ವೊಡಾಫೋನ್ ಜತೆ ವಿಲೀನಕ್ಕೆ ಐಡಿಯಾ ಅಸ್ತು, 80 ಸಾವಿರ ಕೋಟಿ ಆದಾಯ!
ಸುಮಾರು ಎರಡು ವರ್ಷಗಳ ಈ ವಿಲೀನ ಪ್ರಕ್ರಿಯೆ ನಡೆಯಲಿದ್ದು, ಭಾರತದ ಅತಿದೊಡ್ಡ ಟೆಲಿಕಾಂ ಸಂಸ್ಥೆಯಾಗಲಿರುವ ವೊಡಾಫೋನ್ ಜತೆಗಿನ ಐಡಿಯಾ ಒಪ್ಪಂದದ ಮೌಲ್ಯ 80, 000 ಕೋಟಿ ರು ಮೀರಲಿದೆ.
ಬೆಂಗಳೂರು, ಮಾರ್ಚ್ 20: ವೋಡಾಫೋನ್ ಜತೆ ವಿಲೀನ ಪ್ರಕ್ರಿಯೆಗೆ ಐಡಿಯಾ ಸೆಲ್ಯುಲಾರ್ ಬೋರ್ಡ್ ಮೀಟಿಂಗ್ ನಲ್ಲಿ ಒಪ್ಪಿಗೆ ಸಿಕ್ಕಿದ್ದು, ವಿಲೀನ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಐಡಿಯಾ ಸಂಸ್ಥೆ ಸೋಮವಾರ ಪ್ರಕಟಿಸಿದೆ.
ಸುಮಾರು ಎರಡು ವರ್ಷಗಳ ಈ ವಿಲೀನ ಪ್ರಕ್ರಿಯೆ ನಡೆಯಲಿದ್ದು, ಭಾರತದ ಅತಿದೊಡ್ಡ ಟೆಲಿಕಾಂ ಸಂಸ್ಥೆಯಾಗಲಿರುವ ವೊಡಾಫೋನ್ ಜತೆಗಿನ ಐಡಿಯಾ ಡೀಲ್ ನಂತರ ಸಂಸ್ಥೆಯ ಆದಾಯ 80, 000 ಕೋಟಿ ರು ಮೀರಲಿದೆ. [ಜಿಯೋ ಪ್ರೈಮ್ vs ಏರ್ ಟೆಲ್, ವೋಡಾಫೋನ್, ಐಡಿಯಾ]
ಭಾರತದ ಸುಮಾರು 37 ಬಿಲಿಯನ್ ಡಾಲರ್ ಟೆಲಿಕಾಂ ಸೇವಾ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು ಲಂಡನ್ ಮೂಲದ ವೊಡಾಫೋನ್ ಸಂಸ್ಥೆ ಮಹತ್ವ ಹೆಜ್ಜೆ ಇಟ್ಟಿದೆ. ಆದಿತ್ಯಾ ಬಿರ್ಲಾ ಸಮೂಹದ ಐಡಿಯಾ ಸೆಲ್ಯುಲಾರ್ ಸಂಸ್ಥೆಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುತ್ತಿದೆ.

ಈ ಮೂಲಕ ಟೆಲಿಕಾಂ ಮಾರುಕಟ್ಟೆಯಲ್ಲಿ ಶೇ 23ರಷ್ಟು ಪಾಲು ಹೊಂದಿರುವ ವೊಡಾಫೋನ್ ಹಾಗೂ ಶೇ 19ರಷ್ಟು ಪಾಲು ಹೊಂದಿರುವ ಐಡಿಯಾ ಒಂದಾಗಲಿದೆ. [ವೊಡಾಫೋನ್ ಫ್ರೀ ಆಫರ್ ಏನು ಕೊಡುತ್ತೆ: ಟ್ವಿಟ್ಟರಲ್ಲಿ ಪ್ರಶ್ನೆ]
ಹೀಗಾಗಿ, ವೊಡಾಫೋನ್ ಮಾರುಕಟ್ಟೆಯಲ್ಲಿ ಶೇ 43ರಷ್ಟು ಪಾಲು ಹೊಂದಿ ಅಗ್ರಸ್ಥಾನಕ್ಕೇರಲಿದೆ.ಸದ್ಯ ಶೇ 33ರಷ್ಟು ಪಾಲುಹೊಂದಿರುವ ಭಾರ್ತಿ ಏರ್ ಟೆಲ್ ಲಿಮಿಟೆಡ್ ಸಂಸ್ಥೆ ಅಗ್ರಸ್ಥಾನದಲ್ಲಿದೆ.
ರಿಲಯನ್ಸ್ ಜಿಯೋ ಉಚಿತ ಕರೆ ಹಾಗೂ ಡಾಟಾ ಸೇವೆಯನ್ನು ಮಾರ್ಚ್ 2017ರ ತನಕ ವಿಸ್ತರಿಸಿದ ಬಳಿಕ ಇತರೆ ಟೆಲಿಕಾಂ ಕಂಪನಿಗಳ ನಡುವೆ ಪೈಪೋಟಿ ಹೆಚ್ಚಾಗಿದೆ. ಈ ಒಪ್ಪಂದದ ಬಗ್ಗೆ ವೊಡಾಫೋನ್ ಸಂಸ್ಥೆ ನೀಡಿರುವ ಮಾಧ್ಯಮ ಪ್ರಕಟಣೆ ಇಲ್ಲಿದೆ ಡೌನ್ ಲೋಡ್ ಮಾಡಿಕೊಳ್ಳಿ
(ಒನ್ಇಂಡಿಯಾ ಸುದ್ದಿ)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ
Download











Click it and Unblock the Notifications