ಡಾಲರ್ ಎದುರು ಮತ್ತೆ ದುರ್ಬಲಗೊಂಡ ರುಪಾಯಿ
ಮುಂಬೈ,ಜೂ.16: ನರೇಂದ್ರ ಮೋದಿ ಅವರ ಮೊದಲ ವಿದೇಶಿ ಯಾತ್ರೆ ನಂತರ ರುಪಾಯಿ ಮತ್ತೆ ಚೇತರಿಸಿಕೊಳ್ಳುತ್ತಾರೆ ಎಂಬ ಆಶಯ ತಣ್ಣಗಾಗಿದೆ. ರೂಪಾಯಿ ಮತ್ತೆ ದುರ್ಬಲಗೊಂಡಿದೆ. ಕಳೆದ ಒಂದು ತಿಂಗಳ ಹಿಂದಿನ ಹಿನ್ನಡೆಯ ಹಾದಿಗೆ ತಲುಪಿದೆ.
ಸೋಮವಾರ ಷೇರು ಪೇಟೆ ಆರಂಭಗೊಳ್ಳುತ್ತಿದ್ದಂತೆ ರೂಪಾಯಿ ಮೌಲ್ಯ ಕ್ಷೀಣಿಸಿ ಪ್ರತಿ ಡಾಲರ್ಗೆ 60 ರೂ.ಗೆ ಮುಟ್ಟಿದ್ದು ಇದೇ ವೇಳೆ ಕಚ್ಚಾತೈಲ ಬೆಲೆಯು ಪ್ರತಿ ಬ್ಯಾರೆಲ್ಗೆ 113 ಡಾಲರ್ಗೆ ಮುಟ್ಟಿದೆ. ಇರಾಕ್ನಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಉಗ್ರಗಾಮಿ ಸಂಘಟನೆಗಳು ಕೆಲವೊಂದು ನಗರಗಳನ್ನು ಹಿಡಿತಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆ ಒತ್ತಡದಲ್ಲಿದ್ದು, ಅದರಿಂದಾಗಿ ತೈಲ ಬೆಲೆ ಏರಿಕೆಯಾಗುತ್ತಿದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.
ಶೇಕಡ ಮೂರರಲ್ಲಿ ಎರಡರಷ್ಟು ತೈಲವನ್ನು ಆಮದು ಮಾಡಿಕೊಳ್ಳುತ್ತಿರುವ ಭಾರತ ಈ ಬೆಲೆ ಏರಿಕೆಯಿಂದ ಸಾಕಷ್ಟು ಆರ್ಥಿಕ ಹೊಡೆತ ಅನುಭವಿಸಲಿದೆ ಎಂದು ಹೇಳಿದ್ದಾರೆ. ಇರಾಕ್ ನಲ್ಲಿರುವ ಸುಮಾರು 15 ಸಾವಿರಕ್ಕೂ ಅಧಿಕ ಭಾರತೀಯರಿಗೆ ಭಾರತಕ್ಕೆ ಮರಳುವಂತೆ ಸೂಚಿಸಲಾಗಿದೆ. [ಏಷ್ಯಾ ಫೆಸಿಫಿಕ್ ನಲ್ಲಿ ಡಾಲರ್ ವಿರುದ್ಧ ರುಪಾಯಿ ಏರಿಕೆ]

ಕೂಡಲೇ ಆರ್ಬಿಐ ಮಧ್ಯಪ್ರವೇಶಿಸಬೇಕೆಂದು ಕೆಲ ಬ್ಯಾಂಕ್ಗಳು ಒತ್ತಾಯಿಸಿವೆ. ಇರಾಕ್ ಸಮಸ್ಯೆ ಎಲ್ಲಿಯವರೆಗೂ ಮುಂದುವರೆಯಲಿದೆಯೋ ಅಲ್ಲಿಯ ತನಕ ತೈಲು ಮಾರುಕಟ್ಟೆಯಲ್ಲಿ ಒತ್ತಡ ಮುಂದುವರೆಯಲಿದೆ ಎಂದು ಹೇಳಲಾಗಿದೆ.
ಬಿಎಸ್ ಇ ಸೆನ್ಸೆಕ್ಸ್ 37.69 ಅಂಶಗಳು ಇಳಿಕೆ ಅಥವಾ 0.15 % ಕುಸಿತ ಕಂಡಿದೆ. ಕಳೆದ ಮೇ 5 ರಲ್ಲಿ ಯುಎಸ್ ಡಾಲರ್ ಎದುರು 60.21 ರು ಗೆ ಕುಸಿದಿದ್ದು, ಆದರೆ, ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ಡಿಎ ಕೇಂದ್ರದಲ್ಲಿ ಅಧಿಕಾರ ಸ್ವೀಕರಿಸಿದ ಮೇಲೆ ಸ್ಥಿರ ಆರ್ಥಿಕತೆಯ ಭರವಸೆ ಮೂಡಿತ್ತು. ಹೀಗಾಗಿ ಷೇರುಪೇಟೆಯಲ್ಲಿ ತಿಂಗಳಲ್ಲಿ ಎರಡು ಬಾರಿ ಸೂಚ್ಯಂಕ 25,000 ಅಂಕಗಳು ದಾಟಿ ಸಂಚಲನ ಮೂಡಿಸಿತ್ತು. ಈಗ ಡಾಲರ್ ಎದುರು ರುಪಾಯಿ ಕುಸಿತ ಕೊಂಚ ಆತಂಕ ಕಾರಿ ಎನಿಸಿದರೂ, ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳಿವೆ ಎನ್ನಲಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications