Budget 2023 Expectations : ಖಾಲಿ ನಿವೇಶನಗಳ ಮೇಲೆಯೂ ಬಾಡಿಗೆ ತೆರಿಗೆ: ಏನಾಗಿರಲಿದೆ ಕೇಂದ್ರ ಸರ್ಕಾರದ ಮುಂದಿನ ನಡೆ?
ನವದೆಹಲಿ, ಜನೆವರಿ 06: ಫೆಬ್ರುವರಿ 1ರಂದು ಕೇಂದ್ರ ಸರ್ಕಾರದಿಂದ ಬಜೆಟ್ ಮಂಡನೆಯಾಗಲಿದೆ. ಹೊಸ ವರ್ಷದ ಬಜೆಟ್ ಜನರಲ್ಲಿ ಹೆಚ್ಚು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಅದರಲ್ಲೂ ಮನೆ ಬಾಡಿಗೆ ನೀಡುವವರು ಸುಭ ಸುದ್ದಿಗಾಗಿ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಹಣಕಾಸು ಸಂಸ್ಥೆಗಳು ಸಲಹೆ ನೀಡುತ್ತಿವೆ. ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು (ICAI) ಉಪಯುಕ್ತವಾದ ಸಲಹೆಯೊಂದನ್ನು ಕೇಂದ್ರ ಸರ್ಕಾರಕ್ಕೆ ನೀಡಿದೆ.
ಜನರು ಒಂದಕ್ಕಿಂತ ಹೆಚ್ಚು ಮನೆಗಳನ್ನು ಖರೀದಿಸಿ ಅಥವಾ ಕಟ್ಟಿಸಿ ಬಾಡಿಗೆಗೆ ಕೊಡುವುದುಂಟು. ಈಗಿರುವ ನೀತಿಯ ಪ್ರಕಾರ, ಬಾಡಿಗೆಯಿಂದ ಬಂದಿರುವ ಹಣದ ಮೇಲೆ ತೆರಿಗೆ ವಿಧಿಸಲಾಗುತ್ತಿದೆ. ಅದು ಸರಿಯಾದ ಕ್ರಮವಾಗಿದೆ. ಆದರೆ, ಬಾಡಿಗೆ ಇಲ್ಲದೇ ಖಾಲಿ ಉಳಿದಿರುವ ನಿವಾಸಗಳ ಮೇಲೆಯೂ ತೆರಿಗೆ ವಿಧಿಸಲಾಗುತ್ತಿದೆ. ಇದನ್ನು ಮರುಪರಿಶೀಲಿಸುವಂತೆ ಐಸಿಎಐ ಸಲಹೆ ನೀಡಿದೆ.
ಜನರು ಈ ವಿಚಾರದ ಬಗ್ಗೆ ಗೊಂದಲದಲ್ಲಿ ಇದ್ದಾರೆ. ಹೀಗಾಗಿ, ಮುಂದಿನ ಬಜೆಟ್ನಲ್ಲಿ ಈ ಗೊಂದಲವನ್ನು ಪರಿಹರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಹೇಳಿದೆ.

ಬಾಡಿಗೆ ಇಲ್ಲದೇ ಖಾಲಿ ಉಳಿದ ಅಥವಾ ಬಾಡಿಗೆಯನ್ನೇ ನೀಡದ ಆಸ್ತಿಗಳ ಮೇಲೆ ವಿಧಿಸಲಾಗುತ್ತಿರುವ ತೆರಿಗೆಯನ್ನು ಕೈಬಿಡುವುದು ಒಳ್ಳೆಯದು ಎಂದು ಐಸಿಎಐ ಹೇಳಿದೆ.
ಒಬ್ಬ ವ್ಯಕ್ತಿ ಎರಡು ಸ್ವ ಬಳಕೆಯ ಆಸ್ತಿಯನ್ನು ಹೊಂದಬಹುದು. ಇದು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಹಕಾರಿಯಾಗಲಿದೆ. ಹಿಂದಿನ ವರ್ಷ ಬಾಡಿಗೆಗೆ ಕೊಡಲಾಗಿದ್ದ ಮನೆ ಈಗ ಖಾಲಿ ಬಿದ್ದರೂ, ಅದರ ಮೇಲೆ ತೆರಿಗೆ ಹೇರಲಾಗುತ್ತಿದೆ. ಇದು ಉತ್ತಮ ಬೆಳವಣಿಗಯಲ್ಲ ಎಂದು ಸಂಸ್ಥೆ ಅಭಿಪ್ರಾಯ ಪಟ್ಟಿದೆ.

ಯಾವುದೇ ವ್ಯಕ್ತಿ ಒಂದು ಆಸ್ತಿಯ ಮೇಲೆ ದುಡ್ಡು ಹಾಕಿ ಅದರಿಂದ ನಷ್ಟ ಹೊಂದಲು ಬಯಸುವುದಿಲ್ಲ. ಎಷ್ಟು ಆಸ್ತಿ ಹೊಂದಬೇಕೆಂದು ತೆರಿಗೆ ಕಟ್ಟುವ ಜನರ ತೀರ್ಮಾನಕ್ಕೆ ಬಿಡಬೇಕು ಎಂದು ಹೇಳಿದೆ.
ಖಾಲಿ ನಿವೇಶನದ ಮೇಲೆ ಸೆಕ್ಷನ್ 23 (1) (ಸಿ) ಅಡಿಯಲ್ಲಿ ತೆರಿಗೆ ವಿಧಿಸಲಾಗುತ್ತಿದೆ ಇದರಿಂದ ಜನರಿಗೆ ಅನಗತ್ಯ ಹೊರೆಯಾಗುತ್ತಿದೆ. ಕಾನೂನಾತ್ಮಕ ವ್ಯಾಜ್ಯಗಳೂ ಹೆಚ್ಚುತ್ತವೆ. ಈ ಗೊಂದಲವನ್ನು ಬಗೆಹರಿಸಬೇಕು. ಕಾನೂನನ್ನು ಮರುಪರಿಶೀಲಸಬೇಕೆಂದು ತಿಳಿಸಿದೆ.

ಬಿಲ್ಡರ್ಗಳು ಕಟ್ಟಿದ ಮನೆಗಳು ಬಾಡಿಗೆಗೆ ಹೋಗದಿದ್ದರೂ ಅವುಗಳಿಗೆ ತೆರಿಗೆ ವಿಧಿಸಲಾತ್ತಿದೆ. ಇದು ಸರಿಯಾದ ಕ್ರಮವಲ್ಲ. ಇದನ್ನು ತೆಗೆದುಹಾಕಬೇಕು ಎಂದು ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ಹೇಳಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications