ಆದಾಯ ತೆರಿಗೆ ಪಾವತಿ ಆಗಸ್ಟ್ 31 ರ ತನಕ ವಿಸ್ತರಣೆ
ನವದೆಹಲಿ, ಜೂ.1: ಆದಾಯ ತೆರಿಗೆ ವಿವರಗಳನ್ನು ಸಲ್ಲಿಸುವ 'ಐಟಿ- ರಿಟರ್ನ್ಸ್' ಪ್ರಕ್ರಿಯೆಯನ್ನು ವಿತ್ತ ಸಚಿವಾಲಯ ಇನ್ನಷ್ಟು ಸರಳಗೊಳಿಸಿದೆ. ನೂತನ ಆದಾಯ ತೆರಿಗೆ ರಿಟರ್ನ್ ಫಾರಂಗಳನ್ನು ಪ್ರಕಟಿಸಲಾಗಿದೆ.ಐಟಿಆರ್ ಅರ್ಜಿಗಳನ್ನು ಮೂರು ಪುಟಕ್ಕೆ ಇಳಿಸಲಾಗಿದ್ದು, ಅರ್ಜಿ ಪಾವತಿ ಕೊನೆ ದಿನಾಂಕವನ್ನು ಆಗಸ್ಟ್ 31ಕ್ಕೆ ವಿಸ್ತರಿಸಲಾಗಿದೆ.
ಹೊಸ ಐ.ಟಿ ರಿಟರ್ನ್ಸ್ ಫಾರಂಗಳಲ್ಲಿ ವಿವಾದಿತ ವಿದೇಶಿ ಪ್ರವಾಸ ವಿವರ, ಸುಪ್ತ ಬ್ಯಾಂಕ್(dormant bank) ಖಾತೆಗಳ ವಿವರಗಳನ್ನು ಬಹಿರಂಗ ಪಡಿಸಬೇಕಾಗಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ. [ಆನ್ ಲೈನ್ ನಲ್ಲಿ ತೆರಿಗೆ ಕಟ್ಟುವುದು ಹೇಗೆ?]

ಐಟಿಆರ್ 2 ಹಾಗೂ ಐಟಿಆರ್ 2 ಎಗಳಲ್ಲಿ ಇನ್ಮುಂದೆ ಮೂರು ಪುಟಗಳಿರುತ್ತವೆ. ವಿವಾದಿತ ವಿದೇಶಿ ಪ್ರವಾಸದ ವಿವರಗಳನ್ನು ಅರ್ಜಿಯಿಂದ ಹೊರಹಾಕಲಾಗಿದ್ದು, ಅರ್ಜಿದಾರರು ತಮ್ಮ ಪಾಸ್ ಪೋರ್ಟ್ ಸಂಖ್ಯೆ ನಮೂದಿಸಿದರೆ ಸಾಕು. [ಸರಳವಾಗಿ ತೆರಿಗೆ ಪಾವತಿ ಮಾಡುವುದು ಹೇಗೆ?]
ಬ್ಯಾಂಕ್ ಖಾತೆ ವಿವರಗಳ ಪೈಕಿ ಐಎಫ್ ಎಸ್ ಕೋಡ್, ಅಕೌಂಟ್ ನಂಬರ್ (ಕರೆಂಟ್ ಅಥವಾ ಉಳಿತಾಯ ಖಾತೆ) ನೀಡಿದರೆ ಸಾಕು. ನಿಮ್ಮ ಅಕೌಂಟ್ ನಲ್ಲಿ ಎಷ್ಟು ಬ್ಯಾಲೆನ್ಸ್ ಇದೆ ಎಂಬುದನ್ನು ಹೇಳಿಕೊಳ್ಳಬೇಕಾಗಿಲ್ಲ.
ಸಂಬಳದಾರರು, ಬಿಸಿನೆಸ್ ಹಾಗೂ ವೃತ್ತಿಪರ ಆದಾಯ ಇಲ್ಲದ ವ್ಯಕ್ತಿಗಳು ಐಟಿಆರ್ 1 ಅಥವಾ ಐಟಿಆರ್ 2 ಬಳಸಿಕೊಂಡು ಪ್ರತಿ ವರ್ಷ ಜು.31 ರೊಳಗೆ ಆದಾಯ ತೆರಿಗೆ ಪಾವತಿ ಸಲ್ಲಿಸಬೇಕಾಗುತ್ತದೆ.
ವಾರ್ಷಿಕವಾಗಿ 5 ಲಕ್ಷ ರೂ.ಗಳಿಗಿಂತ ಹೆಚ್ಚಿನ ವರಮಾನವಿರುವ ತೆರಿಗೆ ಪಾವತಿದಾರರು ತಮ್ಮ ಆದಾಯ ವಿವರಗಳನ್ನು ವಿದ್ಯುನ್ಮಾನ ರೂಪದಲ್ಲಿ ಸಲ್ಲಿಸುವ ಆವಶ್ಯಕತೆಯಿರುವುದರಿಂದ ಆನ್ ಲೈನ್ ಮೂಲಕ ತೆರಿಗೆ ಕಟ್ಟುವವರ ಸಂಖ್ಯೆ ಸಹ ಹೆಚ್ಚಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications