ಹೋಟೆಲ್ಗಳು ಸರ್ವಿಸ್ ಚಾರ್ಜ್ ವಿಧಿಸುವಂತಿಲ್ಲ: ಕೇಂದ್ರದ ಹೊಸ ಮಾರ್ಗಸೂಚಿ
ನವದೆಹಲಿ, ಜುಲೈ 4: ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಗ್ರಾಹಕರಿಗೆ ಸರ್ವಿಸ್ ಚಾರ್ಜ್ ವಿಧಿಸುವಂತಿಲ್ಲ ಎಂದು ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ, ಸರ್ವರ್ಗೆ ಗ್ರಾಹಕ ಸ್ವ ಇಚ್ಛೆಯಿಂದ ನೀಡುವ ಟಿಪ್ಸ್ ಹಣವನ್ನು ಹೋಟೆಲ್ನವರು ಬಿಲ್ನಲ್ಲೇ ವಸೂಲಿ ಮಾಡುವುದು ತಪ್ಪಲಿದೆ.
ಹೋಟೆಲ್ನವರು ಸೇವಾ ಶುಲ್ಕ ವಿಧಿಸುತ್ತಾರೆ ಎಂದು ದೇಶವ್ಯಾಪಿ ಬಹಳಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ. ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಇಂದು ಆದೇಶ ಹೊರಡಿಸಿದ್ದು, ಯಾವ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಗ್ರಾಹಕರಿಗೆ ನೀಡುವ ಬಿಲ್ನಲ್ಲಿ ಸರ್ವಿಸ್ ಚಾರ್ಜ್ ಸೇರಿಸುವಂತಿಲ್ಲ ಎಂದು ತಿಳಿಸಿದೆ. ಹಾಗೆಯೇ, ಈ ಸಂಬಂಧ ಮಾರ್ಗಸೂಚಿಗಳನ್ನೂ ಪ್ರಕಟಿಸಿದೆ.
ಈ ಆದೇಶದ ಮೂಲಕ ಸರ್ವಿಸ್ ಚಾರ್ಜ್ ವಿಚಾರದಲ್ಲಿ ಹೋಟೆಲ್ನವರು ಮತ್ತು ಗ್ರಾಹಕರಿಗೆ ಇದ್ದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

ಹೋಟೆಲ್ನವರು ಮತ್ತು ರೆಸ್ಟೋರೆಂಟ್ಗಳು ಸರ್ವಿಸ್ ಚಾರ್ಜ್ ವಿಧಿಸಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಈ ಹಿಂದೆಯೇ ತಿಳಿಸಿತ್ತಾದರೂ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಿರಲಿಲ್ಲ. ಹೀಗಾಗಿ, ಸರ್ವಿಸ್ ಚಾರ್ಜ್ ಕಾನೂನಾತ್ಮಕವಾಗಿ ಜಾರಿಯಾಗುವವರೆಗೂ ಅದನ್ನು ಮುಂದುವರೆಸಲು ಹೋಟೆಲ್ಗಳ ಸಂಘಟನೆ ನಿರ್ಧಾರ ತೆಗೆದುಕೊಂಡಿತ್ತು. ಈಗ ಸಿಸಿಪಿಎ ಹೊರಡಿಸಿರುವ ಮಾರ್ಗಸೂಚಿಗಳು ಗೊಂದಲಕ್ಕೆ ತೆರೆ ಎಳೆದಿವೆ.
ಸಿಸಿಪಿಎ ಹೊರಡಿಸಿರುವ ಹೊಸ ಮಾರ್ಗಸೂಚಿಗಳು ಬಹಳ ಸ್ಪಷ್ಟವಾಗಿ ಸರ್ವಿಸ್ ಚಾರ್ಜ್ ವಿಚಾರದ ಬಗ್ಗೆ ತಿಳಿಸಿದೆ. ಯಾವುದೇ ಹೋಟೆಲ್ ಅಥವಾ ರೆಸ್ಟೋರೆಂಟ್ ಸೇವಾ ಶುಲ್ಕವನ್ನು ನೀಡುವಂತೆ ಕಡ್ಡಾಯಪಡಿಸಿದಲ್ಲಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ದೂರು ದಾಖಲಿಸುವ ಅವಕಾಶ ಇರುತ್ತದೆ.
ಹಾಗೆಯೇ, ಇ-ದಾಖಿಲ್ (e-daakhil) ಪೋರ್ಟಲ್ ಮೂಲಕವೂ ಗ್ರಾಹಕರು ದೂರು ದಾಖಲಿಸಬಹುದು. ಬಹಳ ತ್ವರಿತವಾಗಿ ಮತ್ತು ಸಮರ್ಪಕವಾಗಿ ಪರಿಹಾರ ಪಡೆಯುವ ಸಾಧ್ಯತೆ ಇದೆ.

ಮಾರ್ಗಸೂಚಿಯಲ್ಲಿ ಏನಿದೆ?
"ಯಾವುದೇ ಹೋಟೆಲ್ ಅಥವಾ ರೆಸ್ಟೋರೆಂಟ್ ಕೂಡ ಬಿಲ್ನಲ್ಲಿ ಸರ್ವಿಸ್ ಚಾರ್ಜ್ ಸೇರಿಸುವಂತಿಲ್ಲ," ಎಂದು ಸ್ಪಷ್ಟವಾಗಿ ಬರೆದಿದೆ. ಬೇರೆ ಹೆಸರಿನಲ್ಲೂ ಸರ್ವಿಸ್ ಚಾರ್ಜ್ ಪಡೆಯುವಂತಿಲ್ಲ ಎಂದು ನಿರ್ದಿಷ್ಟಪಡಿಸಿದೆ.
ಸರ್ವಿಸ್ ಚಾರ್ಜ್ ಕೊಡದ ಗ್ರಾಹಕರಿಗೆ ಪ್ರವೇಶ ನಿರಾಕರಿಸುವುದು, ಅಥವಾ ಸರಿಯಾದ ಸೇವೆ ನೀಡದೇ ಇರುವುದು ಇದ್ಯಾವುದನ್ನೂ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಮಾಡುವಂತಿಲ್ಲ ಎಂದೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಗ್ರಾಹಕರು ಇಚ್ಛಿಸಿದಲ್ಲಿ ಮಾತ್ರ
ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ಸೇವೆ ನೀಡುವ ಸಿಬ್ಬಂದಿಗೆ ಗ್ರಾಹಕ ಸ್ವ ಇಚ್ಛೆಯಿಂದ ಕೊಡುವ ಹಣವೇ ಟಿಪ್ಸ್. ಈ ಟಿಪ್ಸ್ ಹಣವನ್ನೇ ಹೋಟೆಲ್ನವರು ಸರ್ವಿಸ್ ಚಾರ್ಜ್ ಹೆಸರಿನಲ್ಲಿ ಪಡೆಯುತ್ತಾರೆ. ಬಿಲ್ ಜೊತೆಗೇ ಈ ಸರ್ವಿಸ್ ಚಾರ್ಜ್ ಸೇರಿಸಿ ಗ್ರಾಹಕರಿಂದ ವಸೂಲಿ ಮಾಡುತ್ತಾರೆ. ಅಂದರೆ, ಗ್ರಾಹಕ ಟಿಪ್ಸ್ ಜೊತೆಗೆ ಸರ್ವಿಸ್ ಚಾರ್ಜ್ ಅನ್ನೂ ಕೊಡುವಂತಾಗುತ್ತದೆ. ಇದು ಹೋಟೆಲ್ನವರು ಗ್ರಾಹಕರಿಂದ ಮಾಡುತ್ತಿರುವ ಸುಲಿಗೆ ಎಂದು ಹಲವು ಜನರು ದೂರಿತ್ತದಿಂದ ಕೇಂದ್ರ ಸರಕಾರ ಈಗ ಮಾರ್ಗಸೂಚಿಗಳನ್ನು ಹೊರಡಿಸಿದೆ.
(ಒನ್ಇಂಡಿಯಾ ಸುದ್ದಿ)
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ












Click it and Unblock the Notifications