ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆಯಿಂದ ಕುಸಿದ ಜಿಡಿಪಿ
ನವದೆಹಲಿ, ಜುಲೈ 27: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ನಂತರ ಭಾರತದಲ್ಲಿ 2021-22ನೇ ಸಾಲಿನಲ್ಲಿ ಭಾರತದ ಅಭಿವೃದ್ಧಿ ಶ್ರೇಯಾಂಕದಲ್ಲಿ ಶೇಕಡಾ ಮೂರರಷ್ಟು ಇಳಿಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ವರದಿ ತಿಳಿಸಿದೆ.
ಭಾರತದಲ್ಲಿ ಶೇಕಡಾ 12.5 ರಿಂದ ಶೇಕಡಾ 9.5ಕ್ಕೆ ಇಳಿಕೆಯಾಗಿದೆ ಶ್ರಯಾಂಕ ಇಳಿಮುಖವಾಗಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿಯು ಇತ್ತೀಚಿಗೆ ನಡೆಸಿದ ಜಾಗತಿಕ ಆರ್ಥಿಕ ಹೊರನೋಟದ ಪ್ರಕರಾ, ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಭಾರತದ ಅಭಿವೃದ್ಧಿ ಶ್ರೇಯಾಂಕದಲ್ಲಿ ಭಾರಿ ಕುಸಿತ ಕಂಡು ಬಂದಿದೆ.
ಕೊರೊನಾವೈರಸ್ ಕಾಲದ ಎರಡು ವರ್ಷದಲ್ಲಿ ಭಾರತದ ಜಿಡಿಪಿಯಲ್ಲಿ ಶೇಕಡಾ 10ರಷ್ಟು ಇಳಿಮುಖವಾಗಿದೆ. ಯಾವುದೇ ಸಾಂಕ್ರಾಮಿಕ ಪಿಡುಗು ಇಲ್ಲದಿದ್ದರೆ ವರ್ಷದಲ್ಲಿ ದೇಶದ ಜಿಡಿಪಿ ಸಾಮಾನ್ಯವಾಗಿ ಶೇ.6ರಷ್ಟು ಏರಿಕೆಯಾಗುತ್ತಿತ್ತು. ಐಎಂಎಫ್ ಯೋಜನೆಗಳು ಈ ರೀತಿಯಾದರೆ, ಸಾಂಕ್ರಾಮಿಕ ರೋಗದಿಂದ ಈ ಎರಡು ವರ್ಷಗಳ ಕಾಲ ಭಾರತದ ಜಿಡಿಪಿಯನ್ನು ಶೇಕಡಾ 10.9ರಷ್ಟು ಹಿಂದುಳಿಯುವಂತೆ ಮಾಡುತ್ತದೆ.

ಮುಂದಿನ 2022-23ರ ಹಣಕಾಸು ವರ್ಷದಲ್ಲಿ ಐಎಂಎಫ್ ಭಾರತದ ಆರ್ಥಿಕ ಬೆಳವಣಿಗೆಯನ್ನು ಏಪ್ರಿಲ್ 2021 ರಲ್ಲಿ ನಿರೀಕ್ಷಿಸಿದ್ದ ಶೇಕಡಾ 6.9 ರಿಂದ ಶೇ 8.5ಕ್ಕೆ ಹೆಚ್ಚಿಸಲಿದೆ. ಇದರಿಂದಾಗಿ ಶೇಕಡಾ 1.6 ಅಂಕಗಳಷ್ಟು ಹೆಚ್ಚಾಗಲಿದೆ. "ಸುಧಾರಿತ ಆರ್ಥಿಕತೆಗಳ ನವೀಕರಣಕ್ಕಾಗಿ ಉದಯೋನ್ಮುಖ ಮಾರುಕಟ್ಟೆಗಳನ್ನು ಹೊಂದಿದ್ದೇವೆ. ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳ ಇಳಿಕೆಯನ್ನು ಸರಿದೂಗಿಸುವ ಸಾಮರ್ಥ್ಯವನ್ನು ಹೊಂದಿವೆ," ಎಂದು ಐಎಂಎಫ್ನ ಮುಖ್ಯ ಅರ್ಥಶಾಸ್ತ್ರಜ್ಞ ಗೀತಾ ಗೋಪಿನಾಥ್ ಹೇಳಿದ್ದಾರೆ.
ಜೂನ್ 4 ರಂದು ನಡೆದ 2021-22ರ ಹಣಕಾಸು ವರ್ಷದ ಎರಡನೇ ದ್ವಿ-ಮಾಸಿಕ ವಿತ್ತೀಯ ನೀತಿ ಸಮಿತಿ ಸಭೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ದೇಶದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶ್ರೇಯಾಂಕವನ್ನು ಶೇಕಡಾ 10.5 ರಿಂದ ಶೇ 9.5 ಕ್ಕೆ ಇಳಿಸಿತು.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಕಳೆದ ಒಂದು ದಿನದಲ್ಲಿ 29,689 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಮಹಾಮಾರಿಗೆ 415 ಮಂದಿ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 42,363 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಚೇತರಿಕೆ ಸಂಖ್ಯೆ 3,06,21,469ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೂ ಕೊವಿಡ್-19 ಸೋಂಕಿನಿಂದ 4,21,382 ಜನರು ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications