New Income Tax: ತೆರಿಗೆದಾರರಿಗೆ ಆಗುವ ಉಳಿತಾಯ ಎಷ್ಟು?
ನಿರೀಕ್ಷೆಯಂತೆ ಕೇಂದ್ರ ಸರ್ಕಾರ ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ತೆರಿಗೆದಾರರಿಗೆ ಸಿಹಿ ಸುದ್ದಿ ಕೊಟ್ಟಿದೆ. ಶನಿವಾರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆದಾರರಿಗೆ ಭರ್ಜರಿ ಕೊಡುಗೆ ಘೋಷಿಸಿದರು. ವಾರ್ಷಿಕ 12 ಲಕ್ಷ ರೂಪಾಯಿವರೆಗೆ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಲಾಗಿದ್ದು ಮಧ್ಯಮ ವರ್ಗದ ಜನರ ಬಹುದಿನದ ಬೇಡಿಕೆ ಈಡೇರಿಕೆಯಾಗಿದೆ.
ಹೊಸ ಆದಾಯ ತೆರಿಗೆ ಸ್ಲ್ಯಾಬ್ ಅಡಿಯಲ್ಲಿ ವಾರ್ಷಿಕ 12.75 ಲಕ್ಷ ರೂಪಾಯಿವರೆಗೆ ಆದಾಯ ಹೊಂದಿರುವವರು ಯಾವುದೇ ತೆರಿಗೆ ಪಾವತಿಸುವಂತಿಲ್ಲ ಎಂದು ಹೇಳಿದೆ. ಈ ಮೊದಲು ಇದು 7 ಲಕ್ಷ ರೂಪಾಯಿವರೆಗೆ ಇತ್ತು, ಈಗ ಅದನ್ನು 12 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಹೊಸ ತೆರಿಗೆ ಪದ್ಧತಿ ಸ್ಲ್ಯಾಬ್ ಹೀಗಿದೆ
- ₹ 4 ಲಕ್ಷದವರೆಗೆ ಆದಾಯ ಇದ್ದರೆ ಯಾವುದೇ ತೆರಿಗೆ ಇಲ್ಲ.
- ₹4 ರಿಂದ ₹8 ಲಕ್ಷ ಆದಾಯ ಹೊಂದಿದ್ದರೆ 5% ತೆರಿಗೆ
- ₹8 ರಿಂದ ₹12 ಲಕ್ಷ ಆದಾಯ ಹೊಂದಿದ್ದರೆ 10% ತೆರಿಗೆ
- ₹12 ರಿಂದ ₹16 ಲಕ್ಷ ಆದಾಯ ಹೊಂದಿದ್ದರೆ 20% ತೆರಿಗೆ
- ₹20 ರಿಂದ ₹24 ಲಕ್ಷ ಆದಾಯ ಹೊಂದಿದ್ದರೆ 25% ತೆರಿಗೆ
- ₹24 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿದ್ದ- 30% ತೆರಿಗೆ
ಹೊಸ ಪದ್ಧತಿಯಿಂದ ಎಷ್ಟು ಉಳಿತಾಯ
12 ಲಕ್ಷ ರೂಪಾಯಿವರೆಗೆ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ನೀಡಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಹೊಸ ತೆರಿಗೆ ಪದ್ಧತಿಯಲ್ಲಿ 12 ಲಕ್ಷ ರೂ.ಗಳ ಆದಾಯ ಹೊಂದಿರುವ ತೆರಿಗೆದಾರರು 80,000 ರೂಪಾಯಿಗಳಷ್ಟು ತೆರಿಗೆ ಪ್ರಯೋಜನವನ್ನು ಪಡೆಯುತ್ತಾರೆ. ಅಂದರೆ ಬರೋಬ್ಬರಿ 80,000 ರೂಪಾಯಿ ತೆರಿಗೆ ಹಣ ಉಳಿತಾಯವಾಗಲಿದೆ.
₹18 ಲಕ್ಷ ಆದಾಯ ಹೊಂದಿರುವ ವ್ಯಕ್ತಿಯು ಹೊಸ ತೆರಿಗೆ ಸ್ಲ್ಯಾಬ್ನಿಂದಾಗಿ 70,000 ರೂ.ಗಳ ತೆರಿಗೆ ಉಳಿತಾಯ ಮಾಡುತ್ತಾರೆ. ₹25 ಲಕ್ಷ ರೂಪಾಯಿವರೆಗೆ ವಾರ್ಷಿಕ ಆದಾಯ ಹೊಂದಿರುವವರಿಗೆ ಹೊಸ ತೆರಿಗೆ ಸ್ಲ್ಯಾಬ್ನಿಂದಾಗಿ 1,10,000 ರೂ.ಗಳ ತೆರಿಗೆ ಉಳಿತಾಯವಾಗಲಿದೆ.
10 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಬಹುದು ಎಂದು ನಿರೀಕ್ಷೆ ಮಾಡಲಾಗಿತ್ತಾದರೂ ಕೇಂದ್ರ ಸರ್ಕಾರ 12 ಲಕ್ಷ ರೂಪಾಯಿವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡುವ ಮೂಲಕ ಸಂಬಳದಾರರಿಗೆ, ನೌಕರರಿಗೆ, ಮಧ್ಯಮವರ್ಗದವರಿಗೆ ಭರ್ಜರಿ ಕೊಡುಗೆ ನೀಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications