ತಲೆಮರೆಸಿಕೊಳ್ಳಬೇಕಾದ ದರ್ದು ನನಗಿಲ್ಲ ಎಂದ ಮಲ್ಯ
ನವದೆಹಲಿ, ಮಾರ್ಚ್, 07: ಸುಸ್ತಿದಾರ ಎಂದು ಕರೆಸಿಕೊಂಡು ಆಸ್ತಿ ಹರಾಜಿನವರೆಗೆ ಬಂದು ನಿಂತಿದ್ದ ಮದ್ಯದ ದೊರೆ ವಿಜಯ್ ಮಲ್ಯ ಅಂತೂ ಮಾತನಾಡಿದ್ದಾರೆ. ನನ್ನ ವಿರುದ್ಧ ತಪ್ಪು ಮಾಹಿತಿ ರವಾನೆ ಮಾಡಲಾಗುತ್ತಿದೆ, ನಾನು ಎಲ್ಲಿಯೂ ತಲೆ ಮರೆಸಿಕೊಂಡಿಲ್ಲ ಎಂದು ಮಲ್ಯ ಸ್ಪಷ್ಟನೆ ನೀಡಿದ್ದಾರೆ.
ಸಾಲ ನೀಡಿದವರಿಗೆ ಹೆಚ್ಚುವರಿ ಪಾವತಿ ಮೂಲಕ ಕಂತಿನಲ್ಲಿ ಸಾಲ ತೀರಿಸಲು ಪ್ರಯತ್ನಿಸುತ್ತಿದ್ದೇನೆ. ಎಲ್ಲ ಸಾಲಗಳ ಮುಖವಾಣಿಯಾಗಿ ನನ್ನನ್ನು ಬಿಂಬಿಸಲಾಗುತ್ತಿದೆ ಮತ್ತು ನನ್ನ ವಿರುದ್ಧ ತಪ್ಪು ಮಾಹಿತಿ ರವಾನಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.[ಸಾಲ ಮಾಡಿ ತುಪ್ಪ ತಿಂದ ಮಲ್ಯಗೆ ಬಂಧನ ಭೀತಿ]

ಮಾಧ್ಯಮಗಳೊಂದಿಗೆ ಸೋಮವಾರ ಮಾತನಾಡಿ ನಾನು ಪಲಾಯನ ಮಾಡಿಲ್ಲ. ಅಂತ ತುರ್ತು ನನಗಿಲ್ಲ. ನಾನು ತಲೆ ಮರೆಸಿಕೊಂಡು ಓಡಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನನ್ನ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಬೇಕು ಎಂಬ ಉದ್ದೇಶದಿಂದ ಇಂಗ್ಲೆಂಡ್ ಗೆ ತೆರಳಬೇಕು ಎಂದು ಯೋಚನೆ ಮಾಡಿದ್ದೆ. ಪಲಾಯನ ಮಾಡುವ ಉದ್ದೇಶ ನನಗಿಲ್ಲ ಎಂದು ಮಲ್ಯ ಹೇಳಿದ್ದಾರೆ.['ಅರುವತ್ತಕ್ಕೆ ಅರಳು ಮರಳು, ಅಡ್ವಾಣಿಯಂತಾದ ಮಲ್ಯ!']
ಹಣ ಯಾರಿಗೆ ಸೇರುತ್ತೆ?
ಯುನೈಟೆಡ್ ಸ್ಪಿರಿಟ್ಸ್ ಕಂಪನಿಯ ಮುಖ್ಯಸ್ಥ ಹುದ್ದೆಯಿಂದ ನಿರ್ಗಮಿಸಿದ್ದಕ್ಕಾಗಿ ಬ್ರಿಟನ್ ನ ಡೈಜಿಯೋ ಕಂಪೆನಿಯಿಂದ ವಿಜಯ್ ಮಲ್ಯಗೆ 515 ಕೋಟಿ ರು. ನೀಡಲಿದೆ. ಆದರೆ ಇದನ್ನು ಸ್ಟೇಟ್ ಬ್ಯಾಂಕ್ ನೇತೃತ್ವದ ಬ್ಯಾಂಕುಗಳ ಒಕ್ಕೂಟ ನಮಗೆ ಸೇರಬೇಕು ಎಂದು ಅರ್ಜಿ ಸಲ್ಲಿಸಿದ್ದು ಅದರ ತೀರ್ಮಾನವನ್ನು ಬೆಂಗಳೂರಿನ ನ್ಯಾಯಾಲಯ ಸೋಮವಾರ, ಮಾರ್ಚ್ 7ರಂದು ಪ್ರಕಟ ಮಾಡಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications