ಇನ್ಫೋಸಿಸ್ ಫೌಂಡೇಶನ್ ಆರೋಹಣ್ ಪ್ರಶಸ್ತಿ ಪ್ರಕಟಿಸಿದ ಸುಧಾಮೂರ್ತಿ
ಬೆಂಗಳೂರು, ಫೆಬ್ರವರಿ 19: ಇನ್ಫೋಸಿಸ್ನ ಸಿಎಸ್ಆರ್ ಅಂಗಸಂಸ್ಥೆ ಮತ್ತು ಜನೋಪಕಾರಿ ಸಂಸ್ಥೆಯಾಗಿರುವ ಇನ್ಫೋಸಿಸ್ ಫೌಂಡೇಶನ್ ತನ್ನ ಎರಡನೇ ಆವೃತ್ತಿಯ ಆರೋಹಣ ಸೋಶಿಯಲ್ ಇನ್ನೋವೇಷನ್ ಅವಾರ್ಡ್ಸ್ ಅನ್ನು ಪ್ರಕಟಿಸಿದೆ. ಈ ಪ್ರಶಸ್ತಿಗಳನ್ನು 2018 ರಲ್ಲಿ ಆರಂಭಿಸಲಾಗಿದ್ದು, ದೇಶಾದ್ಯಂತ ನಿರ್ಗತಿಕರಿಗೆ ಮತ್ತು ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಬೆಂಬಲ ನೀಡುವಂತಹ ಆವಿಷ್ಕಾರಕ ಪರಿಹಾರಗಳನ್ನು ಸೃಷ್ಟಿ ಮಾಡುವ ವ್ಯಕ್ತಿಗಳು, ತಂಡಗಳು ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಈ ವರ್ಷ ನಾಲ್ಕು ವಿಭಾಗಗಳಾದ ಆರೋಗ್ಯ ರಕ್ಷಣೆ, ಗ್ರಾಮೀಣಾಭಿವೃದ್ಧಿ, ನಿರ್ಗತಿಕರ ಆರೈಕೆ ಮತ್ತು ಸುಸ್ಥಿರತೆಯಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಈ ಬಾರಿ ಪ್ರಶಸ್ತಿಗಾಗಿ 1,700 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಅದರಲ್ಲಿ ಅತ್ಯುತ್ತಮವಾದ ಪರಿಹಾರಗಳನ್ನು ಸೃಷ್ಟಿ ಮಾಡಿದವರನ್ನು ಶಾರ್ಟ್ಲೀಸ್ಟ್ ಮಾಡಲಾಗಿದೆ. ಈ ಪ್ರಶಸ್ತಿಗಳಿಗೆ ಅರ್ಹರನ್ನು ಆಯ್ಕೆ ಮಾಡಿದ ತೀರ್ಪುಗಾರರ ಮಂಡಳಿಯಲ್ಲಿ ಈ ಕೆಳಕಂಡವರು ಇದ್ದರು:-
*ಆಟಿಕೆ ಸಂಶೋಧಕ ಮತ್ತು ವಿಜ್ಞಾನ ಪರಿಣತರಾದ ಪದ್ಮಶ್ರೀ ಅರವಿಂದ ಗುಪ್ತಾ
* ಹನಿಬೀ ನೆಟ್ವರ್ಕ್ನ ಸಂಸ್ಥಾಪಕರು ಮತ್ತು ಬೇರು ಮಟ್ಟದ ಆವಿಷ್ಕಾರಗಳಲ್ಲಿ ನಿಷ್ಣಾತರಾಗಿರುವ ಐಐಎಂ ಅಹ್ಮದಾಬಾದ್ನ ಉಪನ್ಯಾಸಕರಾದ ಪದ್ಮಶ್ರೀ ಪ್ರೊಫೆಸರ್ ಅನಿಲ್ ಗುಪ್ತಾ
* ಐಐಎಂ ಬೆಂಗಳೂರಿನ ನಿವೃತ್ತ ಡೀನ್ ಪ್ರೊಫೆಸರ್ ತ್ರಿಲೋಚನ್ ಶಾಸ್ತ್ರಿ
* ಐಐಟಿ ಹೈದ್ರಾಬಾದ್ನ ಟೀಚಿಂಗ್ ಲರ್ನಿಂಗ್ ಸೆಂಟರ್ ನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಪ್ರೊಫೆಸರ್ ಜಿವಿವಿ ಶರ್ಮಾ
* ಇನ್ಫೋಸಿಸ್ನ ಮುಖ್ಯ ಮಾರುಕಟ್ಟೆ ಅಧಿಕಾರಿ ಸುಮೀತ್ ವಿರ್ಮಾನಿ
* ಸಮಾಜ ಸೇವಕಿ ಮತ್ತು ಖ್ಯಾತ ಬರಹಗಾರ್ತಿಯೂ ಆಗಿರುವ ಸಮಾಜಸೇವಕಿ ಇನ್ಫೋಸಿಸ್ ಫೌಂಡೇಶನ್ನ ಅಧ್ಯಕ್ಷೆ ಸುಧಾ ಮೂರ್ತಿ.

ಆರೋಹಣ್ ಸೋಶಿಯಲ್ ಇನ್ನೋವೇಶನ್ ಅವಾರ್ಡ್ಸ್ ವಿಜೇತ
ಆರೋಹಣ್ ಸೋಶಿಯಲ್ ಇನ್ನೋವೇಶನ್ ಅವಾರ್ಡ್ಸ್ ವಿಜೇತರು
*ಚಿನ್ನದ ಪ್ರಶಸ್ತಿ: ಬಹುಮಾನದ ಮೊತ್ತ 20 ಲಕ್ಷ ರೂಪಾಯಿ
* ಆರೋಗ್ಯ ರಕ್ಷಣೆ: ಕೊಲ್ಕತ್ತಾದ ಪಾರ್ಥ ಪ್ರತಿಮ್ ದಾಸ್ ಮಹಾಪಾತ್ರ. ಇವರು ಹ್ಯೂಮನ್ ಬಿಲಿರುಬಿನ್, ಆಕ್ಸಿಜನ್ ಸ್ಯಾಚುರೇಷನ್ ಮತ್ತು ಹಿಮೋಗ್ಲೋಬಿನ್ ಮಟ್ಟವನ್ನು ಮಾನವನ ದೇಹದಿಂದ ರಕ್ತವನ್ನು ತೆಗೆಯದೇ ಮಾಪನ ಮಾಡುವ ನಾನ್-ಇನ್ವೇಸಿವ್, ನಾನ್-ಕಾಂಟ್ಯಾಕ್ಟ್ ರೋಬಸ್ಟ್ ಹ್ಯಾಂಡ್-ಹೆಲ್ಡ್ ಪೋರ್ಟೇಬಲ್ ಡಿವೈಸ್ ಅನ್ನು ಅಭಿವೃದ್ಧಿಪಡಿಸಿದ್ದಾರೆ.
* ಆರೋಗ್ಯ ರಕ್ಷಣೆ: ಬೆಂಗಳೂರಿನ ಡಾ.ಬಿನಿತಾ ಎಸ್. ತುಂಗಾ ಮತ್ತು ಡಾ.ರಾಶಬೆಹರಿ ತುಂಗಾ ಅವರು ಸೊಳ್ಳೆ ಕಡಿತದಿಂದ ಆಗುವ ರೋಗಗಳಾದ ಮಲೇರಿಯಾ, ಚಿಕುನ್ಗುನ್ಯಾ ಮತ್ತು ಡೆಂಘೆಯನ್ನು ಪರಿಣಾಮಕಾರಿಯಾಗಿ ತಪ್ಪಿಸುವ ಮತ್ತು ಆರಂಭಿಕ ಹಂತದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸುವ ಸಿಂಗಲ್ ಡಿವೈಸ್ ಅನ್ನು ಅಭಿವೃದ್ಧಿಪಡಿಸಿದ್ದಾರೆ.
* ಆರೋಗ್ಯ ರಕ್ಷಣೆ: ಮುಂಬೈನ ತುಮಾಸ್ (ಫೌಂಡೇಷನ್ ಫಾರ್ ಟ್ಯುಬರ್ಕ್ಯುಲೋಸಿಸ್, ಮಾಲ್ನ್ಯೂಟ್ರಿಶನ್ ಅಂಡ್ ಏಡ್ಸ್) ಮೂತ್ರದ ಮೂಲಕ ಟಿಬಿಯನ್ನು ಪತ್ತೆ ಮಾಡುವ ಪಾಯಿಂಟ್-ಆಫ್-ಕೇರ್, ಯೂಸರ್-ಫ್ರೆಂಡ್ಲಿ, ಕಾಸ್ಟ್-ಇಫೆಕ್ಟಿವ್ ಮತ್ತು ಕ್ಷಿಪ್ರ ಪತ್ತೆ ಮಾಡುವ ಡಿವೈಸ್ ಅನ್ನು ಅಭಿವೃದ್ಧಿಪಡಿಸಿದ್ದಾರೆ.

ರೋಬೋಟ್ ಮ್ಯಾನ್ಹೋಲ್
ಸುಸ್ಥಿರತೆ: ಕೇರಳದ ರಶೀದ್ ಕೆ, ವಿಮಲ್ ಗೋವಿಂದ್ ಎಂಕೆ ಮತ್ತು ನಿಖಿಲ್ ಎನ್ಪಿ ಅವರು ''ಬ್ಯಾಂಡಿಕೂಟ್'' ಎಂಬ ವಿಶ್ವದ ಮೊದಲ ರೋಬೋಟ್ ಮ್ಯಾನ್ಹೋಲ್ ಸ್ವಚ್ಛಗೊಳಿಸುವ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಮೂಲಕ ಮ್ಯಾನ್ಹೋಲ್ ಸ್ವಚ್ಛತೆಗೆ ಮಾನವನ ಬಳಕೆಯನ್ನು ನಿರ್ಮೂಲನೆ ಮಾಡಿ ಸಂಭವಿಸಬಹುದಾದ ಅನಾಹುತಗಳಿಂದ ಮಾನವನನ್ನು ರಕ್ಷಿಸಬಹುದಾಗಿದೆ.
· ನಿರ್ಗತಿಕರ ರಕ್ಷಣೆ: ಚೆನ್ನೈನ ರಾಮಲಿಂಗಂ ಪಿಎಲ್ ಅವರು ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವವರು ಮತ್ತು ವಿಕಲಚೇತನ ಮಕ್ಕಳಿಗೆಂದೇ ಕೈಗೆಟುಕುವ ದರದ ಸ್ಟಾಂಡಿಂಗ್ ವ್ಹೀಲ್ಚೇರ್ ಅನ್ನು ಅಭಿವೃದ್ಧಿಪಡಿಸಿದ್ದಾರೆ.

ರಜತ ಪ್ರಶಸ್ತಿ ವಿಜೇತರು
- ರಜತ ಪ್ರಶಸ್ತಿ: ಬಹುಮಾನದ ಮೊತ್ತ 10 ಲಕ್ಷ ರೂಪಾಯಿಗಳು
· ಆರೋಗ್ಯ ರಕ್ಷಣೆ: ಬೆಂಗಳೂರಿನ ನಿತೇಶ್ ಕುಮಾರ್ ಜಾಂಗೀರ್ ಅವರು ನವಜಾತ ಶಿಶುಗಳಿಗೆ ಉಸಿರಾಟ ವ್ಯವಸ್ಥೆ ಕಲ್ಪಿಸುವ ಸಾನ್ಸ್ ಎಂಬ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಇದಕ್ಕೆ ಅತ್ಯಂತ ಕಡಿಮೆ ಮೂಲಸೌಕರ್ಯದ ಅಗತ್ಯವಿದೆ.
· ಆರೋಗ್ಯ ರಕ್ಷಣೆ: ನವದೆಹಲಿಯ ಅನೀಶ್ ಕರ್ಮ ಅವರು ಮೆಕ್ಯಾನಿಕಲಿ ಆ್ಯಕ್ಚುವೇಟೆಡ್ ಸ್ಟಾನ್ಸ್ ಕಂಟ್ರೋಲ್ಡ್ ನೀ ಆ್ಯಂಕಲ್ ಫೂಟ್ ಆರ್ಥೋಟಿಕ್ (ಎಂಎಸ್ಎಸ್ಸಿ-ಕೆಎಎಫ್ಒ) ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಡಿವೈಸ್ ಹಾಲಿ ಇರುವ ಆರ್ಥೋಟಿಕ್ ಕ್ಯಾಲಿಪರ್ಸ್ಗೆ ಪರ್ಯಾಯವಾಗಿದೆ.
· ಆರೋಗ್ಯ ರಕ್ಷಣೆ: ಬೆಂಗಳೂರಿನ ರಾಜಲಕ್ಷ್ಮಿ ಬೊರ್ಥಕೂರು ಅವರು ಇಂಟರ್ನೆಟ್ ಆಫ್ ತಿಂಗ್ಸ್(ಐಒಟಿ)/ಆರ್ಟಿಫಿಶಿಯಲ್ ಇಂಟಲಿಜೆನ್ಸ್(ಎಐ) ಎಂಬ ಸ್ಮಾರ್ಟ್ ವೇರೇಬಲ್ ಡಿವೈಸ್ ಅನ್ನು ಆವಿಷ್ಕಾರ ಮಾಡಿದ್ದಾರೆ. ಇದು ಅಪಸ್ಮಾರವನ್ನು ತಡೆಯುತ್ತದೆ ಮತ್ತು ಮಾನಸಿಕ ಆರೋಗ್ಯದ ಸ್ಥಿತಿಗತಿಯನ್ನು ಗುರುತಿಸಲು ನೆರವಾಗುತ್ತದೆ.
· ಆರೋಗ್ಯ ರಕ್ಷಣೆ: ಗಂಟಲು ಕ್ಯಾನ್ಸರ್ನಿಂದ ಧ್ವನಿ ಪೆಟ್ಟಿಗೆಯನ್ನು ಕಳೆದುಕೊಂಡವರಿಗೆ ಕೃತಕ ಧ್ವನಿಪೆಟ್ಟಿಗೆ ಔಮ್ ವಾಯ್ಸ್ ಪ್ರೊಸ್ತೆಸಿಸ್ ಅನ್ನು ಅಭಿವೃದ್ಧಿಪಡಿಸಿರುವ ಬೆಂಗಳೂರಿನ ಡಾ.ವಿಶಾಲ್ ಯುಎಸ್ ರಾವ್ ಮತ್ತು ಶಶಾಂಕ್ ಮಹೇಶ್. ಈ ಕೃತಕ ಧ್ವನಿಪೆಟ್ಟಿಗೆಯಿಂದ ರೋಗಿಗಳು ಮತ್ತೆ ಮಾತನಾಡಲು ಸಾಧ್ಯವಾಗುತ್ತದೆ.

ಫೌಂಡೇಷನ್ನ ಅಧ್ಯಕ್ಷರಾದ ಸುಧಾ ಮೂರ್ತಿ
ಗ್ರಾಮೀಣಾಭಿವೃದ್ಧಿ: ಮಧ್ಯಪ್ರದೇಶದ ರೋಹಿತ್ ಪಟೇಲ್ ಕಡಿಮೆ ವೆಚ್ಚದಲ್ಲಿ ಈರುಳ್ಳಿ ಸಂಗ್ರಹ ಮಾಡುವ ಪರಿಹಾರವನ್ನು ಅಭಿವೃದ್ಧಿಪಡಿಸಿದ್ದಾರೆ. ಇದರಿಂದ ಮಳೆಗಾಲದಲ್ಲಿ ಈರುಳ್ಳಿ ಹಾಳಾಗುವುದಿಲ್ಲ.
ಪ್ರಶಸ್ತಿ ವಿಜೇತರರನ್ನು ಸನ್ಮಾನಿಸಿ ಮಾತನಾಡಿದ ಇನ್ಫೋಸಿಸ್ ಫೌಂಡೇಷನ್ನ ಅಧ್ಯಕ್ಷರಾದ ಸುಧಾ ಮೂರ್ತಿ ಅವರು, "ಆರೋಹಣ್ ಸೋಶಿಯಲ್ ಇನ್ನೋವೇಶನ್ ಅವಾಡ್ರ್ಸ್ನ ಎರಡನೇ ಆವೃತ್ತಿ ಇದಾಗಿದೆ ಮತ್ತು ಜನರು ತಾವು ಆವಿಷ್ಕರಿಸಿದ ಆವಿಷ್ಕಾರಗಳನ್ನು ಪ್ರದರ್ಶಿಸಲು ಉತ್ತೇಜಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿಗಳನ್ನು ನೀಡುತ್ತಿದ್ದೇವೆ. ಇಂತಹ ಆವಿಷ್ಕಾರಗಳ ಮೂಲಕ ದೇಶ ಇಂದು ಎದುರಿಸುತ್ತಿರುವ ಸಾಮಾಜಿಕ ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮುನ್ನಡಿ ಇಡಲು ಈ ಪ್ರಶಸ್ತಿ ಸಹಕಾರಿಯಾಗುತ್ತದೆ.
ಇಂತಹ ಆವಿಷ್ಕಾರಗಳು ಉತ್ತಮ, ಕಡಿಮೆ ವೆಚ್ಚ ಮತ್ತು ಸುಸ್ಥಿರ ಪರಿಹಾರಗಳನ್ನು ಒದಗಿಸುತ್ತವೆ ಎಂಬ ವಿಶ್ವಾಸ ನಮಗಿದೆ. ಈ ದಿಸೆಯಲ್ಲಿ ಇಂದು ಪ್ರಶಸ್ತಿ ಪಡೆದಿರುವವರು ಭವಿಷ್ಯದ ಭಾರತವನ್ನು ಮತ್ತಷ್ಟು ಉಜ್ವಲವಾಗುವಂತೆ ಮಾಡುವ ನಿಟ್ಟಿನಲ್ಲಿ ಹಗಲಿರುಳೂ ಶ್ರಮಿಸಿ ಪ್ರಶಸ್ತಿಗೆ ಭಾಜನರಾಗಿರುವವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಮತ್ತು ಮುಂಬರುವ ದಿನಗಳಲ್ಲಿ ಈ ಕಾರ್ಯಕ್ರಮದಿಂದ ಪ್ರೇರೇಪಿತರಾಗಿ ಮತ್ತಷ್ಟು ಜನರು ಆವಿಷ್ಕಾರದತ್ತ ಗಮನಹರಿಸುತ್ತಾರೆ ಎಂಬ ವಿಶ್ವಾಸ ನನಗಿದೆ" ಎಂದು ತಿಳಿಸಿದರು.
ಇದಲ್ಲದೇ ಪ್ರಶಸ್ತಿ ವಿಜೇತರಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಚಿನ್ನದ ಪ್ರಶಸ್ತಿಯನ್ನು ಗಳಿಸಿರುವ ವಿಜೇತರಿಗೆ ಐಐಟಿ ಹೈದ್ರಾಬಾದ್ನಲ್ಲಿ 8 ವಾರಗಳ ಕಾಲದ ರೆಸಿಡೆನ್ಷಿಯಲ್ ಮೆಂಟರ್ಶಿಪ್ಗೂ ಅವಕಾಶ ಕಲ್ಪಿಸಲಾಗುತ್ತಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications