12 ವರ್ಷ ಬಳಿಕ ಪೆಪ್ಸಿಕೋಗೆ 'ಸಿಇಒ' ಇಂದ್ರಾ ನೂಯಿ ಗುಡ್ ಬೈ!
ನ್ಯೂಯಾರ್ಕ್, ಆಗಸ್ಟ್ 06: ತಂಪು ಪಾನೀಯ ಕ್ಷೇತ್ರದ ದಿಗ್ಗಜ ಸಂಸ್ಥೆ ಪೆಪ್ಸಿಕೋದ ಪ್ರಥಮ ಮಹಿಳಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ( ಸಿಇಒ) ಇಂದ್ರಾ ನೂಯಿ ಅವರು ತಮ್ಮ ಸಿಇಒ ಹುದ್ದೆಯನ್ನು ತೊರೆಯುತ್ತಿರುವುದಾಗಿ ಘೋಷಿಸಿದ್ದಾರೆ.
ಚೆನ್ನೈ ಮೂಲದ ಇಂದ್ರಾ ನೂಯಿ ಅವರು 12 ವರ್ಷಗಳ ಬಳಿಕ ಪೆಪ್ಸಿಕೋ ಸಂಸ್ಥೆಯ ಜವಾಬ್ದಾರಿಯನ್ನು ಮತ್ತೊಬ್ಬರಿಗೆ ವಹಿಸುತ್ತಿದ್ದಾರೆ. ಅಕ್ಟೋಬರ್ 03ರಂದು ಸಿಇಒ ಹುದ್ದೆಯಿಂದ ಇಳಿಯಲಿದ್ದಾರೆ.
ಸಂಸ್ಥೆಯ ಅಧ್ಯಕ್ಷ ರಾಮೊನ್ ಲಾಗುರ್ತಾ(54) ಅವರು ನೋಯಿ ಸ್ಥಾನದ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದು ಸಂಸ್ಥೆ ಹೇಳಿದೆ. ಸಿಇಒ ಹುದ್ದೆ ತೊರೆದರೂ ಇಂದ್ರಾ ನೂಯಿ ಅವರು 2019ರ ವರ್ಷಾಂತ್ಯದ ತನಕ ಸಂಸ್ಥೆಯ ಚೇರ್ಮನ್ ಆಗಿ ಮುಂದುವರೆಯಲಿದ್ದಾರೆ.

ಚೆನ್ನೈನಲ್ಲಿ ಹುಟ್ಟಿದ ಇಂದ್ರಾ ಕೃಷ್ಣಮೂರ್ತಿ ಅವರು ಸದ್ಯ ಕನೆಕ್ಟಿಕಿಟ್ ನ ಗ್ರೀನ್ ವಿಚ್ ನ ನಿವಾಸಿ, ಅಮೆರಿಕದ ಪೌರತ್ವ ಹೊಂದಿರುವ ಇಂದ್ರಾ, 2014ರಲ್ಲಿ ವಿಶ್ವದ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. 2015ರ ಫಾರ್ಚೂನ್ ಪಟ್ಟಿಯಲ್ಲಿ ವಿಶ್ವದ ಎರಡನೇ ಪ್ರಭಾವಿ ಮಹಿಳೆ ಎಂಬ ಗೌರವಕ್ಕೆ ಪಾತ್ರರಾದರು.
Today is a day of mixed emotions for me. @PepsiCo has been my life for 24 years & part of my heart will always remain here. I'm proud of what we've done & excited for the future. I believe PepsiCo’s best days are yet to come. https://t.co/sSNfPgVK6W pic.twitter.com/170vIBHY5R
— Indra Nooyi (@IndraNooyi) August 6, 2018
ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ ಪದವೀಧರೆ, ಐಐಎಂ, ಕೋಲ್ಕತ್ತಾದಿಂದ ಎಂಬಿಎ, ಯೇಲ್ ವಿವಿಯಿಂದ ಎಂಎಸ್ ಪದವಿ ಪಡೆದುಕೊಂಡಿದ್ದಾರೆ.
1994ರಲ್ಲಿ ಹಿರಿಯ ಉಪಾಧ್ಯಕ್ಷೆಯಾಗಿ ಯೋಜನೆ ವಿಭಾಗದಲ್ಲಿ ಸಂಸ್ಥೆಗೆ ಸೇರಿ, ಸಿಇಒ ಆಗಿ ಸಂಸ್ಥೆಯನ್ನು ವಿಸ್ತರಿಸಿದರು. ಜೂನ್ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ ಸ್ವತಂತ್ರ ಮಹಿಳಾ ನಿರ್ದೇಶಕಿಯಾಗಿ ಕೂಡಾ ಗೌರವ ಪಡೆದುಕೊಂಡರು.
ಪೌಷ್ಟಿಕ ಆಹಾರ, ಪರಿಸರ ಸಂರಕ್ಷಣೆಯತ್ತ ಸಂಸ್ಥೆ ಹೆಜ್ಜೆ ಇರಿಸಿದೆ. ಇಂಥ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ್ದು ನನ್ನ ಪುಣ್ಯ, ನನ್ನ ಮನದಲ್ಲಿ ಮಿಶ್ರ ಭಾವನೆಗಳಿವೆ. 24ವರ್ಷಗಳ ಕಾಲ ಇಲ್ಲಿ ಕಳೆದಿದ್ದೇನೆ. ನನ್ನ ಹೃದಯ ಇಲ್ಲೆ ಇರುತ್ತದೆ. ಪೆಪ್ಸಿಕೋ ಸಂಸ್ಥೆ ಇನ್ನೂ ಉತ್ತಮ ಫಲಿತಾಂಶಗಳನ್ನು ನೀಡುವ ನಿರೀಕ್ಷೆಯಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications