ಏಪ್ರಿಲ್ ತಿಂಗಳಲ್ಲಿ ಮಾರಾಟವಾದ ಕಾರುಗಳ ಸಂಖ್ಯೆ ಸೊನ್ನೆ!
ಬೆಂಗಳೂರು, ಮೇ 05: ಭಾರತದ ಆಟೋಮೊಬೈಲ್ಸ್ ಕ್ಷೇತ್ರಕ್ಕೆ ಕೊರೊನಾ ಭಾರಿ ಹೊಡೆತವನ್ನೇ ಕೊಟ್ಟಿದೆ. ಏಪ್ರಿಲ್ ತಿಂಗಳಲ್ಲಿ ಬಹುತೇಕ ಎಲ್ಲಾ ಕಂಪನಿಗಳು ಶೂನ್ಯ ಮಾರಾಟ ದಾಖಲೆ ಬರೆದಿವೆ.
ಮಾರುತಿ ಸುಜುಕಿ, ಮಹೀಂದ್ರಾ ಅಂಡ್ ಮಹೀಂದ್ರಾ, ಹ್ಯುಂಡೈ , ಎಂಜಿ ಮೋಟರ್, ಟೋಯೋಟಾ ಕಿರ್ಲೋಸ್ಕರ್ ಕಂಪನಿಗಳ ಒಂದೇ ಒಂದು ಕಾರು/ವಾಹನಗಳು ಮಾರಾಟವಾಗಿಲ್ಲ.
ಮಾರ್ಚ್ 25ಕ್ಕೆ ಆರಂಭವಾದ ಲಾಕ್ಡೌನ್ ಈಗ ಮೂರನೇ ಅವಧಿಗೆ ವಿಸ್ತರಣೆಗೊಂಡಿದೆ. ದೇಶದೆಲ್ಲೆಡೆಯಲ್ಲಿರುವ ಕಾರು ಡೀಲರ್ ಶಿಪ್ ಹಾಗೂ ಉತ್ಪಾದನಾ ಘಟಕಗಳು ಬಂದ್ ಆಗಿವೆ. ಉತ್ಪಾದನೆ ಸ್ಥಗಿತದಿಂದ ಆಟೋಮೊಬೈಲ್ಸ್ ಕ್ಷೇತ್ರಕ್ಕೆ ಪ್ರತಿ ದಿನ 2,300 ಕೋಟಿ ರು (306 ಮಿಲಿಯನ್ ಡಾಲರ್) ನಷ್ಟವಾಗುತ್ತಿದೆ ಎಂದು ಭಾರತೀಯ ಆಟೋಮೊಬೈಲ್ ಉತ್ಪಾದಾನಾ ಸೊಸೈಟಿ (SIAM) ಹೇಳಿದೆ.

ಮಾರ್ಚ್ ತಿಂಗಳಿನಲ್ಲೇ ಬೇಡಿಕೆ ಕುಸಿತ ಎದುರಿಸಬೇಕಾಯಿತು. ಕಳೆದ 20 ವರ್ಷಗಳಲ್ಲೇ ಕಾಣದಂಥ ಕುಸಿತ ದಾಖಲಾಗಿದೆ ಎಂದು ಐಸಿಆರ್ ಎ ಕ್ರೆಡಿಟ್ ರೇಟಿಂಗ್ ಸಂಸ್ಥೆ ಉಪಾಧ್ಯಕ್ಷ ಸುಬ್ರತಾರಾಯ್ ಹೇಳಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಮಾರುತಿ ಸುಜುಕಿ ಮಾರಾಟ ಶೇ 47.9ರಷ್ಟು ಕುಸಿತ ಕಂಡಿದ್ದರೆ, ವರ್ಷದಿಂದ ವರ್ಷಕ್ಕೆ ಲೆಕ್ಕದಲ್ಲಿ ಮಹೀಂದ್ರಾ ಅಂಡ್ ಮಹೀಂದ್ರಾ ಶೇ 90ರಷ್ಟು ಕುಸಿತ ಕಂಡಿತ್ತು.
ಉತ್ಪಾದನಾ ಕ್ಷೇತ್ರಕ್ಕೆ ಅಗತ್ಯ ಕಚ್ಚಾವಸ್ತು ಒದಗಿಸುತ್ತಿದ್ದ ಸಣ್ಣ ಪುಟ್ಟ ಕಂಪನಿಗಳು ಬಂದ್ ಆಗಿವೆ, ಎಲ್ಲಾ ಕಡೆ ಆದಾಯಯಿಲ್ಲ, ಲಾಕ್ಡೌನ್ ನಂತರ ಬೇಡಿಕೆ ಹೆಚ್ಚಾಗಿ, ಉತ್ಪಾದನಾ ಪೂರೈಕೆ ಸಮರ್ಪಕವಾಗಿ ನಡೆದರೆ ಮಾರಾಟ ವೃದ್ಧಿಯಾಗಬಲ್ಲುದು ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications