಗ ಸಿಆರ್ ಅರ್ ದರ 50 ಮೂಲಾಂಶ ದರದಂತೆ ಇಳಿಕೆಯಾಗಲಿದೆ ಎಂಬ ನಿರೀಕ್ಷೆ ಇದೆ.
ಗಮನಿಸಿ:
ಸಿಆರ್ ಅರ್: ಬ್ಯಾಂಕುಗಳಲ್ಲಿರುವ ಠೇವಣಿಗೆ ಅನುಗುಣವಾಗಿ ಆರ್ ಬಿಐ ನಲ್ಲಿ ಇಡಬೇಕಾದ ಹಣದ ಮೊತ್ತ.
* ರೆಪೋ ದರ: ಆರ್ ಬಿಐನಿಂದ ಬ್ಯಾಂಕುಗಳ ಹಣ ಪಡೆಯುವ ದರ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications