ಭಾರತದಲ್ಲಿ ಆರ್ಥಿಕತೆ ಶೇ.7.4ರಷ್ಟು ಏರಿಕೆ ಎಂದ ನಿರ್ಮಲಾ ಸೀತಾರಾಮನ್
ನವದೆಹಲಿ, ಆಗಸ್ಟ್ 26: ಭಾರತದ ಆರ್ಥಿಕತೆಯು 2022ನೇ ಸಾಲಿನ ಹಣಕಾಸು ವರ್ಷದಲ್ಲಿ ಶೇ.7.4ರಷ್ಟು ಬೆಳವಣಿಗೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ ಸಾಲಿನಲ್ಲೂ ದೇಶದ ಆರ್ಥಿಕತೆಯು ಇದೇ ಮಟ್ಟದಲ್ಲಿ ಮುಂದುವರಿಯಲಿದೆ ಎಂದಿದ್ದಾರೆ.
ಎಫ್ಇ ಬೆಸ್ಟ್ ಬ್ಯಾಂಕ್ ಪ್ರಶಸ್ತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, "ದೇಶದಲ್ಲಿ ಇತ್ತೀಚಿನ ಬೆಳವಣಿಗೆಗಳ ಆಧಾರದಲ್ಲಿ ನಾವು ಹಾಕಿರುವ ಅಂದಾಜಿನ ಪ್ರಕಾರ, ಆರ್ಥಿಕತೆಯು ಶೇ.7.4ರಷ್ಟಿದ್ದು, ಮುಂದಿನ ವರ್ಷದಲ್ಲಿಯೂ ಇದು ಮುಂದುವರಿಯುತ್ತದೆ ಎಂದು ಹೇಳಿದರು.
ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಮತ್ತು ವಿಶ್ವಬ್ಯಾಂಕ್ ಮುಂದಿನ ಎರಡು ಆರ್ಥಿಕ ವರ್ಷಗಳಲ್ಲಿ ಭಾರತದ ಬೆಳವಣಿಗೆಯು ಅತ್ಯಂತ ವೇಗವಾಗಿರಲಿದೆ ಎಂದು ಅಂದಾಜಿಸಿದೆ. ಅವರ ಅಂದಾಜುಗಳು ಭಾರತೀಯ ರಿಸರ್ವ್ ಬ್ಯಾಂಕ್ನೊಂದಿಗೆ ಹೋಲಿಕೆ ಆಗುತ್ತಿದೆ ಎಂದು ಸಚಿವರು ಹೇಳಿದರು.

ಗಾಳಿಯಲ್ಲಿ ಗುಂಡು ಹಾರಿಸಲು ಸಾಧ್ಯವಿಲ್ಲ:
ಜಾಗತಿಕ ಪರಿಸ್ಥಿತಿಯು ಸವಾಲಿನಿಂದ ಕೂಡಿದೆ ಎಂದಿರುವ ಸಚಿವೆ ನಿರ್ಮಲಾ ಸೀತಾರಾಮನ್, ಈ ಕುರಿತು ಮೊದಲೇ ಎಚ್ಚರಿಕೆ ನೀಡುವುದಕ್ಕೆ ಇದು ಸರಿಯಾದ ಸಮಯವಲ್ಲ ಎಂದು ಹೇಳಿದರು. ಜಾಗತಿಕ ಬೆಳವಣಿಗೆ ಕುಂಠಿತವಾಗುವುದರಿಂದ ರಫ್ತು ವಲಯವು ತೊಂದರೆಗಳನ್ನು ಎದುರಿಸಲಿದೆ. ಈ ಸವಾಲನ್ನು ಎದುರಿಸುವ ನಿಟ್ಟಿನಲ್ಲಿ ಸರ್ಕಾರವು ಕಾರ್ಯಪ್ರವೃತ್ತವಾಗಿದೆ ಎಂದು ಅವರು ಹೇಳಿದರು.
ಉಚಿತವಾಗಿ ನೀಡುವ ವಸ್ತುಗಳ ಮೇಲೆ ಚರ್ಚೆ:
ಇದರ ಮಧ್ಯೆ ಉಚಿತವಾಗಿ ನೀಡುವ ವಸ್ತುಗಳು ಮತ್ತು ವಿಷಯಗಳ ಬಗ್ಗೆ ಕಠಿಣ ಚರ್ಚೆಯ ಅಗತ್ಯವಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಿಹೇಳಿದರು. ಆದರೆ ಚುನಾವಣಾ ಪೂರ್ವ ಭರವಸೆಗಳನ್ನು ನೀಡುವ ರಾಜಕೀಯ ಪಕ್ಷಗಳು ಖರ್ಚುಗಳನ್ನು ನೋಡಿಕೊಳ್ಳಲು ಬಜೆಟ್ ನಿಬಂಧನೆಗಳನ್ನು ಮಾಡಬೇಕು. ಇತರ ಘಟಕಗಳ ಮೇಲೆ ಹೊರೆಯನ್ನು ಹಾಕಬಾರದು ಎಂದು ಹೇಳಿದರು.
ಅನೇಕ ರಾಜ್ಯಗಳಲ್ಲಿ ಉಚಿತ ವಿದ್ಯುತ್ ಭರವಸೆ ನೀಡುತ್ತಿರುವ ಉದಾಹರಣೆಯನ್ನು ಉಲ್ಲೇಖಿಸಿದ ಹಣಕಾಸು ಸಚಿವರು, ಉಚಿತವಾಗಿ ನೀಡುವ ಸೇವೆಗಳು ಹೊರೆಯನ್ನು ವಿದ್ಯುತ್ ಡಿಸ್ಕಾಂಗಳು ಅಥವಾ ಜೆಂಕೋಸ್ ಮೇಲೆ ಹೇರಬಾರದು ಎಂದು ಹೇಳಿದರು. "ಚುನಾವಣೆ ಸಮಯದಲ್ಲಿ ಜನರಿಗೆ ಭರವಸೆ ನೀಡಿದ್ದರೆ, ಒಮ್ಮೆ ಆಲೋಚನೆ ಮಾಡಿರಿ. ಯಾವುದೇ ಒಂದು ಜವಾಬ್ದಾರಿಯುತ ಪಕ್ಷವಾಗಿ, ನೀವು ಅಧಿಕಾರಕ್ಕೆ ಬಂದ ನಂತರ ಊಹಿಸಿಕೊಳ್ಳಿ, ಅದಕ್ಕಾಗಿ ಬಜೆಟ್ನಲ್ಲಿ ನಿಬಂಧನೆಯನ್ನು ಮಾಡಿರಿ," ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಡಿಸ್ಕಾಂಗೆ ಯಾಕೆ ಹೊರೆ ಹಾಕುತ್ತೀರಿ?
ಅನೇಕ ರಾಜ್ಯಗಳು ವಿದ್ಯುತ್ ವಲಯದ ವಿಷಯದಲ್ಲಿ ಉಪಯುಕ್ತತೆಗಳನ್ನು ಭಾಗಗಳಲ್ಲಿ ಪಾವತಿಸಿದ ಅಥವಾ ಪಾವತಿಸದ ಪ್ರಕರಣಗಳಿವೆ. "ಚುನಾವಣೆಗೆ ಹೋಗದ ಡಿಸ್ಕಾಂಗೆ ನೀವು ಹೊರೆಯನ್ನು ಬದಲಾಯಿಸುತ್ತೀರಿ. ಡಿಸ್ಕಾಂ ಮತ ಕೇಳಿಲ್ಲ. ಅವರಿಗೇಕೆ ಹೊರೆಯಾಗಬೇಕು? ಪೂರೈಕೆಯನ್ನು ಮುಂದುವರಿಸುವುದನ್ನು ನಿಲ್ಲಿಸುವ ಅಧಿಕಾರ ಅವರಿಗೆ ಇದೆಯೇ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications