ವಿದೇಶದಲ್ಲಿ ಕಾನೂನುಬಾಹಿರ ಆಸ್ತಿ ಮಾಡಿದ ಭಾರತೀಯರ ಮೇಲೆ ಐಟಿ ಕಣ್ಣು
ನವದೆಹಲಿ, ಅಕ್ಟೋಬರ್ 22: ವಿದೇಶದಲ್ಲಿ ಕಾನೂನು ಬಾಹಿರವಾಗಿ ಹಣ ಹೂಡಿದ ಹಾಗೂ ಆಸ್ತಿ ಮಾಡಿದ ಭಾರತೀಯರ ವಿರುದ್ಧ ಆದಾಯ ತೆರಿಗೆ ಇಲಾಖೆ ಕಾರ್ಯಾಚರಣೆಗೆ ಇಳಿದಿದೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಪ್ಪು ಹಣ ವಿರೋಧಿ ಕಾನೂನು ಹೊಸದಾಗಿ ಪರಿಚಯಿಸಲು ಚಿಂತನೆ ನಡೆದಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.
ವಿವಿಧ ದೇಶದ ತೆರಿಗೆ ಇಲಾಖೆ ಜತೆಗೆ ಸಮನ್ವಯ ಸಾಧಿಸಿ, ತನಿಖೆ ನಡೆಸಲಾಗುತ್ತದೆ. ವಿದೇಶದಲ್ಲಿ ಬ್ಯಾಂಕ್ ಠೇವಣಿ ಮಾಡಿದ ಹಾಗೂ ಆಸ್ತಿ ಖರೀದಿಸಿದ ಸಾವಿರಾರು ಭಾರತೀಯರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಿಬಿಡಿಟಿ (ಕೇಂದ್ರೀಯ ನೇರ ತೆರಿಗೆ ಮಂಡಳಿ) ಅಧ್ಯಕ್ಷ ಸುಶೀಲ್ ಚಂದ್ರ ಖಾತ್ರಿ ಪಡಿಸಿದ್ದು, ಹೆಚ್ಚಿನ ವಿವರ ನೀಡಲು ನಿರಾಕರಿಸಿದ್ದಾರೆ.
ಆರ್ಥಿಕ ಗುಪ್ತಚರ ಇಲಾಖೆ ವಿಭಾಗ ಹಾಗೂ ಇತರ ಮೂಲಗಳ ಮೂಲಕ ವಿದೇಶದಲ್ಲಿ ಭಾರತೀಯರ ಮುಖ್ಯ ಆರ್ಥಿಕ ವ್ಯವಹಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ದೇಶದಾದ್ಯಂತ ಅಂಥ ಪ್ರಕರಣಗಳನ್ನು ಪತ್ತೆ ಮಾಡುತ್ತಿದ್ದೇವೆ. ಕಪ್ಪು ಹಣದ ವಿರುದ್ಧ ನಡೆಸಲಿರುವ ಪ್ರಮುಖ ಕಾರ್ಯಾಚರಣೆ ಇದಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ಪ್ರಕರಣಗಳಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ವೈಯಕ್ತಿಕ ತೆರಿಗೆದಾರರು ಅಥವಾ ಇತರ ವರ್ಗದಡಿ ಬರುವಂಥ ವ್ಯವಹಾರಗಳ ಬಗ್ಗೆ ವಿವರಣೆ ನೀಡುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಲವು ಹೈ ಪ್ರೊಫೈಲ್ ಪ್ರಕರಣಗಳಿವೆ. ಅತೀ ಶ್ರೀಮಂತರ ಆಸ್ತಿಗಳು ಇದರಡಿ ಬರುತ್ತದೆ. ಯಾವುದು ಆದಾಯ ತೆರಿಗೆ ರಿಟರ್ನ್ಸ್ ನಲ್ಲಿ ಮಾಹಿತಿ ನೀಡಿಲ್ಲವೋ ಅಂಥದ್ದರ ಬಗ್ಗೆ ಮಾತ್ರ ತನಿಖೆ ನಡೆಸುತ್ತೇವೆ. ತೆರಿಗೆ ಕದಿಯಲು ಯತ್ನಿಸಿದವರು ಕ್ರಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ.
ಕಪ್ಪು ಹಣ ಹಾಗೂ ತೆರಿಗೆ ವಿಧಿಸುವ ಕಾಯ್ದೆಯನ್ನು ಸರಕಾರ ಮೂರು ವರ್ಷದ ಹಿಂದೆ ಜಾರಿಗೆ ತಂದಿದೆ. ಹೊಸ ಕಾನೂನು ವಿದೇಶದಲ್ಲಿನ ಕಾನೂನುಬಾಹಿರ ಆಸ್ತಿ ಬಗ್ಗೆ ವಿವರಿಸುತ್ತದೆ. ಈಚೆಗೆ ಆದಾಯ ತೆರಿಗೆ ಕಾಯ್ದೆ 1961ರ ಅಡಿಯಲ್ಲಿ ತನಿಖೆ ನಡೆಸಲಾಗುತ್ತಿತ್ತು. ಹೊಸ ಕಾನೂನಿನ ಪ್ರಕಾರ ಮಾಹಿತಿ ನೀಡದ ವಿದೇಶದಲ್ಲಿ ಮಾಡಿದ ಆಸ್ತಿ ಹಾಗೂ ಆದಾಯಕ್ಕೆ ಶೇಕಡಾ ನೂರಿಪ್ಪತ್ತರಷ್ಟು ತೆರಿಗೆ ಮತ್ತು ದಂಡ, ಜತೆಗೆ ಹತ್ತು ವರ್ಷದ ತನಕ ಜೈಲು ಶಿಕ್ಷೆ ಇದೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications