ಅಪನಗದೀಕರಣ ಪೂರ್ವ ಬ್ಯಾಂಕ್ ವ್ಯವಹಾರಗಳ ಮೇಲೆ ತೆರಿಗೆ ಇಲಾಖೆ ಕಣ್ಣು
ನವದೆಹಲಿ, ಜ. 8: ಕಳೆದ ವರ್ಷ ಏಪ್ರಿಲ್ 1ರಿಂದ ನವೆಂಬರ್ 9ರವರೆಗೆ ತಮ್ಮಲ್ಲಿನ ಗ್ರಾಹಕರ ಖಾತೆಗಳಿಗೆ ಜಮೆಯಾದ ಹಣದ ಸಂಪೂರ್ಣ ವರದಿ ಸಲ್ಲಿಸುವಂತೆ ಕೇಂದ್ರ ಆದಾಯ ತೆರಿಗೆ ಇಲಾಖೆ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ರವಾನಿಸಿದೆ.
ಇದೇ ರೀತಿ, ಅಂಚೆ ಇಲಾಖೆಗೂ ಸೂಚನೆ ನೀಡಲಾಗಿದ್ದು, ಎಲ್ಲಾ ಅಂಚೆ ಕಚೇರಿಗಳೂ ತಮ್ಮಲ್ಲಿನ ಖಾತೆಗಳ ವಿವರ ನೀಡಬೇಕಿದೆ.
ಕಳೆದ ವರ್ಷ ನವೆಂಬರ್ 8ರಂದು ಕೇಂದ್ರ ಸರ್ಕಾರವು 500 ರು. ಹಾಗೂ 1000 ರು.ಗಳ ನೋಟುಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಹಾಗಾಗಿ, ಅಪನಗದೀಕರಣಕ್ಕೂ ಮುನ್ನ ಬ್ಯಾಂಕ್ ಖಾತೆಗಳಲ್ಲಿ ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಆದಾಯ ಇಲಾಖೆ ಪರಿಶೀಲಿಸಲು ಹೊರಟಿದೆ. ಈ ಹಿನ್ನೆಲೆಯಲ್ಲಿ ಈ ಸೂಚನೆ ರವಾನಿಸಲಾಗಿದೆ.

ಬ್ಯಾಂಕುಗಳು ಅದರಲ್ಲೂ ವಿಶೇಷವಾಗಿ ಸಹಕಾರಿ ಬ್ಯಾಂಕುಗಳಲ್ಲಿನ ಖಾತೆಗಳ ಮಾಹಿತಿ ತಿಳಿಯಲು ಇಲಾಖೆಯು ಹೆಚ್ಚಿನ ಒತ್ತು ನೀಡಿದೆ ಎನ್ನಲಾಗಿದೆ.
ಇದಲ್ಲದೆ, ಬ್ಯಾಂಕ್ ಖಾತೆಗಳಿಗೆ ಸಂಬಂಧಪಟ್ಟ ಗ್ರಾಹಕರ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಸೇರಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕೆಂದು ಇಲಾಖೆ ಎಲ್ಲಾ ಬ್ಯಾಂಕುಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದೆ.
ಮುಂದಿನ ತಿಂಗಳು 28ರೊಳಗೆ ಎಲ್ಲಾ ಬ್ಯಾಂಕ್ ಖಾತೆಗಳಿಗೆ ಪ್ಯಾನ್ ಕಾರ್ಡ್ ಸಂಖ್ಯೆ ಅಥವಾ ಫಾರ್ಮ್ ನಂ. 60 ಕಡ್ಡಾಯವಾಗಿರಲೇಬೇಕು. ಪ್ಯಾನ್ ಸಂಖ್ಯೆ ನೀಡದ ಗ್ರಾಹಕರಿಗೆ ಆದಷ್ಟು ಬೇಗನೇ ಪ್ಯಾನ್ ಕಾರ್ಡ್ ಸಂಖ್ಯೆ ನೀಡುವಂತೆ ತಾಕೀತು ಮಾಡಬೇಕೆಂದು ಸೂಚನೆ ನೀಡಲಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications