ಭಾರತ ಮೂಲದ ಅರವಿಂದ್ ಕೃಷ್ಣ ಐಬಿಎಂ ಸಿಇಒ ಹುದ್ದೆಯಿಂದ ಚೇರ್ಮನ್ ಸ್ಥಾನಕ್ಕೆ
ನ್ಯೂಯಾರ್ಕ್, ಡಿ.17: ಅಮೆರಿಕ ಮೂಲದ ಐಟಿ ದಿಗ್ಗಜ ಇಂಟರ್ ನ್ಯಾಷನಲ್ ಬಿಸಿನೆಸ್ ಮಷಿನ್ಸ್(ಐಬಿಎಂ) ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಸಿಇಒ) ಆಗಿ ಕಾರ್ಯ ನಿರ್ವಹಿಸುತ್ತಿರುವ ಭಾರತ ಮೂಲದ ಅರವಿಂದ್ ಕೃಷ್ಣ ಅವರಿಗೆ ಮಹತ್ವದ ಹುದ್ದೆ ನೀಡಲಾಗಿದೆ.
ತಂತ್ರಜ್ಞಾನ ಕ್ಷೇತ್ರ ದಿಗ್ಗಜ ಮಹಿಳಾ ಉದ್ಯಮಿ, ಐಬಿಎಂ ಮಾಜಿ ಸಿಇಒ ಗಿನ್ನಿ ರೊಮೆಟ್ಟಿ ಅವರ ಸ್ಥಾನಕ್ಕೆ ಕೃಷ್ಣ ಅವರನ್ನು ನೇಮಿಸಲಾಗಿದೆ. ಜನವರಿ 01,2021ರಿಂದ ಕೃಷ್ಣ ಅವರು ಐಬಿಎಂ ಚೇರ್ಮನ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಏಪ್ರಿಲ್ 06ರಿಂದ ಅರವಿಂದ್ ಅವರ ಸಿಇಒ ಅಧಿಕಾರಾವಧಿ ಆರಂಭವಾಗಿತ್ತು. ಇದಕ್ಕೂ ಮುನ್ನ ಕೃಷ್ಣ ಅವರು ಸದ್ಯ ಐಬಿಎಂನಲ್ಲಿ ಹಿರಿಯ ಉಪಾಧ್ಯಕ್ಷರಾಗಿ, ಕ್ಲೌಡ್ ಹಾಗೂ ಕಾಗ್ನಿಟಿವ್ ಸಾಫ್ಟ್ ವೇರ್ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ಸುಮಾರು 40 ವರ್ಷಗಳ ಬಳಿಕ 62 ವರ್ಷ ವಯಸ್ಸಿನ ರೊಮೆಟ್ಟಿ ಅವರು ಸಿಇಒ ಸ್ಥಾನದಿಂದ ಕೆಳಗಿಳಿದಿದ್ದರು. 57 ವರ್ಷ ವಯಸ್ಸಿನ ಕೃಷ್ಣ ಅಧಿಕಾರ ವಹಿಸಿಕೊಂಡಿದ್ದರು.
ಐಬಿಎಂ ಚೇರ್ಮನ್, ಅಧ್ಯಕ್ಷೆ, ಸಿಇಒ ಆಗಿದ್ದ ರೊಮೆಟ್ಟಿ ಕಾರ್ಯಕಾರಿ ಚೇರ್ಮನ್ ಆಗಿ ಮುಂದುವರೆದಿದ್ದರು. ಈಗ ಚೇರ್ಮನ್ ಸ್ಥಾನಕ್ಕೆ ಕೃಷ್ಣ ಅವರನ್ನು ನೇಮಿಸಲಾಗಿದೆ. ರೆಡ್ ಹ್ಯಾಟ್ ಹಾಗೂ ಐಬಿಎಂ ಹಿರಿಯ ಉಪಾಧ್ಯಕ್ಷರಾಗಿರುವ ಜೇಮ್ಸ್ ವೈಟ್ ಹರ್ಸ್ಟ್ ಅವರನ್ನು ಐಬಿಎಂ ಅಧ್ಯಕ್ಷ ಸ್ಥಾನಕ್ಕೇರಿಸಲಾಗಿದೆ.
ಐಐಟಿ ಕಾನ್ಪುರ್ ನಿಂದ ಪದವಿ ಪಡೆದ ಬಳಿಕ1990ರಲ್ಲಿಐಬಿಎಂ ಸೇರಿದ ಕೃಷ್ಣ ಅವರು ಇಲಿನಾಯ್ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ ಇಂಜಿನಿಯರ್ ವಿಷಯದಲ್ಲಿ ಪಿಎಚ್ ಡಿ ಪಡೆದಿದ್ದಾರೆ. ಕೃಷ್ಣ ಹೆಸರಿನಲ್ಲಿ 15 ಪೆಟೆಂಟ್ ಗಳಿವೆ. ಐಇಇಇ ಹಾಗೂ ಎಸಿಎಂ ಜರ್ನಲ್ಸ್ ಸಂಪಾದಕರಾಗಿದ್ದರು. ತಾಂತ್ರಿಕ ವಿಷಯಗಳ ಬಗ್ಗೆ ಉತ್ತಮ ಲೇಖನಗಳನ್ನು ಬರೆದಿದ್ದಾರೆ. ಓಪನ್ ಸೋರ್ಸ್ ತಂತ್ರಜ್ಞಾನ ದೈತ್ಯ ರೆಡ್ ಹ್ಯಾಟ್ ಸಂಸ್ಥೆಯನ್ನು 109 ವರ್ಷಗಳ ಇತಿಹಾಸ ಹೊಂದಿರುವ ಐಬಿಎಂ ಸಂಸ್ಥೆಯು ಖರೀದಿಸುವಲ್ಲಿ ಕೃಷ್ಣಮಹತ್ವದ ಪಾತ್ರ ವಹಿಸಿದ್ದರು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications