ಮೋದಿ ಸರ್ಕಾರವನ್ನು ಟೀಕಿಸುವ ಬಗ್ಗೆ ಕಿರಣ್ ಶಾ ಮಹತ್ವದ ಹೇಳಿಕೆ
ನವದೆಹಲಿ, ಡಿಸೆಂಬರ್ 02: ಬಯೋಕಾನ್ ಅಧ್ಯಕ್ಷೆ, ವ್ಯವಸ್ಥಾಪಕ ನಿರ್ದೇಶಕಿ ಕಿರಣ್ ಮುಜಂದಾರ್ ಶಾ ಅವರು ಸೋಮವಾರದಂದು ಹಿರಿಯ ಉದ್ಯಮಿ ರಾಹುಲ್ ಬಜಾಜ್ ಪರ ನಿಂತು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವುದಕ್ಕೆ ಭಾರತದಲ್ಲಿರುವ ಅಂತಾರಾಷ್ಟ್ರೀಯ ಸಂಸ್ಥೆ(ಐಎನ್ ಸಿ)ಗಳು ಹೆದರುತ್ತವೆ ಎಂಬ ಹೇಳಿಕೆಯನ್ನು ರಾಹುಲ್ ಬಜಾಜ್ ನೀಡಿದ್ದರು.
ರಾಹುಲ್ ಬಜಾಜ್ ಅವರ ಹೇಳಿಕೆಯನ್ನು ಬೆಂಬಲಿಸಿದ ಬಯೋಕಾನ್ ಅಧ್ಯಕ್ಷೆ ಕಿರಣ್, ಭಾರತದ ಐಎನ್ ಸಿಗಳು ''ರಾಷ್ಟ್ರವಿರೋಧಿ ಅಥವಾ ಸರ್ಕಾರ ವಿರೋಧಿಯಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.
https://t.co/J7oWulrXtu Will be happy to share my views with Govt if asked
— Kiran Mazumdar Shaw (@kiranshaw) December 2, 2019
ಇದಕ್ಕೂ ಮುನ್ನ ಭಾರತ ಐಎನ್ ಸಿಗಳನ್ನು ಸರ್ಕಾರವು ಪರದೇಶಿಗಳಂತೆ ಕಾಣುತ್ತಿದೆ ಎಂದು ಕಿರಣ್ ಟೀಕಿಸಿದ್ದರು. ಭಾರತದ ಆರ್ಥಿಕ ಪರಿಸ್ಥಿತಿ ಬಗ್ಗೆ ಟೀಕೆ ಟಿಪ್ಪಣಿ ಮಾಡುವಂತಿಲ್ಲ ಎಂದಿದ್ದರು.

ಬಜಾಜ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ರೀತಿ ತಮ್ಮ ವೈಯಕ್ತಿಕ ಅಭಿಪ್ರಾಯ ಮಂಡಿಸುವುದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಮಾರ್ಕವಾಗಬಹುದು ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆಯೆಂಬಂತೆ ಕಿರಣ್ ಅವರು ಎನ್ಡಿಟಿವಿಯ ಚರ್ಚೆಯಲ್ಲಿ ಭಾಗವಹಿಸಿ ಮೇಲ್ಕಂಡ ಹೇಳಿಕೆ ನೀಡಿದ್ದಾರೆ.
ನಿರ್ಮಲಾ ಅವರನ್ನು ಉದ್ದೇಶಿಸಿ ಮಾತನಾಡಿ, "ಮೇಡಂ ನಾವು ರಾಷ್ಟ್ರವಿರೋಧಿ ಅಥವಾ ಸರ್ಕಾರದ ವಿರೋಧಿಗಳಲ್ಲ, ಜಾಗತಿಕ ಆರ್ಥಿಕ ಲೀಗ್ ನಲ್ಲಿ ನಮ್ಮ ತ್ವರಿತಗತಿಯಲ್ಲಿ ಬೆಳೆಯುತ್ತಿರುವ ಆರ್ಥಿಕತೆಯನ್ನು ನೀವು ಕೊಂಡೊಯ್ದು ಸೇರಿಸುವಲ್ಲಿ ಯಶಸ್ವಿಯಾಗಬೇಕು ಎಂದು ಬಯಸುವವರು ನಾವು. ನಾನು ರಾಜಕೀಯೇತರ ವ್ಯಕ್ತಿಯಾಗಿದ್ದು, ಸರ್ಕಾರದಿಂದ ಉತ್ತಮ ಯೋಜನೆಗಳನ್ನು ರಾಜ್ಯಮಟ್ಟದಲ್ಲೂ ನಿರೀಕ್ಷಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications