ಐಬಿಎಂನಲ್ಲಿ 2,000 ಉದ್ಯೋಗಿಗಳಿಗೆ 'ಪಿಂಕ್ ಸ್ಲಿಪ್'
ಬೆಂಗಳೂರು, ಜೂನ್ 09: ಇಂಟರ್ ನ್ಯಾಷನಲ್ ಬಿಸಿನೆಸ್ ಮಷಿನ್ ಕಾರ್ಪ್ (ಐಬಿಎಂ) ಸುಮಾರು 2000 ಉದ್ಯೋಗಿಗಳಿಗೆ 'ಪಿಂಕ್ ಸ್ಲಿಪ್' ಕೊಟ್ಟು ಮನೆಗೆ ಕಳಿಸಲಿದೆ ಎಂಬ ಸುದ್ದಿ ಬಂದಿದೆ. ಹಲವು ಬಾರಿ ಉದ್ಯೋಗ ಕಡಿತ ಸುದ್ದಿಯನ್ನು ಐಬಿಎಂ ತಳ್ಳಿ ಹಾಕಿತ್ತು.
ಆದರೆ, ಈಗ ತನ್ನ 3,50,600 ಉದ್ಯೋಗಿಗಳ ಪೈಕಿ ಶೇ 1ರಷ್ಟು ಕಡಿತಕ್ಕೆ ಮುಂದಾಗಿದ್ದು, ಇದರ ಮೊದಲ ಭಾಗವಾಗಿ 2000 ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ. ಉದ್ಯೋಗಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸ್ಥೆಯ ಮೂಲಗಳು ಹೇಳಿವೆ.

'ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಉದ್ಯೋಗಿಗಳ ಕಡಿತ ಸುದ್ದಿಯನ್ನು ಖಚಿತ ಪಡಿಸಿರುವ ಐಬಿಎಂ, ಸ್ಪರ್ಧಾತ್ಮಕ ಮಟ್ಟದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಉದ್ಯೋಗಿಗಳು ಸಂಸ್ಥೆ ತೊರೆಯಬೇಕಾಗುತ್ತದೆ. ಐಟಿ ಮಾರುಕಟ್ಟೆಯಲ್ಲಿ ಪ್ರಗತಿ ಕಾಣಲು ಇದು ಅನಿವಾರ್ಯ, ಕ್ಲೈಂಟುಗಳ ಅಗತ್ಯಕ್ಕೆ ತಕ್ಕಂತೆ ಹೊಸ ತಂತ್ರಜ್ಞಾನ ವಿಭಾಗದಲ್ಲಿ ಉದ್ಯೋಗ ಅವಕಾಶಗಳನ್ನು ನಿರೀಕ್ಷಿಸಬಹುದು' ಎಂದು ಐಬಿಎಂ ಪ್ರಕಟಿಸಿದೆ.
ವಾಲ್ ಸ್ಟ್ರೀಟ್ ಜರ್ನಲ್, ಸಿಎನ್ ಬಿಸಿ ಈ ಮುಂಚೆ ಉದ್ಯೋಗ ಕಡಿತದ ಬಗ್ಗೆ ಮಾಡಿದ್ದ ವರದಿಯನ್ನು ಐಬಿಎಂ ತಳ್ಳಿ ಹಾಕಿತ್ತು. ತಂತ್ರಜ್ಞಾ ಕ್ಷೇತ್ರದಲ್ಲಿ ಒಟ್ಟಾರೆಯಾಗಿ ಹಿಂದೆ ಉಳಿದಿರುವ ಐಬಿಎಂ, 2018ರಲ್ಲಿ ಶೇ 1ರಷ್ಟು ಮಾತ್ರ ಆದಾಯದಲ್ಲಿ ಪ್ರಗತಿ ಕಂಡಿತ್ತು. ಮುಂಬರುವ ದಿನಗಳಲ್ಲಿ ಜಾಗತಿಕವಾಗಿ ಸುಮಾರು 25,000 ಉದ್ಯೋಗ ಅವಕಾಶಗಳು ಐಬಿಎಂನಲ್ಲಿ ಸೃಷ್ಟಿಯಾಗುವ ನಿರೀಕ್ಷೆಯಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications