ವರ್ಷದೊಳಗೆ ಸೈಟ್ ಕೊಡಿ, ಇಲ್ಲವೇ ಬಡ್ಡಿ ಕೊಡಿ
ಬೆಂಗಳೂರು, ಫೆ. 16: ಗೃಹ ನಿರ್ಮಾಣ ಸಹಕಾರಿ ಸಂಘವು ಸದಸ್ಯರಿಂದ ಹಣ ಕಟ್ಟಿಸಿಕೊಂಡರೂ ನಿವೇಶನ ವಿತರಿಸದ ಕುರಿತು ಹಲವು ದೂರುಗಳು ಕೇಳಿಬಂದಿವೆ. ಹಲವು ಸಂಘಗಳು ಪೂರ್ಣಪ್ರಮಾಣದ ಹಣ ಕಟ್ಟಿಸಿಕೊಂಡು ಐದರಿಂದ ಹತ್ತು ವರ್ಷ ಕಳೆದರೂ ಸೈಟ್ ವಿತರಿಸಿಲ್ಲ. ಸಂಘಗಳು ಕಟ್ಟಿಸಿಕೊಂಡ ಹಣಕ್ಕೆ ಬಡ್ಡಿಯನ್ನೂ ನೀಡುವುದಿಲ್ಲ ಎಂಬ ಅಸಮಾಧಾನ ವ್ಯಾಪಕವಾಗಿ ವ್ಯಕ್ತವಾಗಿತ್ತು.
ಗೃಹ ನಿರ್ಮಾಣ ಸಹಕಾರಿ ಸಂಘದ ಸದಸ್ಯರ ಹಿತರಕ್ಷಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಸಹಕಾರಿ ಕಾಯ್ದೆಗೆ ತಿದ್ದುಪಡಿ ತರಲು ಸಿದ್ಧತೆ ನಡೆಸಿದೆ. ಸದಸ್ಯರಿಂದ ಕಟ್ಟಿಸಿಕೊಂಡ ಹಣಕ್ಕೆ ಬಡ್ಡಿ ಕಟ್ಟಬೇಕು ಎಂಬ ನಿಯಮ ಜಾರಿಗೊಳಿಸುವ ಸೂಚನೆ ನೀಡಿದೆ.

ಈ ಕುರಿತು ಸಹಕಾರಿ ಸಚಿವ ಎಚ್.ಎಸ್. ಮಹಾದೇವ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ್ದಾರೆ. "ಸಹಕಾರಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಭೂಮಿ ಖರೀದಿ ಹಾಗೂ ನಿವೇಶನ ವಿತರಣೆ, ಅಭಿವೃದ್ಧಿ ವಿಷಯಗಳಲ್ಲಿ ಅನುಮತಿ ಪಡೆಯಲು ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಲಾಗುವುದು" ಎಂದು ಹೇಳಿದ್ದಾರೆ.
''ಈವರೆಗೆ ಪ್ರತಿ ಹೌಸಿಂಗ್ ಸೊಸೈಟಿಯು 25ರಿಂದ 50 ಎಕರೆ ಭೂಮಿಯಷ್ಟೇ ಖರೀದಿಸಬಹುದು. ಆದ್ದರಿಂದ ಖರೀದಿ ಮಿತಿ ಹೆಚ್ಚಿಸಿ ಹೆಚ್ಚು ಜನರಿಗೆ ನಿವೇಶನ ಒದಗಿಸಲು ಅವಕಾಶ ಒದಗಿಸಲಾಗುವುದು. ಸೊಸೈಟಿಯೇ ಭೂಮಿ ಖರೀದಿಸಿ, ನಿವೇಶನ ಅಭಿವೃದ್ಧಿಪಡಿಸಿ ವಿತರಣೆ ಮಾಡಬೇಕು. ಸದಸ್ಯರಿಂದ ಹಣ ಕಟ್ಟಿಸಿಕೊಂಡ ವರ್ಷದೊಳಗೆ ನಿವೇಶನ ವಿತರಿಸದಿದ್ದರೆ ಪಡೆದ ಹಣಕ್ಕೆ ಬಡ್ಡಿ ಕಟ್ಟುವ ನಿಯಮ ಜಾರಿಗೊಳಿಸಲಾಗುವುದು. ಬಡ್ಡಿಯ ಪ್ರಮಾಣ ನಿಗದಿಪಡಿಸಿ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗುವುದು'' ಎಂದು ತಿಳಿಸಿದರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು












Click it and Unblock the Notifications