ಎಚ್ ಎಸ್ ಬಿಸಿ ಬ್ಯಾಂಕ್ ಬಾಗಿಲು ಮುಚ್ಚಲಿದೆ
ಮುಂಬೈ, ನ.28: ಜಾಗತಿಕವಾಗಿ ಪ್ರಮುಖ ಬ್ಯಾಂಕ್ ಸಂಸ್ಥೆ ಎಚ್ ಎಸ್ ಬಿಸಿ ಭಾರತದಲ್ಲಿನ ತನ್ನ ಖಾಸಗಿ ಬ್ಯಾಂಕಿಂಗ್ ಸೇವೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಲಿದೆ. ಮನಿಲ್ರಾಂಡಿಂಗ್ ಸಮಸ್ಯೆಯಲ್ಲಿ ಸಿಲುಕಿರುವ ಎಚ್ ಎಸ್ ಬಿಸಿ 2016ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ನಿರ್ಗಮಿಸಲಿದೆ.
ರಾಯಲ್ ಬ್ಯಾಂಕ್ ಆಫ್ ಸ್ಕಾಟ್ಲೆಂಡ್ ಹಾಗೂ ಸ್ವಿಸ್ ಬ್ಯಾಂಕಿಂಗ್ ಸಂಸ್ಥೆ ಯುಬಿಎಸ್ ನಿರ್ಗಮನದ ನಂತರ ಭಾರತದಿಂದ ಹೊರ ಹೋಗುತ್ತಿರುವ ಸಂಸ್ಥೆಗಳ ಪೈಕಿ ಎಚ್ ಎಸ್ ಬಿಸಿ ಮೂರನೇ ಸಂಸ್ಥೆಯಾಗಿದೆ.
ಎಚ್ ಎಸ್ ಬಿಸಿ ಸಂಸ್ಥೆ ಶುಕ್ರವಾರವೇ ತನ್ನ ಉದ್ಯೋಗಿಗಳಿಗೆ ಈ ಬಗ್ಗೆ ಅಧಿಕೃತವಾಗಿ ಇಮೇ ಲ್ ಕಳಿಸಿದೆ. ಭಾರತದಲ್ಲಿ ಸುಮಾರು 32,000 ಮಂದಿ ಉದ್ಯೋಗಿಗಳನ್ನು ಹೊಂದಿದೆ. ದೇಶದ ಆರೇಳು ಬ್ರ್ಯಾಂಚ್ ಗಳಲ್ಲಿ ರೀಟೈಲ್ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದೆ.

2012ರಲ್ಲಿ ಸಂಸ್ಥೆಯ ನಿವ್ವಳ ಲಾಭ ಶೇ 16.5 ರಷ್ಟು ಕುಸಿತ ಕಂಡಿತ್ತು. ಅಮೆರಿಕದ ಮನಿ ಲಾಂಡ್ರಿಂಗ್ ದಂಡಗಳು, ಹೆಚ್ಚಿನ ತೆರಿಗೆ ಪಾವತಿ, ಅಕೌಂಟಿಂಗ್ ಶುಲ್ಕ, ಹಗರಣಗಳಲ್ಲಿ ಹಣ ಸೋರಿಕೆ ಎಲ್ಲವೂ ಎಚ್ ಎಸ್ ಬಿಸಿಗೆ ಮುಳುವಾಗಿದೆ. ಸದ್ಯಕ್ಕೆ ಎಚ್ ಎಸ್ ಬಿಸಿ ಏಷ್ಯಾದಲ್ಲಿ ತನ್ನ ಮಾರುಕಟ್ಟೆ ಹುಡುಕುತ್ತಿದೆ.
ಅಕ್ರಮ ಹಣ ರವಾನೆ, ಅಕ್ರಮ ಔಷಧಿ ಸಾಗಾಟ, ಭಯೋತ್ಪಾದಕ ಸಂಘಟನೆಗಳಿಗೆ ಹಣ ವರ್ಗಾವಣೆ, ಅಕ್ರಮ ಹಣ ಸಕ್ರಮಗೊಳಿಸಿದ ಆರೋಪ ಹೊತ್ತಿರುವ ಬ್ಯಾಂಕಿಂಗ್ ಸಂಸ್ಥೆ ಎಚ್ ಎಸ್ ಬಿಸಿ ಈಗ ಭಾರಿ ದಂಡಕ್ಕೆ ಬಲಿಯಾಗಬೇಕಾಯಿತು.
ಸೌದಿ ಅರೇಬಿಯಾ, ಬಾಂಗ್ಲಾದೇಶ, ಸಿರಿಯಾ, ಕ್ಯೂಬಾ, ಮೆಕ್ಸಿಕೋ, ಇರಾನ್, ಉತ್ತರ ಕೊರಿಯಾ, ಬರ್ಮಾ, ಕೇಮ್ಯಾನ್ ಐಲ್ಯಾಂಡ್ಸ್, ಜಪಾನ್ ಮತ್ತು ರಷ್ಯಾದ ವಿವಿಧ ಸಂಸ್ಥೆಗಳ ಜತೆ ಈ ಬ್ಯಾಂಕ್ ಹಲವಾರು ಪ್ರಶ್ನಾರ್ಹ ಹಣಕಾಸಿನ ವ್ಯವಹಾರ ನಡೆಸಿದೆ.
ಯುರೋಪಿನ ಅತಿ ದೊಡ್ಡ ಬ್ಯಾಂಕಿನ ಜಾಲ ಹೊಂದಿರುವ, ಅಮೆರಿಕದ ಪ್ರಮುಖ ಬ್ಯಾಂಕ್ ಕೂಡಾ ಆಗಿರುವ ಎಚ್ ಎಸ್ ಬಿಸಿ ಸುಮಾರು 5,000 ಉದ್ಯೋಗಿಗಳನ್ನು ಈಗಾಗಾಲೇ ಮನೆಗೆ ಕಳಿಸಿದೆ. (ಒನ್ ಇಂಡಿಯಾ ಸುದ್ದಿ)
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ











Click it and Unblock the Notifications