ಟ್ರಂಪ್ ನೀತಿಗೆ ಭಾರತೀಯ ಐಟಿ ಕ್ಷೇತ್ರ ತತ್ತರ
ಭಾರತದ ಸಾಫ್ಟ್ ವೇರ್ ಉದ್ಯೋಗಿಗಳಿಗೆ ಅಮೆರಿಕಕ್ಕೆ ಹಾರಲು ವರವಾಗಿದ್ದ ಎಚ್1- ಬಿ ವೀಸಾವನ್ನು ತೆಗೆದು ಹಾಕುವ ಸಾಧ್ಯತೆ ಹೆಚ್ಚಿದೆ. ಇದರಿಂದಾಗಿ ಸುಮಾರು 150 ಬಿಲಿಯನ್ ಡಾಲರ್ ಐಟಿ ಸೇವಾ ಕ್ಷೇತ್ರ ಆತಂಕದಲ್ಲಿದೆ.
ಬೆಂಗಳೂರು, ನವೆಂಬರ್ 29: ಅಮೆರಿಕ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ವೈಖರಿ ಭಾರತೀಯ ಐಟಿ ಕ್ಷೇತ್ರಕ್ಕೆ ಮುಳುವಾಗುವ ಸಾಧ್ಯತೆ ಕಂಡು ಬಂದಿದೆ. ವೀಸಾ ನೀತಿ, ಸ್ಥಳೀಯರಿಗೆ ಮಾತ್ರ ಉದ್ಯೋಗ ಯೋಜನೆಗಳನ್ನು ಜಾರಿಗೊಳಿಸಿದರೆ ಟಿಸಿಎಸ್, ಇನ್ಫೋಸಿಸ್ ಹಾಗೂ ವಿಪ್ರೋಗೆ ಭಾರಿ ಹೊಡೆತ ಬೀಳಲಿದೆ.
ಭಾರತದ ಸಾಫ್ಟ್ ವೇರ್ ಉದ್ಯೋಗಿಗಳಿಗೆ ಅಮೆರಿಕಕ್ಕೆ ಹಾರಲು ವರವಾಗಿದ್ದ ಎಚ್1- ಬಿ ವೀಸಾವನ್ನು ತೆಗೆದು ಹಾಕುವ ಸಾಧ್ಯತೆ ಹೆಚ್ಚಿದೆ. ಇದರಿಂದಾಗಿ ಸುಮಾರು 150 ಬಿಲಿಯನ್ ಡಾಲರ್ ಐಟಿ ಸೇವಾ ಕ್ಷೇತ್ರ ಆತಂಕದಲ್ಲಿದೆ.[ಇನ್ಫಿ, ಟಿಸಿಎಸ್ ವಿರುದ್ಧ ತನಿಖೆಗೆ ಮುಂದಾದ ಅಮೆರಿಕ]

ಇದರ ಜತೆಗೆ ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಅಮೆರಿಕದಲ್ಲೇ ಕ್ಯಾಂಪಸ್ ಸಂದರ್ಶನ ನಡೆಸಲು ಸೂಚನೆ ನೀಡುವ ಸಾಧ್ಯತೆಯಿದೆ. ಈಗಾಗಲೇ ಅಲ್ಲಿನ ಕಾಲೇಜುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಂಪಸ್ ಇಂಟರ್ ವ್ಯೂ ನಡೆಸಲು ಮುಂದಾಗಿವೆ.[ಎಚ್ 1 ಬಿ ಉಳ್ಳ ದಂಪತಿಗೆ ವರ್ಕ್ ಪರ್ಮಿಟ್]
2014-15ರ ಅವಧಿಯಲ್ಲಿ ಎಚ್1-ಬಿ ವೀಸಾದ ಅಡಿಯಲ್ಲಿ ಟಿಸಿಎಸ್, ವಿಪ್ರೋ, ಇನ್ಫೋಸಿಸ್ ಕಂಪೆನಿಗಳು ಒಟ್ಟು 86 ಸಾವಿರದಷ್ಟು ಟೆಕ್ಕಿಗಳನ್ನು ಅಮೆರಿಕಕ್ಕೆ ಕಳುಹಿಸಿತ್ತು. ಆದರೆ, ಈಗ ಸ್ಕಿಲ್ಡ್ ವರ್ಕರ್ ವೀಸಾ ಸಂಪೂರ್ಣ ಸ್ಥಗಿತಗೊಂಡರೆ ಏನು ಗತಿ ಎಂಬ ಆತಂಕ ಮೂಡಿದೆ.
ಯೂರೋಪಿಯನ್ ಒಕ್ಕೂಟದಿಂದ ಹೊರಹೋಗುವ ಬ್ರಿಟನ್ ನಿರ್ಧಾರದಿಂದ ಭಾರತದ ಐಟಿ ವಲಯಕ್ಕೆ ಭಾರಿ ಹೊಡೆತ ಉಂಟಾಗಿದೆ. ಅಮೆರಿಕ ಹಾಗೂ ಬ್ರಿಟನ್ನಿನ ಬ್ಯಾಂಕ್ ಹಾಗೂ ವಿಮಾದಾರರು ಭಾರತದ ಪ್ರಮುಖ ಗ್ರಾಹಕರಾಗಿದ್ದಾರೆ ಎಂಬುದನ್ನು ಮರೆಯುವಂತಿಲ್ಲ.[ವಾರ್ಷಿಕ ಸಂಬಳ 1 ಡಾಲರ್ ಮಾತ್ರ ಪಡೆಯುವೆ: ಟ್ರಂಪ್]
ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಇನ್ಫೋಸಿಸ್ ನ ಸಿಒಒ ಪ್ರವೀಣ್ ರಾವ್ ಪ್ರತಿಕ್ರಿಯಿಸಿ, ವಿದೇಶಕ್ಕೆ ಪ್ರತಿಭಾವಂತ ಉದ್ಯೋಗಿಗಳನ್ನು ಕಳುಹಿಸುವುದು ಸಹಜ ಪ್ರಕ್ರಿಯೆ. ಆದರೆ, ಈಗ ಗೊಂದಲ ಉಂಟಾಗಿರುವುದರಿಂದ ಈ ಬಗ್ಗೆ ಚರ್ಚೆ ನಡೆಯಬೇಕಿದೆ. ನಾವು ವಿಶ್ವವಿದ್ಯಾಲಯಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ನಿಲ್ಲಿಸುವುದಿಲ್ಲ ಎಂದಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications