ತಕ್ಷಣ ರೀಚಾರ್ಜ್ ಮಾಡಿ ನಂತರ ಪಾವತಿಸಿ: ಜಿಯೊ ಪರಿಚಯಿಸುತ್ತಿದೆ 'ಎಮರ್ಜೆನ್ಸಿ ಡೇಟಾ ಲೋನ್' ಸೌಲಭ್ಯ
ನವದೆಹಲಿ, ಜುಲೈ 04: ಮುಕೇಶ್ ಅಂಬಾನಿ ಅವರ ರಿಲಯನ್ಸ್ ಜಿಯೊ ಕಂಪನಿ ಇದೀಗ ತನ್ನ ಬಳಕೆದಾರರಿಗೆ ತಕ್ಷಣವೇ ರೀಚಾರ್ಜ್ ಮಾಡಿ ನಂತರ ಪಾವತಿ ಮಾಡಬಹುದಾದ 'ಎಮರ್ಜೆನ್ಸಿ ಡೇಟಾ ಲೋನ್' ಸೌಲಭ್ಯ ಪರಿಚಯಿಸುತ್ತಿದೆ.
ಡೇಟಾ ಟಾಪ್ಅಪ್ ಅನ್ನು ತಕ್ಷಣವೇ ಖರೀದಿಸುವ ಪರಿಸ್ಥಿತಿಯಲ್ಲಿ, ಬೇರೆ ಬೇರೆ ಕಾರಣಗಳಿಗಾಗಿ ಎಲ್ಲ ಬಳಕೆದಾರರೂ ಇರುವುದಿಲ್ಲ ಎಂಬುದು ಭಾರತದ ಕಿರಿಯ, ಆದರೆ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿರುವ ಜಿಯೊಗೆ ತಿಳಿದಿದೆ.
ಜಿಯೊದ ಬಳಕೆದಾರರು ತಮ್ಮ ಹೈಸ್ಪೀಡ್ ಡೇಟಾದ ಕೋಟಾ ಮುಗಿದು ಹೋದಾಗ, ತಕ್ಷಣವೇ ರಿಜಾರ್ಜ್ ಮಾಡಿಕೊಳ್ಳಲು ಸಾಧ್ಯವಾಗದಿರುವ ಪರಿಸ್ಥಿತಿಯಲ್ಲಿ 'ಈಗಲೇ ರೀಚಾರ್ಜ್ ಮಾಡಿಕೊಳ್ಳಿ ಮತ್ತು ನಂತರ ಪಾವತಿಸಿ' ಅನುಕೂಲತೆಯನ್ನು ತುರ್ತು ಡೇಟಾ ಸಾಲ ಸೌಲಭ್ಯ ಒದಗಿಸುತ್ತದೆ.

ಈ ಸೌಲಭ್ಯದಡಿಯಲ್ಲಿ, ಜಿಯೊ ತನ್ನ ಪ್ರೀಪೇಯ್ಡ್ ಬಳಕೆದಾರರಿಗೆ 1 ಜಿಬಿಯ (ಪ್ರತಿ ಪ್ಯಾಕ್ಗೆ ₹11 ಮೌಲ್ಯ) ಐದು ತುರ್ತು ಡೇಟಾವರೆಗಿನ ಸಾಲ ಪಡೆಯಲು ಅವಕಾಶ ನೀಡುತ್ತದೆ. ತುರ್ತು ಡೇಟಾ ಸೌಲಭ್ಯವನ್ನು ಮೈ ಜಿಯೊ ಆಪ್ (MyJio App) ಮೂಲಕ ಪಡೆದುಕೊಳ್ಳಬಹುದಾಗಿದೆ.
ಜಿಯೊ ಬಳಕೆದಾರರು ಈಗಾಗಲೇ ಉತ್ತಮ ನೆಟ್ವರ್ಕ್ ಸಂಪರ್ಕ ಮತ್ತು ಹೈ ಸ್ಪೀಡ್ಗಳನ್ನು ಅನುಭವಿಸಲು ಶುರುಮಾಡಿದ್ದಾರೆ. ಹಲವು ಬಳಕೆದಾರರು ದಿನದಲ್ಲಿ ಬಹುಬೇಗನೇ ತಮ್ಮ ಹೈ ಸ್ಪೀಡ್ ಡೇಟಾ ಕೋಟಾವನ್ನು ಬಳಸಿ ಮುಗಿಸಿಬಿಡುತ್ತಾರೆ. ಅವರು ದಿನದ ಉಳಿದ ಸಮಯದಲ್ಲಿ ಹೈ ಸ್ಪೀಡ್ ಡೇಟಾ ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಎಲ್ಲ ಬಳಕೆದಾರರೂ ತಮ್ಮ ದೈನಂದಿನ ಕೋಟಾ ಖಾಲಿಯಾದ ತಕ್ಷಣವೇ ಹೊಸ ಡೇಟಾ ಟಾಪ್-ಅಪ್ ಖರೀದಿಸುವ ಪರಿಸ್ಥಿತಿಯಲ್ಲಿ ಇರುವುದಿಲ್ಲ ಎಂದು ಜಿಯೊ ಅರಿತಿದೆ. ಅವರಿಗಾಗಿಯೇ ಈ ಹೊಸ ಸೌಲಭ್ಯವನ್ನು ಪರಿಚಯಿಸಲಾಗುತ್ತಿದೆ.
ಎಮರ್ಜೆನ್ಸಿ ಡೇಟಾ ಲೋನ್ ಸೌಲಭ್ಯ ಪಡೆಯುವುದು ಹೇಗೆ?
1) ಮೈ ಜಿಯೊ (Myjio) ಆಪ್ ಓಪನ್ ಮಾಡಿ. ಪುಟದ ಎಡತುದಿಯಲ್ಲಿರುವ 'ಮೆನು'ಗೆ ಹೋಗಿ.
2) ಮೊಬೈಲ್ ಸರ್ವಿಸ್ ಅಡಿಯಲ್ಲಿರುವ 'ಎಮರ್ಜೆನ್ಸಿ ಡೇಟಾ ಲೋನ್' ಆಯ್ಕೆ ಮಾಡಿ.
3) ಎಮರ್ಜೆನ್ಸಿ ಡೇಟಾ ಲೋನ್ ಬ್ಯಾನರ್ ಮೇಲಿರುವ 'ಪ್ರೊಸೀಡ್' ಆಯ್ಕೆ ಕ್ಲಿಕ್ ಮಾಡಿ
4) 'ಗೆಟ್ ಎಮರ್ಜೆನ್ಸಿ ಡೇಟಾ' ಆಯ್ಕೆಯನ್ನು ಆಯ್ದುಕೊಳ್ಳಿ
5) 'ಆಕ್ಟೀವ್ ನೌ' ಆಯ್ಕೆಯ ಮೇಲೆ ಕ್ಲಿಕ್ ಮಾಡಿ,
6) ಎಮರ್ಜೆನ್ಸಿ ಡೇಟಾ ಲೋನ್ ಸೌಲಭ್ಯ ಆಕ್ಟಿವೇಟ್ ಆಗಿರುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications