ಆದಾಯ ತೆರಿಗೆ ರಿಟರ್ನ್ ಇ-ಪರಿಶೀಲನೆ ಕಡ್ಡಾಯ: ಇ-ಪರಿಶೀಲನೆಗೆ ಮಾಡುವುದು ಹೀಗೆ
ಜುಲೈ 31, 2022 ರವರೆಗೆ 5.82 ಕೋಟಿ ಜನರು ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿದ್ದಾರೆ ಮತ್ತು ಅವರಲ್ಲಿ 4 ಕೋಟಿ ತೆರಿಗೆದಾರರು ಮಾತ್ರ ಆದಾಯ ತೆರಿಗೆ ರಿಟರ್ನ್ ಇ-ಪರಿಶೀಲನೆ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆಯು ಪರಿಶೀಲನೆ ಮಾಡದ ಐಟಿಆರ್ಗಳನ್ನು ಅಮಾನ್ಯವೆಂದು ಪರಿಗಣಿಸುತ್ತದೆ. ಆದ್ದರಿಂದ ತೆರಿಗೆದಾರರು ಆದಾಯ ತೆರಿಗೆ ರಿಟರ್ನ್ಸ್ಗಳನ್ನು ಪರಿಶೀಲಿಸುವ ಮಹತ್ವದ ಬಗ್ಗೆ ತಿಳಿದುಕೊಳ್ಳಬೇಕಾಗಿದೆ. ಸರಳ ವಿಧಾನದ ಮೂಲಕ ನೀವು ಆದಾಯ ಆದಾಯ ತೆರಿಗೆ ರಿಟರ್ನ್ಸ್ ಇ-ಪರಿಶೀಲನೆ ಮಾಡಬಹುದಾಗಿದೆ.
ತೆರಿಗೆ ಪಾವತಿದಾರರಿಗೆ ಒಳ್ಳೆಯ ಸುದ್ದಿ ಏನೆಂದರೆ, ಇ-ಪೋರ್ಟಲ್ ಮೂಲಕ ಸಲ್ಲಿಸಿದ ಆದಾಯ ತೆರಿಗೆ ರಿಟರ್ನ್ಸ್ಗಳ ಪರಿಶೀಲನೆಯ ಸಮಯ ಮಿತಿಯನ್ನು 120 ದಿನಗಳಿಂದ 30 ದಿನಗಳವರೆಗೆ 1ನೇ ಆಗಸ್ಟ್ 2022 ರಂದು ಅಥವಾ ನಂತರ ಸಲ್ಲಿಸಿದ ರಿಟರ್ನ್ಸ್ಗಳಿಗೆ ಕಡಿಮೆ ಮಾಡಲಾಗಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) 29ನೇ ಜುಲೈ 2022 ರಂದು ಅಧಿಸೂಚನೆಯ ಮೂಲಕ ಇದನ್ನು ಪ್ರಕಟಿಸಿದೆ.
ನೀವು ರಿಟರ್ನ್ಸ್ ಸಲ್ಲಿಸಿದ ನಂತರ ಒಂದು ತಿಂಗಳೊಳಗೆ ನೀವು ಐಟಿಆರ್ ಅನ್ನು ಇ-ಪರಿಶೀಲಿಸಬೇಕು. ಆದಾಯ ತೆರಿಗೆ ರಿಟರ್ನ್ಸ್ ಪ್ರಕ್ರಿಯೆ ಪೂರ್ಣಗೊಳಿಸಲು ಆಗಸ್ಟ್ 31 ರೊಳಗೆ ಇ-ಪರಿಶೀಲನೆ ನಡೆಸಬೇಕು.

ಇ-ಪರಿಶೀಲನೆ ಮಾಡುವುದು ಹೇಗೆ?; ಆಧಾರ್ ಆಧಾರಿತ ಒಟಿಪಿ (OTP)ಗಳು, ಬ್ಯಾಂಕ್ ಮತ್ತು ಡಿಮ್ಯಾಟ್ ಖಾತೆಗಳು, ನೆಟ್ ಬ್ಯಾಂಕಿಂಗ್, ಎಟಿಎಂ ಮತ್ತು ಡಿಜಿಟಲ್ ಸಹಿ ಪ್ರಮಾಣಪತ್ರಗಳು ಸೇರಿದಂತೆ ಲಭ್ಯವಿರುವ ಹಲವು ಆಯ್ಕೆಗಳ ಮೂಲಕ ತೆರಿಗೆದಾರರು ತಮ್ಮ ಆದಾಯ ತೆರಿಗೆ ರಿಟರ್ನ್ಸ್ಗಳನ್ನು ಇ-ಪರಿಶೀಲಿಸಬೇಕು.
ಆದಾಯ ತೆರಿಗೆ ರಿಟರ್ನ್ಸ್ ಅನ್ನು ಇ-ಪರಿಶೀಲಿಸುವ ಸರಳ ವಿಧಾನವೆಂದರೆ ಆಧಾರ್ ಆಧಾರಿತ ಒಟಿಪಿ ವಿಧಾನ, ಅದಕ್ಕಾಗಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ಗೆ ಲಿಂಕ್ ಮಾಡಬೇಕು.
ಆದಾಯ ತೆರಿಗೆ ಪೋರ್ಟಲ್ನ ಇ-ಪರಿಶೀಲನೆ ಪುಟಕ್ಕೆ ಭೇಟಿ ನೀಡಿ, ಆಧಾರ್ ಆಧಾರಿತ ಒಟಿಪಿ ಬಳಸುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ್ ಮಾಹಿತಿಯನ್ನು ಮೌಲ್ಯೀಕರಿಸಲು ಕೇಳುವ ಪಾಪ್-ಅಪ್ ಕಾಣಿಸಿಕೊಳ್ಳುತ್ತದೆ, ಆ ಬಾಕ್ಸ್ ಅನ್ನು ಭರ್ತಿ ಮಾಡಿ.

'ಜನರೇಟ್ ಆಧಾರ್ ಒಟಿಪಿ' ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ನೀವು ಆರು-ಅಂಕಿಯ ಒಟಿಪಿ ಅನ್ನು ಸ್ವೀಕರಿಸುತ್ತೀರಿ.
ಒಟಿಪಿ ಅನ್ನು ನಮೂದಿಸಿ ಮತ್ತು ಸಲ್ಲಿಸಿ. ಈ ಒಟಿಪಿ 15 ನಿಮಿಷಗಳವರೆಗೆ ಮಾತ್ರ ಮಾನ್ಯವಾಗಿರುತ್ತದೆ.
ಈಗ ನೀವು ಆದಾಯ ತೆರಿಗೆ ರಿಟರ್ನ್ಸ್ ಅನ್ನು ಇ-ಪರಿಶೀಲನೆ ಮಾಡಿರುವ ಸಂದೇಶ ಬರುತ್ತದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications