ಇನ್ಫೋಸಿಸ್ ಫೌಂಡೇಷನ್ ನೋಂದಣಿ ರದ್ದುಪಡಿಸಿದ ಸರ್ಕಾರ
ನವದೆಹಲಿ/ಬೆಂಗಳೂರು, ಮೇ 14: ಇನ್ಫೋಸಿಸ್ ಸಹ ಸ್ಥಾಪಕ ಎನ್. ಆರ್ ನಾರಾಯಣಮೂರ್ತಿ ಅವರ ಪತ್ನಿ ಸುಧಾಮೂರ್ತಿ ಅವರ ನೇತೃತ್ವದ ಸರ್ಕಾರೇತರ ಸಂಸ್ಥೆ ಇನ್ಫೋಸಿಸ್ ಫೌಂಡೇಷನ್ ನ ನೋಂದಣಿ ರದ್ದಾಗಿದೆ.
ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ವಿದೇಶಿ ಕೊಡುಗೆ ಕಾಯ್ದೆ(ನಿಯಂತ್ರಣ) FCRA ಅಡಿಯಲ್ಲಿ ಎಲ್ಲಾ ಸರ್ಕಾರೇತರ ಸಂಸ್ಥೆ(ಎನ್ ಜಿಒ)ಗಳಿಗೆ ಆರ್ಥಿಕ ವ್ಯವಹಾರಗಳನ್ನು ದಾಖಲಿಸುವುದು ಕಡ್ಡಾಯವಾಗಿದೆ. ವಿದೇಶದಿಂದ ಪಡೆದ ಪ್ರತಿ ಮೊತ್ತವನ್ನು ಐಟಿ ರಿಟರ್ನ್ಸ್ ಹಾಗೂ ಎಫ್ ಸಿ ಆರ್ ಎ ಅಡಿಯಲ್ಲಿ ದಾಖಲೆ ಸಮೇತ ತೋರಿಸಬೇಕಾಗುತ್ತದೆ.

ಆದರೆ, ಇನ್ಫೋಸಿಸ್ ಸಂಸ್ಥೆ ಕಳೆದ ಎರಡು ವರ್ಷಗಳಲ್ಲಿ ವಾರ್ಷಿಕ ಆದಾಯ ಹಾಗೂ ಖರ್ಚು ವೆಚ್ಚಗಳ ವಿವರಗಳನ್ನು ನೀಡಿಲ್ಲ. ಕಳೆದ 6 ವರ್ಷಗಳಿಂದ ವಿದೇಶಿ ದೇಣಿಗೆ ವಿವರ ನೀಡಿಲ್ಲ. ಹಲವು ಬಾರಿ ನೋಟಿಸ್ ನೀಡಿದ್ದರೂ, ಈ ಬಗ್ಗೆ ಗಮನ ಹರಿಸದ ಕಾರಣ, ನೋಂದಣಿ ರದ್ದು ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಳೆದ ವರ್ಷ 1755 ಎನ್ ಜಿಒ ಗಳಿಗೆ ಈ ಕುರಿತಂತೆ ನೋಟಿಸ್ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಇನ್ಫೋಸಿಸ್ ಪ್ರತಿಷ್ಠಾನ, ನಮ್ಮ ಸಂಸ್ಥೆ FCRA ಅಡಿಯಲ್ಲಿ ಬರುವುದಿಲ್ಲ. 2016ರಲ್ಲಿ ಕಾಯ್ದೆಗೆ ತಿದ್ದುಪಡಿಯಾಗಿದೆ. ಈ ಬಗ್ಗೆ ಇಲಾಖೆಗೆ ತಿಳಿಸಲಾಗಿದೆ ಎಂದು ಕಾರ್ಪೊರೆಟ್ ವ್ಯವಹಾರಗಳ ಸಂವಹನ ವಿಭಾಗದ ರಿಷಿ ಬಸು ಪ್ರತಿಕ್ರಿಯಿಸಿದ್ದಾರೆ.
1996ರಲ್ಲಿ ಸ್ಥಾಪನೆಯಾದ ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸುಧಾಮೂರ್ತಿ ಅವರು ಅಧ್ಯಕ್ಷರಾಗಿದ್ದಾರೆ. ಗ್ರಾಮೀಣ ಭಾರತ ಅಭಿವೃದ್ಧಿ, ಆರೋಗ್ಯ, ಕಲೆ, ಶಿಕ್ಷಣ, ಸಂಸ್ಕೃತಿ ಕ್ಷೇತ್ರಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications