100 ಜಿಬಿಪಿಎಸ್ ವೇಗದ ಇಂಟರ್ನೆಟ್ ಸಾಧ್ಯ : ಇಸ್ರೋ
ಬೆಂಗಳೂರು, ಸೆಪ್ಟೆಂಬರ್ 25: ಇಸ್ರೋ 2019 ರಲ್ಲಿ ಉಡಾಯಿಸಲಿರುವ 4 ಉಪಗ್ರಹಗಳ ನೆರವಿನಿಂದ ದೇಶದ ಇಂಟರ್ನೆಟ್ ವೇಗ ಹೆಚ್ಚಲಿದೆ. ಈ ಉಪಗ್ರಹಗಳಿಂದ ಪ್ರತಿ ಸೆಕೆಂಡ್ಗೆ 100 ಗಿಗಾ ಬೈಟ್(Gbps) ಸ್ಪೀಡ್ನಲ್ಲಿ ಇಂಟರ್ನೆಟ್ ಲಭ್ಯವಾಗಲಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ.
ಕಳೆದ ವರ್ಷ ಜಿ ಸ್ಯಾಟ್-19 ಉಪಗ್ರಹವನ್ನು ಉಡಾವಣೆ ಮಾಡಿದ ಇಸ್ರೋ ಸಂಸ್ಥೆ ಇದೇ ನವೆಂಬರ್ನಲ್ಲಿ ಜಿ ಸ್ಯಾಟ್-29 ಉಪಗ್ರಹದ ಉಡಾವಣೆಗೆ ತಯಾರಿ ನಡೆಸುತ್ತಿದೆ. ಡಿಸೆಂಬರ್ನಲ್ಲಿ ಜಿ ಸ್ಯಾಟ್-11ನ್ನು ಅಂತರಿಕ್ಷಕ್ಕೆ ಕಳುಹಿಸಲು ಇಸ್ರೋ ಮುಂದಾಗಿದೆ. ಇದಲ್ಲದೆ, ಸ್ಯಾಟ್-20ನ್ನು 2019ರಲ್ಲಿ ಬಾಹ್ಯಾಕಾಶಕ್ಕೆ ಉಡಾವಣೆ ಮಾಡಲು ಇಸ್ರೋ ಸಿದ್ದವಾಗಿದೆ. ಈ ನಾಲ್ಕು ಉಪಗ್ರಹಗಳಿಂದಾಗಿ ಭಾರತದ ಇಂಟರ್ನೆಟ್ ಹೊಸ ವೇಗ ಪಡೆದುಕೊಳ್ಳಲಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ಹೇಳಿದರು.
ಭಾರತದಲ್ಲಿ 500 ಮಿಲಿಯನ್ ಇಂಟರ್ನೆಟ್ ಬಳಕೆದಾರರಿದ್ದರೂ, ಮೊಬೈಲ್ ಇಂಟರ್ನೆಟ್ ವೇಗದಲ್ಲಿ 109ನೇ ಸ್ಥಾನದಲ್ಲಿದೆ. ವಿಶ್ವದ ಇಂಟರ್ನೆಟ್ ಬಳಕೆದಾರರಲ್ಲಿ 2ನೇ ಸ್ಥಾನ ಪಡೆದಿರುವ ಭಾರತೀಯರ ಇಂಟರ್ನೆಟ್ ವೇಗವನ್ನು ಹೆಚ್ಚಿಸುವ ಸಲುವಾಗಿ ಅನೇಕ ಸಂಶೋಧನೆಗಳು ನಡೆಯುತ್ತಿದೆ.

ಭಾರತದಲ್ಲಿ ಮೊಬೈಲ್ ಇಂಟರ್ನೆಟ್ ವೇಗವು ಗರಿಷ್ಠ 8.8 ಎಂಬಿಪಿಎಸ್ ಹಾಗೂ ಬ್ರಾಡ್ಬ್ಯಾಂಡ್ ವೇಗ ಗರಿಷ್ಠ 18.82 ಎಂಬಿಪಿಎಸ್ ಹೊಂದಿದೆ. ವಿಶ್ವದಲ್ಲಿ ಅತಿ ವೇಗದ ಇಂಟರ್ನೆಟ್ ಸೌಲಭ್ಯವನ್ನು ನಾರ್ವೆ ದೇಶ ಒದಗಿಸುತ್ತಿದ್ದು, ಇಲ್ಲಿ 62 ಎಂಬಿಪಿಎಸ್ ವೇಗದಲ್ಲಿ ಮೊಬೈಲ್ನಲ್ಲಿ ಡೌನ್ಲೋಡ್ ಮಾಡಬಹುದಾಗಿದೆ. ಅದೇ ರೀತಿ 153 ಎಂಬಿಪಿಎಸ್ ಬ್ರಾಡ್ಬ್ಯಾಂಡ್ ವೇಗ ಹೊಂದಿರುವ ಸಿಂಗಪುರ ಕೂಡ ಇಂಟರ್ನೆಟ್ ಮೂಲಕ ಕ್ರಾಂತಿ ಉಂಟು ಮಾಡಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications