ವಾಟ್ಸಾಪ್ ಮೂಲಕ LPG ಸಿಲಿಂಡರ್ ಬುಕ್ ಮಾಡೋದು ಹೇಗೆ?
ನವದೆಹಲಿ, ಜುಲೈ 27: ಮೋದಿ ಸರ್ಕಾರದ ಡಿಜಿಟಲ್ ಇಂಡಿಯಾದ ಆಶಯಕ್ಕೆ ತಕ್ಕಂತೆ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) ತನ್ನ ಗ್ರಾಹಕರಿಗೆ ಫೇಸ್ ಬುಕ್, ಟ್ವಿಟ್ಟರ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಈಗಾಗಲೇ ನೀಡಿದೆ. ಈಗ ಕೊರೊನಾವೈರಸ್
ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಕಾಯ್ದಿರಿಸಲು ವಾಟ್ಸಾಪ್ ಕೂಡಾ ಬಳಸಬಹುದಾಗಿದೆ.
Recommended Video
ಇಂಡಿಯನ್ ಆಯಿಲ್ನ ಇಂಡೇನ್ ಅನಿಲದ ಗ್ರಾಹಕರು, ಸುಲಭವಾಗಿ ವಾಟ್ಸಾಪ್ ಮೂಲಕ ಸಿಲಿಂಡರ್ ಬುಕ್ ಮಾಡಬಹುದು ಎಂದು ಇಂಡಿಯನ್ ಆಯಿಲ್ ಟ್ವೀಟ್ ಮಾಡಿದೆ. ಗ್ರಾಹಕರು 7588888824 ಸಂಖ್ಯೆಗೆ ಸಂದೇಶ ಕಳಿಸಿ ಬುಕ್ ಮಾಡಬಹುದು.
ಇಂಡಿಯನ್ ಆಯಿಲ್ ಬಳಿಕ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್) ವಾಟ್ಸಾಪ್ ಮೂಲಕ ಎಲ್ಪಿಜಿ ಸಿಲಿಂಡರ್ಗಳನ್ನು ಕಾಯ್ದಿರಿಸುವ ಸೌಲಭ್ಯ ನೀಡುತ್ತಿದೆ. ಬಿಪಿಸಿಎಲ್ ಸಂಖ್ಯೆ 1800224344 ಮೂಲಕ ವಾಟ್ಸಾಪ್ ನಲ್ಲಿ ನೋಂದಾಯಿಸಿಕೊಂಡು ಸಿಲಿಂಡರ್ ಬುಕ್ ಮಾಡಬಹುದು. ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್, ಯುಪಿಐ ಮತ್ತು ಅಮೆಜಾನ್ ನಂತಹ ಪಾವತಿ ಅಪ್ಲಿಕೇಶನ್ಗಳ ಮೂಲಕ ಹಣ ಪಾವತಿಸಬಹುದಾಗಿದೆ.

ಇದಲ್ಲದೆ, ಫೋನ್ ಕರೆ/ಎಸ್ಎಂಎಸ್ ಮೂಲಕ ಬುಕ್ಕಿಂಗ್ ವ್ಯವಸ್ಥೆ ಈಗಾಗಲೇ ದೇಶದ ಹಲವೆಡೆ ಜಾರಿಯಲ್ಲಿದೆ.ಟ್ವಿಟ್ಟರ್ ಮೂಲಕ ಬುಕ್ ಮಾಡಲು refill @indanerefill ಎಂದು ಟ್ವೀಟ್ ಮಾಡಿ ಪಡೆಯಬಹುದು.
Have you heard? You can now book your #Indane LPG cylinders using WhatsApp! Type REFILL and WhatsApp it to 7588888824 from your registered mobile number. #IndianOil pic.twitter.com/1mqOUK3h9B
— Indian Oil Corp Ltd (@IndianOilcl) July 25, 2020
ಸದ್ಯ ಚಾಲ್ತಿಯಲ್ಲಿರುವ ವ್ಯವಸ್ಥೆಯಂತೆ ಗ್ರಾಹಕರು ತಮ್ಮ ಗ್ಯಾಸ್ ಏಜೆನ್ಸಿ (ಇಂಡೇನ್, ಎಚ್ ಪಿ, ಭಾರತ್) ನೋಂದಣಿ ಮಾಡಿದ ದೂರವಾಣಿ ಸಂಖ್ಯೆ ಮೂಲಕ ಕರೆ ಮಾಡಿ ಅಥವಾ ಎಸ್ಎಂಎಸ್ ಮೂಲಕ (REFILL ಎಂದು ಟೈಪಿಸಿ ನೋಂದಾಯಿತ ಸಂಖ್ಯೆಗೆ ಕಳಿಸಬಹುದು) ಅಡುಗೆ ಅನಿಲ ಸಿಲಿಂಡರ್ ಬುಕ್ ಮಾಡಬಹುದು.
-
ದೇಶದಲ್ಲಿ ನಿಜಕ್ಕೂ ಎಲ್ಪಿಜಿ ಕೊರತೆ ಇದೆಯೇ, ಗಾಬರಿ ಬೇಡ: ಕೃಷ್ಣ ಭಟ್ ಬರಹ -
LPG ಪೂರೈಕೆ ವ್ಯತ್ಯಯ: ಬೆಂಗಳೂರಿನ ಪಿಜಿಗಳಲ್ಲೂ ಆಹಾರ ಪೂರೈಕೆ ಸ್ಥಗಿತದ ಭೀತಿ, ಆತಂಕದಲ್ಲಿ 10 ಲಕ್ಷ ಮಂದಿ -
ಹೋಟೆಲ್ ಬಂದ್ ಭೀತಿ, ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಗ್ಯಾಸ್ ಇಲ್ಲದೆ ಪರದಾಟ... LPG Shortage -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
ಹುಬ್ಬಳ್ಳಿಗೂ ತಟ್ಟಿದ ಯುದ್ಧದ ಬಿಸಿ; ಗ್ಯಾಸ್ ಇಲ್ಲದೆ ಮಂಗಳವಾರ ರಾತ್ರಿಯಿಂದಲೇ ಹೋಟೆಲ್ಗಳು ಬಂದ್ ಸಾಧ್ಯತೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications