ಶೇ.7.3ಕ್ಕೆ ಕುಸಿದ ಭಾರತದ ಆರ್ಥಿಕತೆ, 4 ದಶಕಗಳಲ್ಲಿ ಅತಿ ಕಳಪೆ
ನವದೆಹಲಿ, ಮೇ 31: ಭಾರತದ ಆರ್ಥಿಕತೆಯು 2020-21 7.3ಕ್ಕೆ ಕುಸಿದಿದೆ, ಇದು ಕಳೆದ ನಾಲ್ಕು ದಶಕಗಳಲ್ಲೇ ಅತಿ ಕಳಪೆ ಆರ್ಥಿಕತೆ ಎಂದು ವಿಶ್ಲೇಷಿಸಲಾಗಿದೆ. 2020-21ರ ಕೊನೆಯ ತ್ರೈಮಾಸಿಕದಲ್ಲಿ 1.6ರ ಬೆಳವಣಿಗೆ ಕಂಡಿದ್ದರೂ ಒಟ್ಟಾರೆ ಜಿಡಿಪಿ ಋಣಾತ್ಮಕವಾಗಿ ಶೇ.7.3ರಷ್ಟಾಗಿದೆ.
ಭಾರತದ ಕಳೆದ ಒಂದು ವರ್ಷದಿಂದಿರುವ ಕೊರೊನಾ ಪರಿಸ್ಥಿತಿ ಹಾಗೂ ಲಾಕ್ಡೌನ್ ಕಾರಣದಿಂದ ಆರ್ಥಿಕತೆ ಈ ಮಟ್ಟಕ್ಕೆ ಕುಸಿದಿರುವುದಾಗಿ ಹೇಳಲಾಗಿದೆ. ಭಾರತದಲ್ಲಿ ಒಟ್ಟಾರೆ ಜಿಡಿಪಿ 38.96 ಲಕ್ಷ ಕೋಟಿ ರೂಪಾಯಿ ಇದ್ದು, ಕಳೆದ 2019-20 ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ.1.6ರಷ್ಟು ವೃದ್ಧಿಯಾಗಿರುವುದು ತಿಳಿದುಬಂದಿದೆ.
ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ರಾಷ್ಟ್ರವ್ಯಾಪಿ ಲಾಕ್ಡೌನ್ ಹೇರಿದ್ದರಿಂದ 2021ರ ಮೊದಲಾರ್ಧದಲ್ಲಿ ಭಾರತದ ಆರ್ಥಿಕತೆ ಸಂಕುಚಿತಗೊಂಡಿತ್ತು. ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ 0.4ರಷ್ಟು ಬೆಳವಣಿಗೆಯೊಂದಿಗೆ ಸಕಾರಾತ್ಮಕ ಸ್ಥಿತಿಗೆ ಮರಳುವ ಮೊದಲು ಏಪ್ರಿಲ್-ಜೂನ್ನಲ್ಲಿ ಆರ್ಥಿಕತೆಯು ಶೇ.24.38ಕ್ಕೆ ಕುಸಿದಿತ್ತು.

ಬ್ಯಾಂಕ್ಗಳು ಕೋವಿಡ್-19 ಸಾಂಕ್ರಾಮಿಕದ ಬಳಿಕ ಸಾಕಷ್ಟು ತೊಂದರೆ ಅನುಭವಿಸಿವೆ. ಅದರಲ್ಲೂ ದೇಶದ ಜಿಡಿಪಿ ದರವು ಕೊರೊನಾವೈರಸ್ ಆಕ್ರಮಣಕ್ಕೂ ಮುನ್ನ ಹಣಕಾಸು ವರ್ಷ 2016-17 ರಲ್ಲಿ ಶೇಕಡಾ 8 ರಿಂದ ಹಣಕಾಸು ವರ್ಷ 2020-21 ರಲ್ಲಿ ಸುಮಾರು ಶೇಕಡಾ 4ಕ್ಕೆ ಇಳಿದಿದೆ.
ಅದರಲ್ಲೂ ಜನವರಿ 2020 ರಲ್ಲಿ, ಜಿಡಿಪಿ ಬೆಳವಣಿಗೆಯು 42 ವರ್ಷಗಳ ಕನಿಷ್ಠಕ್ಕೆ ಕುಸಿಯಿತು. ಈ ವೇಳೆ ''ಭಾರತದ ಆರ್ಥಿಕತೆಗೆ ಪುಟಿಯುವ ಸಾಮರ್ಥ್ಯವಿದೆ'' ಎಂದು ಪ್ರಧಾನಿ ಮೋದಿ ಹೇಳಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications