ಮೇಕ್ ಇನ್ ಇಂಡಿಯಾ ಐ ಫೋನ್: 25ರಂದು ಮಹತ್ವದ ಮಾತುಕತೆ
ನವದೆಹಲಿ, ಜ. 8: ಭಾರತದಲ್ಲಿ ಐ ಫೋನ್ ತಯಾರಿಸುವ ಆ್ಯಪಲ್ ಸ್ಮಾರ್ಟ್ ಫೋನ್ ಕಂಪನಿಯ ಆಶಯವು ಇದೇ ತಿಂಗಳ 25ರಂದು ನಡೆಯಲಿರುವ ಕಂಪನಿಯ ಪ್ರತಿನಿಧಿಗಳು ಹಾಗೂ ಕೇಂದ್ರ ಸರ್ಕಾರದ ನಡುವಿನ ಮಾತುಕತೆಯಲ್ಲಿ ಸ್ಪಷ್ಟ ರೂಪ ತಳೆಯಲಿದೆ.
ಸಭೆಯಲ್ಲಿ ಕೇಂದ್ರ ಸರ್ಕಾರದ ಹಣಕಾಸು, ಔದ್ಯೋಗಿಕ ನೀತಿ ಹಾಗೂ ಪ್ರವರ್ತನ (ಡಿಐಪಿಪಿ), ಕಂದಾಯ, ಪರಿಸರ ಹಾಗೂ ಅರಣ್ಯ, ವಿದ್ಯುನ್ಮಾನ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಮಾತುಕತೆ ವೇಳೆ, ಅಮೆರಿಕ ಮೂಲದ ಆ್ಯಪಲ್ ಕಂಪನಿಯು ಕೆಲವಾರು ಸೌಕರ್ಯಗಳನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿದೆ ಎಂದು ಹೇಳಲಾಗಿದೆ. ಪ್ರಮುಖವಾಗಿ ತೆರಿಗೆ ವಿನಾಯ್ತಿ, ದೀರ್ಘಾವಧಿ ಸೇವಾ ನಿಯಮಗಳಿಂದ ವಿನಾಯ್ತಿ ಸೇರಿದಂತೆ ಕೆಲವಾರು ಬೇಡಿಕೆಗಳನ್ನು ಕಂಪನಿಯ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿರುವ ಕೇಂದ್ರದ ಅಧಿಕಾರಿಗಳ ಮುಂದಿಡಲಿದ್ದಾರೆ.

ಆದರೆ, ನಿಯಮಗಳ ಪ್ರಕಾರ, ಆ್ಯಪಲ್ ಸಂಸ್ಥೆಯು ಯಾವುದೇ ಹೆಚ್ಚುವರಿ ಸವಲತ್ತುಗಳನ್ನು ಕೇಳದೇ ಮೊದಲು ತನ್ನ ಉತ್ಪಾದನಾ ಘಟಕವನ್ನು ಭಾರತದಲ್ಲಿ ಸ್ಥಾಪಿಸಬೇಕಿದೆ. ಇದನ್ನು ಸಭೆಯಲ್ಲಿ, ಆ್ಯಪಲ್ ಕಂಪನಿಯ ಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡಲು ಅಧಿಕಾರಿಗಳು ಯತ್ನಿಸಲಿದ್ದಾರೆಂದು ಮೂಲಗಳು ಹೇಳಿವೆ.
ಈಗಾಗಲೇ, ಚೀನಾದ ದೈತ್ಯ ಕಂಪನಿಗಳಾದ ಹುವೈ, ಕ್ಸಿಯೋಮಿ ಸೇರಿದಂತೆ ವಿದೇಶಿ ಮೂಲದ ಒಟ್ಟು 42 ಸ್ಮಾರ್ಟ್ ಫೋನ್ ಕಂಪನಿಗಳು ತಮ್ಮ ಬ್ರಾಂಡ್ ಗಳ ಫೋನ್ ಗಳನ್ನು ಭಾರತದಲ್ಲಿಯೇ ತಯಾರಿಸುತ್ತಿವೆ. ಈ ಕಂಪನಿಗಳೂ ಹೆಚ್ಚುವರಿ ಸೌಲಭ್ಯಗಳನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿವೆ.
ಸದ್ಯಕ್ಕೀಗ ಆ ಎಲ್ಲಾ ಕಂಪನಿಗಳೂ ಮಾಡಿಫೈಡ್ ಸ್ಪೆಷಲ್ ಇನ್ಸೆಟಿವ್ ಪ್ಯಾಕೇಜ್ ಯೋಜನೆಯಡಿ (ಎಂಎಸ್ಐಎಸ್) ಕಾರ್ಯ ನಿರ್ವಹಿಸುತ್ತಿದ್ದು ಅದೇ ಯೋಜನೆಯಲ್ಲೇ ಕಂಪನಿಗಳು ಮುಂದುವರಿಯಬೇಕೆಂಬುದು ಕೇಂದ್ರ ಸರ್ಕಾರದ ಬಿಗಿ ನಿಲುವಾಗಿದೆ ಎಂದು ಹೇಳಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications