50 ಸಾವಿರ ಪಾಯಿಂಟ್ ದಾಟಿದ ಸೂಚ್ಯಂಕ, ಹೂಡಿಕೆದಾರರು ಸಂತಸ
ಮುಂಬೈ, ಜನವರಿ 21: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕ ಹೊಸ ದಾಖಲೆ ಬರೆದಿದೆ. ಜನವರಿ 21, 2021ರಂದು ವಹಿವಾಟು ಆರಂಭವಾಗುತ್ತಿದ್ದಂತೆ ಸೆನ್ಸೆಕ್ಸ್ 50 ಸಾವಿರ ಪಾಯಿಂಟ್ ಗಳ ಗಡಿ ದಾಟಿದೆ. ಅಮೆರಿಕದಲ್ಲಿ ಜೋಸೆಫ್ ಬೈಡನ್ 46ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮದ ನಂತರ ಯುಎಸ್ ಷೇರುಪೇಟೆ ಚೇತರಿಕೆ ಕಂಡ ಬೆನ್ನಲ್ಲೇ ಏಷ್ಯನ್ ಷೇರುಪೇಟೆಯೂ ಹೊಸ ದಾಖಲೆ ಬರೆಯುವ ಹಾದಿಯಲ್ಲಿದೆ.
ಈ ಸಮಯಕ್ಕೆ ಸೆನ್ಸೆಕ್ಸ್ 281.12 ಪಾಯಿಂಟ್ ಗಳ ಏರಿಕೆ ಕಂಡು, 50,073.26 ಪಾಯಿಂಟ್ ಗಳಲ್ಲಿ ವಹಿವಾಟು ಆಗುತ್ತಿತ್ತು. ಇನ್ನು ನಿಫ್ಟಿ 82.40 ಪಾಯಿಂಟ್ ಗಳು ಮೇಲೇರಿ, 14,727.10 ಪಾಯಿಂಟ್ ಗಳಲ್ಲಿ ವ್ಯವಹಾರ ನಡೆಸುತ್ತಿದೆ.
2019ರಲ್ಲಿ ಮೋದಿ ಅಧಿಕಾರಕ್ಕೇರಿದ ಸಂದರ್ಭದಲ್ಲಿ ಮೇ 23, 2019ರಂದು ಸೂಚ್ಯಂಕ 40, 000 ಪಾಯಿಂಟ್ಸ್ ಕ್ಕೇರಿ ದಾಖಲೆ ಬರೆದಿತ್ತು. ಇಂದು ಬಿಎಸ್ಇಯಲ್ಲಿ ಸುಮಾರು 30 ಕಂಪನಿಗಳ ಷೇರುಗಳು 300ಕ್ಕೂ ಅಧಿಕ ಪಾಯಿಂಟ್ಸ್ ಏರಿಕೆ ಕಂಡಿವೆ. ಬಹುತೇಕ ಐಟಿ ಕಂಪನಿ ಷೇರುಗಳು ಲಾಭ ಪಡೆದುಕೊಂಡಿದ್ದು, ಹೂಡಿಕೆದಾರರಿಗೆ ಸಂತಸ ಮೂಡಿಸಿದೆ. ಕೊವಿಡ್ 19 ಪರಿಣಾಮ ಷೇರುಪೇಟೆ ಹೆಚ್ಚಿನ ಸಂಭ್ರಮದ ಸ್ಥಿತಿಯಲ್ಲಿರಲಿಲ್ಲ.

ಗಳಿಕೆ: ಬಜಾಜ್ ಆಟೋ, ಬಜಾಬ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಎಚ್ ಸಿಎಲ್ ಟೆಕ್, ರಿಲಯನ್ಸ್ ಇಂಡಸ್ಟ್ರೀಸ್, ಏಷ್ಯನ್ ಪೈಂಟ್ಸ್ ಹೆಚ್ಚಿನ ಲಾಭ ಗಳಿಸಿವೆ.
ಫೆಬ್ರವರಿ 1ರಂದು ಕೇಂದ್ರ ಬಜೆಟ್ 2021 ಮಂಡನೆಯಾಗಲಿದ್ದು, ಹೂಡಿಕೆದಾರರು ಉತ್ತಮ ನಿರೀಕ್ಷೆಯೊಂದಿಗೆ ಷೇರುಪೇಟೆ ವ್ಯವಹಾರದಲ್ಲಿ ತೊಡಗಿದ್ದಾರೆ. ಟಿಸಿಎಸ್, ಇನ್ಫೋಸಿಸ್, ವಿಪ್ರೋ, ಎಚ್ ಸಿಎಲ್ ಹೊಸ ನೇಮಕಾತಿ, ಹೊಸ ಒಪ್ಪಂದದ ಬಗ್ಗೆ ಘೋಷಣೆ ಮಾಡಿವೆ. ಇವೆಲ್ಲವೂ ಷೇರುಪೇಟೆ ಮೇಲೆ ಪರಿಣಾಮ ಬೀರಿವೆ ಎನ್ನಬಹುದು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications