Ajay Banga: ಭಾರತೀಯ ಮೂಲದ ಅಜಯ್ ಬಂಗಾ ಮುಂದಿನ ವಿಶ್ವಬ್ಯಾಂಕ್ ಅಧ್ಯಕ್ಷ
ನ್ಯೂಯಾರ್ಕ್, ಮೇ. 03: ಭಾರತೀಯ ಮೂಲದ ಅಜಯ್ ಬಂಗಾ ತನ್ನ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ವಿಶ್ವಬ್ಯಾಂಕ್ ಬುಧವಾರ ದೃಢಪಡಿಸಿದೆ. ವಿಶ್ವಬ್ಯಾಂಕ್ನ 25 ಸದಸ್ಯರ ಕಾರ್ಯನಿರ್ವಾಹಕ ಮಂಡಳಿಯು ಬುಧವಾರ ಮಾಸ್ಟರ್ಕಾರ್ಡ್ ಮಾಜಿ ಸಿಇಒ ಅಜಯ್ ಬಂಗಾ ಅವರನ್ನು ಐದು ವರ್ಷಗಳ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
ಮಾಸ್ಟರ್ಕಾರ್ಡ್ನ ಮಾಜಿ ಸಿಇಒ ಮತ್ತು ಭಾರತ ಮೂಲದ ಅಜಯ್ ಬಂಗಾರ ಹೆಸರನ್ನು ವಿಶ್ವಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಈ ಹಿಂದೆ ಹೇಳಿದ್ದರು. ವಿಶ್ವಬ್ಯಾಂಕ್ನ ಮುಖ್ಯಸ್ಥರಾಗಿದ್ದ ಡೇವಿಡ್ ಮಾಲ್ಪಾಸ್ ಶೀಘ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬಳಿಕ ಯುಎಸ್ ಅಧ್ಯಕ್ಷ ಫೆಬ್ರವರಿ ಅಂತ್ಯದಲ್ಲಿ ವಿಶ್ವ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಬಂಗಾರನ್ನು ಶಿಫಾರಸು ಮಾಡಿದ್ದರು.

63 ವರ್ಷದ ಅಜಯ್ ಬಂಗಾ ಜೂನ್ 2 ರಿಂದ ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. "ವಿಶ್ವಬ್ಯಾಂಕ್ ಗ್ರೂಪ್ ಎವಲ್ಯೂಷನ್ ಪ್ರಕ್ರಿಯೆಯಲ್ಲಿ ಅಜಯ್ ಬಂಗಾ ಅವರೊಂದಿಗೆ ಕೆಲಸ ಮಾಡಲು ಮಂಡಳಿಯು ಎದುರು ನೋಡುತ್ತಿದೆ" ಎಂದು ಮಂಡಳಿಯು ಮತ ಚಲಾಯಿಸಿದ ಸ್ವಲ್ಪ ಸಮಯದ ನಂತರ ಹೇಳಿಕೆಯಲ್ಲಿ ತಿಳಿಸಿದೆ. ಅಜಯ್ ಬಂಗಾ ಜೂನ್ 2 ರಂದು ಡೇವಿಡ್ ಮಾಲ್ಪಾಸ್ ಅವರಿಂದ ಅಧಿಕಾರ ವರ್ಗಾವಣೆ ಮಾಡಿಕೊಳ್ಳಲಿದ್ದಾರೆ.
ಯುಎಸ್ ಅಧ್ಯಕ್ಷ ಜೋ ಬೈಡೆನ್ ಅಜಯ್ ಬಂಗಾ ಅವರನ್ನು ಶಿಫಾರಸು ಮಾಡುವಾಗ , "ಅಜಯ್ ಬಂಗಾ ಮೂರು ದಶಕಕ್ಕೂ ಅಧಿಕ ಸಮಯದಿಂದ ಜಾಗತಿಕವಾಗಿ ಉದ್ಯೋಗ ಸೃಷ್ಟಿ, ದೊಡ್ಡ ಆರ್ಥಿಕತೆಯಲ್ಲಿ ಹೂಡಿಕೆ ಸೃಷ್ಟಿಸುವಲ್ಲಿ, ಹಲವಾರು ಬದಲಾವಣೆಗಳ ಮೂಲಕವೇ ಜಾಗತಿಕವಾಗಿ ಸಂಸ್ಥೆಗಳಿಗೆ ಯಶಸ್ವಿಯಾಗಿ ಮಾರ್ಗದರ್ಶನ ನೀಡಿದ್ದಾರೆ. ಅಂತಹ ವ್ಯಕ್ತಿಯ ಹೆಸರನ್ನು ವಾಷಿಂಗ್ಟನ್ ವಿಶ್ವ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶಿಸುತ್ತದೆ" ಎಂದು ಹೊಗಳಿದ್ದರು.
ಅಜಯ್ ಬಂಗಾ 2021ರಲ್ಲಿ ಆರಂಭವಾದ ಜನರಲ್ ಅಟ್ಲಾಂಟಿಕ್ನ ಬಿಯಾಂಡ್ನೆಟ್ಜಿರೋ ಸಾಹಸೋದ್ಯಮಕ್ಕೆ ಸಲಹೆಗಾರರಾಗಿದ್ದವರು. ಮಾಸ್ಟರ್ಕಾರ್ಡ್ ಮುಖ್ಯಸ್ಥರಾಗಿ ಮತ್ತು ಅಮೇರಿಕನ್ ರೆಡ್ ಕ್ರಾಸ್, ಕ್ರಾಫ್ಟ್ ಫುಡ್ಸ್ ಮತ್ತು ಡೌ ಇಂಕ್ನ ಮಂಡಳಿಗಳಲ್ಲಿಯೂ ಸೇವೆ ನೀಡಿ ಸುಮಾರು 30 ವರ್ಷಗಳ ಅನುಭವವನ್ನು ಹೊಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications