ಮಲ್ಯ-ಯುಕೆಯಿಂದ ಕೋರ್ಟಿನ ಕಟಕಟೆಗೆ ಈಗ ಸಾಧ್ಯ!
ಮನಿ ಲಾಂಡ್ರಿಂಗ್ ಹಾಗೂ ಬ್ಯಾಂಕ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ರೆಡ್ ಕಾರ್ನರ್, ಜಾಮೀನು ರಹಿತ ವಾರೆಂಟ್, ನೋಟಿಸ್ ಪಡೆದಿರುವ ಉದ್ಯಮಿ ಮಲ್ಯರನ್ನು ಕರೆತರುವ ಪ್ರಕ್ರಿಯೆಗೆ ವಿದೇಶಾಂಗ ಸಚಿವಾಲಯ ಚಾಲನೆ ನೀಡಿದೆ.
ನವದೆಹಲಿ, ಫೆಬ್ರವರಿ 09: ಮನಿ ಲಾಂಡ್ರಿಂಗ್ ಹಾಗೂ ಬ್ಯಾಂಕ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ರೆಡ್ ಕಾರ್ನರ್, ಜಾಮೀನು ರಹಿತ ವಾರೆಂಟ್, ನೋಟಿಸ್ ಪಡೆದಿರುವ ಉದ್ಯಮಿ ಮಲ್ಯರನ್ನು ಕರೆತರುವ ಪ್ರಕ್ರಿಯೆಗೆ ವಿದೇಶಾಂಗ ಸಚಿವಾಲಯ ಚಾಲನೆ ನೀಡಿದೆ. ಈ ಕುರಿತಂತೆ ಇಂಗ್ಲೆಂಡಿನ ಹೈಕಮಿಷನರ್ ಗೆ ಅಧಿಕೃತ ಮನವಿಯನ್ನು ಭಾರತ ಸರ್ಕಾರ ಕಳಿಸಿದೆ.
ಈ ಹಿಂದೆ ಅನೇಕ ಬಾರಿ ರೆಡ್ ಕಾರ್ನರ್, ಜಾಮೀನು ರಹಿತ ವಾರೆಂಟ್, ನೋಟಿಸುಗಳು ಜಾರಿಯಾದರೂ ಮಲ್ಯ ಅವರ ಪಾಸ್ ಪೋರ್ಟ್ ಜಪ್ತಿ ಮಾಡಲು ಆಗಿರಲಿಲ್ಲ. ಸದ್ಯ ವಿದೇಶದಲ್ಲಿರುವ ಮಲ್ಯ ಅವರ ಸಂಪರ್ಕ ಕೂಡಾ ಸಾಧ್ಯವಾಗಿರಲಿಲ್ಲ.
'ನಾನು ಭಾರತಕ್ಕೆ ಬರಬೇಕು ಅಂತಿದೀನಿ. ಅದರೆ ಏನು ಮಾಡ್ತೀರಿ, ಪಾಸ್ ಪೋರ್ಟ್ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನನ್ನ ಹತ್ತಿರ ಪಾಸ್ ಪೋರ್ಟ್ ಇಲ್'ಲ ಎಂದು ಮದ್ಯದ ದೊರೆ ವಿಜಯ್ ಮಲ್ಯ, ತಮ್ಮ ಲಾಯರ್ ಮೂಲಕ ದೆಹಲಿ ಹೈಕೋರ್ಟಿಗೆ ವಕೀಲ ಮೂಲಕ ತಿಳಿಸಿದ್ದರು.
ಇದಕ್ಕೆ ಪೂರಕವಾಗಿ ಬ್ರಿಟನ್ ಸರ್ಕಾರ ಕೂಡಾ ಈ ಬಗ್ಗೆ ಇರುವ ಕಾನೂನು ತೊಡಕನ್ನು ಮುಂದಿಟ್ಟಿತ್ತು. ಈಗ ತೊಡಕೆಲ್ಲವೂ ನಿವಾರಣೆಯಾಗಿದ್ದು, ಮಲ್ಯರನ್ನು ಭಾರತದ ಕೋರ್ಟಿನ ಕಟಕಟೆಗೆ ಕರೆತರುವ ಪ್ರಕ್ರಿಯೆಗೆ ತ್ವರಿತಗತಿಯಲ್ಲಿ ಚಾಲನೆ ಸಿಕ್ಕಿದೆ.

-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications