ನಾರಾಯಣಮೂರ್ತಿ ಮನವಿ ತಿರಸ್ಕರಿಸಿದ ಇನ್ಫೋಸಿಸ್ ಆಡಳಿತ ಮಂಡಳಿ
ಇಸ್ರೇಲ್ ಸಂಸ್ಥೆ ಖರೀದಿಯ ವಿಚಾರದಲ್ಲಿನ ತನಿಖಾ ವರದಿಯನ್ನು ಬಹಿರಂಗಗೊಳಿಸಬೇಕು ಎನ್ನುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮನವಿಯನ್ನು ಸಂಸ್ಥೆಯ ಆಡಳಿತ ಮಂಡಳಿ ತಿರಸ್ಕರಿಸಿದೆ.
ಬೆಂಗಳೂರು, ಆ 4: ಇಸ್ರೇಲ್ ಸಂಸ್ಥೆ ಖರೀದಿಯ ವಿಚಾರದಲ್ಲಿನ ತನಿಖಾ ವರದಿಯನ್ನು ಬಹಿರಂಗಗೊಳಿಸಬೇಕು ಎನ್ನುವ ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರ ಮನವಿಯನ್ನು ಸಂಸ್ಥೆಯ ಆಡಳಿತ ಮಂಡಳಿ ತಿರಸ್ಕರಿಸಿದೆ.
ಇಸ್ರೇಲ್ ಮೂಲದ ಪನಯಾ ಸಂಸ್ಥೆಯನ್ನು ಇನ್ಫೋಸಿಸ್ 1,300 ಕೋಟಿ ರೂಪಾಯಿಗೆ ಖರೀದಿಸಿತ್ತು. ಈ ವ್ಯವಹಾರದಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿತ್ತು ಎಂದು ಅನಾಮಧೇಯ ವ್ಯಕ್ತಿಗಳು ಷೇರು ಪೇಟೆ ನಿಯಂತ್ರಣ ಮಂಡಳಿಗೆ ಪತ್ರ ಬರೆದಿದ್ದರು.
ಈ ಪತ್ರ ಬಹಿರಂಗವಾಗುತ್ತಿದ್ದಂತೇ ಇನ್ಫೋಸಿಸ್ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿತ್ತು. ತನಿಖಾ ವರದಿಯಲ್ಲಿ ಇಸ್ರೇಲ್ ಕಂಪೆನಿ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ, ಈ ಡೀಲ್ ಪಾರದರ್ಶಕವಾಗಿದೆ ಎನ್ನುವ ವರದಿ ಬಂದಿತ್ತು.

ವರದಿಯಲ್ಲಿನ ಅಂಶಗಳನ್ನು ಬಹಿರಂಗಗೊಳಿಸಬೇಕೆಂದು ನಾರಾಯಣಮೂರ್ತಿ ಆಡಳಿತ ಮಂಡಳಿಗೆ ಮೂರು ವಾರದ ಹಿಂದೆ ಪತ್ರ ಬರೆದಿದ್ದರು. ಮೂರ್ತಿ ಮನವಿಯನ್ನು ಇನ್ಫೋಸಿಸ್ ತಿರಸ್ಕರಿಸುವ ಮೂಲಕ, ಸಂಸ್ಥೆಯಲ್ಲಿನ ಆಡಳಿತ ಮಂಡಳಿಯ ಕಲಹ ಮತ್ತೆ ಬಹಿರಂಗವಾಗಿದೆ.
ವೈಯಕ್ತಿಕ ಹಾಗೂ ಔದ್ಯೋಗಿಕ ಜೀವನದಲ್ಲೇ ಇನ್ಫೋಸಿಸ್ ಅಧ್ಯಕ್ಷ ಸ್ಥಾನ ತ್ಯಜಿಸಿದ್ದು ತುಂಬ ವಿಷಾದಕರವಾದ ನಿರ್ಧಾರ. ಅಧ್ಯಕ್ಷ ಸ್ಥಾನದಿಂದ 2014ರಲ್ಲಿ ಕೆಳಗೆ ಇಳಿಯುವಾಗ ಸಹ ಸಂಸ್ಥಾಪಕರ ಮಾತು ಕೇಳಬೇಕಾಗಿತ್ತು. ಅದು ನನ್ನ ಜೀವನದಲ್ಲಿನ ಅತಿ ದೊಡ್ಡ ವಿಷಾದದ ನಿರ್ಧಾರ ಎಂದು ಎನ್ ಆರ್ ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದನು ಸ್ಮರಿಸಿಕೊಳ್ಳಬಹುದಾಗಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications