ಐಬಿಎಂ ನಲ್ಲಿ ಉದ್ಯೋಗ ಕಡಿತವಿಲ್ಲ: ಕಂಪನಿ ಸ್ಪಷ್ಟನೆ
ದೈತ್ಯ ಕಂಪನಿಗಳಾದ ಕಾಗ್ನಿಝೆಂಟ್, ವಿಪ್ರೋ, ಇನ್ಫೋಸಿಸ್ ಮುಂತಾದ ಕಂಪನಿಗಳು ತಮ್ಮಲ್ಲಿನ ಉದ್ಯೋಗಿಗಳ ಸಂಖ್ಯೆಯನ್ನು ಗಣನೀಯ ಮಟ್ಟದಲ್ಲಿ ಇಳಿಕೆ ಮಾಡಲು ಮುಂದಾಗಿರುವುದು ಆ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ.
ನವದೆಹಲಿ, ಮೇ 17: ಭಾರತೀಯ ಐಟಿ ವಲಯವನ್ನು ತಲ್ಲಣಗೊಳಿಸುತ್ತಿರುವ 'ಉದ್ಯೋಗ ಕಡಿತ'ದ ಸಮಸ್ಯೆ ಐಬಿಎಂ ಸಂಸ್ಥೆಯನ್ನೇನೂ ಬಾಧಿಸದು. ಹಾಗಾಗಿ, ಕಂಪನಿಯ ಉದ್ಯೋಗಿಗಳನ್ನು ಕಡಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಆ ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐಬಿಎಂ ಕಂಪನಿಯು ತನ್ನಲ್ಲಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳಲ್ಲಿ ಸುಮಾರು 5000 ಮಂದಿಯನ್ನು ಮನೆಗೆ ಕಳುಹಿಸುವ ನಿರ್ಧಾರ ಕೈಗೊಂಡಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕಂಪನಿಯ ಅಧಿಕಾರಿ ಹೀಗೆ ಸ್ಪಂದಿಸಿದ್ದಾರೆ.

ಖಾಸಗಿ ಟಿವಿ ವಾಹಿನಿಯೊಂದಕ್ಕೆ ಇ- ಮೇಲ್ ಮೂಲಕ ಸ್ಪಷ್ಟನೆ ನೀಡಿರುವ ಐಬಿಎಂ ಕಂಪನಿಯ ಭಾರತ ಮಾರುಕಟ್ಟೆಯ ವಕ್ತಾರ, ''ಕೆಲವು ಐಟಿ ಕಂಪನಿಗಳಲ್ಲಿ ಉದ್ಯೋಗ ಕಡಿತ ಮಾಡಿದಂತೆ ಐಬಿಎಂನಲ್ಲೂ ಉದ್ಯೋಗ ಕಡಿತವಾಗುತ್ತದೆ ಎಂಬ ವದಂತಿಗಳು ಸತ್ಯಕ್ಕೆ ದೂರವಾದವು. ನಮ್ಮ ಆಡಳಿತ ಮಂಡಳಿಗೆ ಅಂಥ ಯಾವುದೇ ಆಲೋಚನೆಗಳಿಲ್ಲ'' ಎಂದಿದ್ದಾರೆ.
ಮಾಹಿತಿ ತಂತ್ರಜ್ಞಾನ ವಲಯದ ದೈತ್ಯ ಕಂಪನಿಗಳಾದ ಕಾಗ್ನಿಝೆಂಟ್, ವಿಪ್ರೋ, ಇನ್ಫೋಸಿಸ್ ಮುಂತಾದ ಕಂಪನಿಗಳು ತಮ್ಮಲ್ಲಿನ ಉದ್ಯೋಗಿಗಳ ಸಂಖ್ಯೆಯನ್ನು ಗಣನೀಯ ಮಟ್ಟದಲ್ಲಿ ಇಳಿಕೆ ಮಾಡಲು ಮುಂದಾಗಿವೆ.
ಗುಣಮಟ್ಟದ ಸೇವೆಯ ಆಧಾರದಲ್ಲಿ ಈ ಉದ್ಯೋಗ ಕಡಿತ ಯಜ್ಞಕ್ಕೆ ಆ ಕಂಪನಿಗಳು ಕೈಹಾಕಿರುವುದರಿಂದ ಸಾವಿರಾರು ಐಟಿ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ, ಕೆಲಸ ಕಳೆದುಕೊಳ್ಳುವವರಿದ್ದಾರೆ.
ಮುಂದಿನ 2-3 ವರ್ಷಗಳಲ್ಲಿ ಹೀಗೆ ಉದ್ಯೋಗ ಕಳೆದುಕೊಳ್ಳುವ ಟೆಕಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ ಎಂದು ವರದಿಯೊಂದು ಹೇಳಿದೆ.
{promotion-urls}
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications