ಅಭಿವೃದ್ಧಿ ರೇಸ್ ನಲ್ಲಿ ಚೀನಾ ಹಿಂದಿಕ್ಕಿದ ಭಾರತ
ವಾಷಿಂಗ್ಟನ್, ಜೂ. 12 : ಪ್ರಸಕ್ತ ವರ್ಷ ಭಾರತದ ಆರ್ಥಿಕ ಅಭಿವೃದ್ಧಿ ದರ ಚೀನಾವನ್ನು ಹಿಂದಿಕ್ಕಿದೆ. ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಗೆ ಬರಲಿದ್ದು ಈ ಶೇ 7.5ರಷ್ಟು ಜಿಡಿಪಿ ಸಾಧನೆಯಾಗಲಿದೆ.
ಈ ವರ್ಷದ ಅಂತ್ಯಕ್ಕೆ ಭಾರತ ವಿಶ್ವ ಬ್ಯಾಂಕ್ನ ಪ್ರಮುಖ ಅರ್ಥ ವ್ಯವಸ್ಥೆಗಳ ಪ್ರಗತಿ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್ನ ಹಿರಿಯ ಉಪಾಧ್ಯಕ್ಷ ಕೌಶಿಕ್ ಬಸು ತಿಳಿಸಿದ್ದಾರೆ.[ಚೀನಾ ಹಿಂದಕ್ಕೆ ಹಾಕಿದ್ದು ಹೇಗೆ]

ವಿಶ್ವಬ್ಯಾಂಕ್ ನ ಜಾಗತಿಕ ಆರ್ಥಿಕ ಮುನ್ನೋಟದ (ಜಿಇಪಿ) ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಶೇ. 4.4ರಷ್ಟು ಪ್ರಮಾಣದಲ್ಲಿ ಪ್ರಗತಿ ಕಾಣುವ ಅಂದಾಜಿದೆ. 2016ರಲ್ಲಿ ಇದು ಶೇ. 5.2 ಕ್ಕೆ ಏರಲಿದೆ ಎಂದು ಹೇಳಿದರು.
ಚೀನಾದ ಆರ್ಥಿಕತೆಗೆ ಹೋಲಿಸಿದರೆ ಭಾರತ ಕ್ಷಿಪ್ರ ಬೆಳವಣಿಗೆ ಕಾಣುತ್ತಿದೆ. ಕಚ್ಚಾತೈಲ ಬೆಲೆ ಇಳಿಮುಖ, ಕೇಂದ್ರ ಸರ್ಕಾರದ ಉತ್ತೇಜನಕಾರಿ ನೀತಿಗಳು ಆರ್ಥಿಕ ಅಭಿವೃದ್ಧಿಗೆ ನೆರವಾಗಿದೆ. ದಕ್ಷಿಣ ಏಷ್ಯಾದ ಪ್ರಗತಿ ಉತ್ತಮವಾಗಿದೆ ಎಂದು ತಿಳಿಸಿದರು. [ಎರಡು ವರ್ಷದಲ್ಲೇ ಅತಿಹೆಚ್ಚಿನ ಜಿಡಿಪಿ ಸಾಧನೆ]
ಆದರೆ ವಿವಿಧ ರಾಷ್ಟ್ರಗಳು ಆರ್ಥಿಕ ಕುಸಿತದ ಭೀತಿಯನ್ನು ಎದುರಿಸುತ್ತಿವೆ. ಕಚ್ಚಾ ತೈಲದ ಬೆಲೆ ಇಳಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಡೆದ ಸಾಲದ ಮೇಲಿನ ಬಡ್ಡಿ ಹೆಚ್ಚಳ ಮಾಡಲಾಗುತ್ತದೆ. ಇದು ಹಿನ್ನಡೆಗೆ ಕಾರಣವಾಗಬಹುದು. ಕೆಲ ದೇಶಗಳಲ್ಲಿ ಬಯಲಿಗೆ ಬಂದಿರುವ ಹಗರಣಗಳು ಆರ್ಥಿಕ ಕುಸಿತ ಉಂಟುಮಾಡಲಿವೆ ಎಂದು ವಿಶ್ಲೇಷಣೆ ಮಾಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications