ವರ್ಷದೊಳಗೆ ಸೈಟ್ ಕೊಡಿ, ಇಲ್ಲವೇ ಬಡ್ಡಿ ಕೊಡಿ
ಬೆಂಗಳೂರು, ಫೆ. 16: ಗೃಹ ನಿರ್ಮಾಣ ಸಹಕಾರಿ ಸಂಘವು ಸದಸ್ಯರಿಂದ ಹಣ ಕಟ್ಟಿಸಿಕೊಂಡರೂ ನಿವೇಶನ ವಿತರಿಸದ ಕುರಿತು ಹಲವು ದೂರುಗಳು ಕೇಳಿಬಂದಿವೆ. ಹಲವು ಸಂಘಗಳು ಪೂರ್ಣಪ್ರಮಾಣದ ಹಣ ಕಟ್ಟಿಸಿಕೊಂಡು ಐದರಿಂದ ಹತ್ತು ವರ್ಷ ಕಳೆದರೂ ಸೈಟ್ ವಿತರಿಸಿಲ್ಲ. ಸಂಘಗಳು ಕಟ್ಟಿಸಿಕೊಂಡ ಹಣಕ್ಕೆ ಬಡ್ಡಿಯನ್ನೂ ನೀಡುವುದಿಲ್ಲ ಎಂಬ ಅಸಮಾಧಾನ ವ್ಯಾಪಕವಾಗಿ ವ್ಯಕ್ತವಾಗಿತ್ತು.
ಗೃಹ ನಿರ್ಮಾಣ ಸಹಕಾರಿ ಸಂಘದ ಸದಸ್ಯರ ಹಿತರಕ್ಷಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಸಹಕಾರಿ ಕಾಯ್ದೆಗೆ ತಿದ್ದುಪಡಿ ತರಲು ಸಿದ್ಧತೆ ನಡೆಸಿದೆ. ಸದಸ್ಯರಿಂದ ಕಟ್ಟಿಸಿಕೊಂಡ ಹಣಕ್ಕೆ ಬಡ್ಡಿ ಕಟ್ಟಬೇಕು ಎಂಬ ನಿಯಮ ಜಾರಿಗೊಳಿಸುವ ಸೂಚನೆ ನೀಡಿದೆ.

ಈ ಕುರಿತು ಸಹಕಾರಿ ಸಚಿವ ಎಚ್.ಎಸ್. ಮಹಾದೇವ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ್ದಾರೆ. "ಸಹಕಾರಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಭೂಮಿ ಖರೀದಿ ಹಾಗೂ ನಿವೇಶನ ವಿತರಣೆ, ಅಭಿವೃದ್ಧಿ ವಿಷಯಗಳಲ್ಲಿ ಅನುಮತಿ ಪಡೆಯಲು ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಲಾಗುವುದು" ಎಂದು ಹೇಳಿದ್ದಾರೆ.
''ಈವರೆಗೆ ಪ್ರತಿ ಹೌಸಿಂಗ್ ಸೊಸೈಟಿಯು 25ರಿಂದ 50 ಎಕರೆ ಭೂಮಿಯಷ್ಟೇ ಖರೀದಿಸಬಹುದು. ಆದ್ದರಿಂದ ಖರೀದಿ ಮಿತಿ ಹೆಚ್ಚಿಸಿ ಹೆಚ್ಚು ಜನರಿಗೆ ನಿವೇಶನ ಒದಗಿಸಲು ಅವಕಾಶ ಒದಗಿಸಲಾಗುವುದು. ಸೊಸೈಟಿಯೇ ಭೂಮಿ ಖರೀದಿಸಿ, ನಿವೇಶನ ಅಭಿವೃದ್ಧಿಪಡಿಸಿ ವಿತರಣೆ ಮಾಡಬೇಕು. ಸದಸ್ಯರಿಂದ ಹಣ ಕಟ್ಟಿಸಿಕೊಂಡ ವರ್ಷದೊಳಗೆ ನಿವೇಶನ ವಿತರಿಸದಿದ್ದರೆ ಪಡೆದ ಹಣಕ್ಕೆ ಬಡ್ಡಿ ಕಟ್ಟುವ ನಿಯಮ ಜಾರಿಗೊಳಿಸಲಾಗುವುದು. ಬಡ್ಡಿಯ ಪ್ರಮಾಣ ನಿಗದಿಪಡಿಸಿ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗುವುದು'' ಎಂದು ತಿಳಿಸಿದರು.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications